Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಎಸ್ಕೆಎಸೆಸ್ಸೆಫ್‌ನಿಂದ...

ಮಂಗಳೂರು: ಎಸ್ಕೆಎಸೆಸ್ಸೆಫ್‌ನಿಂದ ಸೌಹಾರ್ದ ಜಾಥಾ-ಮಾನವ ಸರಪಳಿ-ಸಮಾವೇಶ

26 Jan 2023 11:37 PM IST
share
ಮಂಗಳೂರು: ಎಸ್ಕೆಎಸೆಸ್ಸೆಫ್‌ನಿಂದ ಸೌಹಾರ್ದ ಜಾಥಾ-ಮಾನವ ಸರಪಳಿ-ಸಮಾವೇಶ

ಮಂಗಳೂರು: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಎಸ್ಕೆಎಸೆಸ್ಸೆಫ್ ದ.ಕ. ವೆಸ್ಟ್ ಜಿಲ್ಲೆಯ ವತಿಯಿಂದ ‘ರಾಷ್ಟ್ರ ರಕ್ಷಣೆಗೆ ಸೌಹಾರ್ದದ ಸಂಕಲ್ಪ’ ಎಂಬ ಧ್ಯೇಯವಾಕ್ಯದಡಿ ಗುರುವಾರ ನಗರದ ಪಡೀಲ್ ಜಂಕ್ಷನ್‌ನಿಂದ ಆರಂಭಗೊಂಡ ಸೌಹಾರ್ದ ಜಾಥಾವು ಅಡ್ಯಾರ್ ಕಣ್ಣೂರ್‌ನಲ್ಲಿ ಸಮಾಪನಗೊಂಡಿತು.

ಬಳಿಕ ಅಡ್ಯಾರ್ ಕಣ್ಣೂರಿನ ಶಂಶುಲ್ ಉಲಮಾ ನಗರದ ಸೀಝರ್ ಮೈದಾನದಲ್ಲಿ ನಡೆದ ಸಮಾವೇಶವನ್ನು ಉಳ್ಳಾಲ ಸೈಯದ್ ಮದನಿ ಅರಬಿಕ್ ಕಾಲೇಜಿನ ಪ್ರಾಂಶುಪಾಲ ಉಸ್ಮಾನ್ ಫೈಝಿ ತೋಡಾರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಡಾ. ಬಿ. ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿವೆ. ಆದರೆ ಇತ್ತೀಚಿನ ಕೆಲವು ವರ್ಷಗಳಲ್ಲಿ ದೇಶದ ಜನತೆಗೆ ಸಮಾನ ಅವಕಾಶ ಸಿಗದಿರುವ ಬಗ್ಗೆ ಖೇದವಿದೆ. ಮುಂದಿನ ದಿನಗಳಲ್ಲಾದರೂ ಎಲ್ಲರನ್ನೂ ಸಮಾನವಾಗಿ ಕಾಣುವ ಆಡಳಿತ ವ್ಯವಸ್ಥೆ ಜಾರಿಗೆ ಬರಲಿ ಎಂದು ಆಶಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರೆ.ಫಾ. ರೂಪೇಶ್ ಮಾಡ್ತಾ ಮಾತನಾಡಿ, ದೇಶದ ಕೆಲವೆಡೆ ಅಹಿತಕರ ಘಟನೆಗಳು, ಅಶಾಂತಿ ಸೃಷ್ಟಿಸುವ ಪ್ರಯತ್ನಗಳು ನಡೆದರೂ ಕೂಡ ಸಾಮರಸ್ಯದ ಹೃದಯಗಳು ಕೂಡ ಇವೆ ಎಂಬುದಕ್ಕೆ ಈ ಸಮಾವೇಶ ಸಾಕ್ಷಿಯಾಗಿದೆ. ಸಾಮರಸ್ಯವೇ ದೇಶದ ಸೌಂದರ್ಯವಾಗಿದೆ. ಅದಕ್ಕೆ ಪೂರಕವಾಗಿ ನಡೆದ ಈ ಮಾನವ ಸರಪಳಿಯು ಮಾನವತೆಯ ಸರಪಳಿಯಾಗಿ ಮಾರ್ಪಾಡಾಗಲಿ ಎಂದರು.

ಎಸ್ಕೆಎಸೆಸ್ಸೆಫ್ ದ.ಕ. ಜಿಲ್ಲಾಧ್ಯಕ್ಷ ಸೈಯದ್ ಅಮೀರ್ ತಂಙಳ್ ಕಿನ್ಯ ಅಧ್ಯಕ್ಷತೆ ವಹಿಸಿದ್ದರು. ಸೈಯದ್ ಹುಸೈನ್ ಬಾಅಲವಿ ತಂಳ್ ದುಆಗೈದರು. ಮುನೀರ್ ಹುದವಿ ವೆಳ್ಳಯಿಲ್, ನಹೀಂ ಫೈಝಿ ಮುಕ್ವೆ, ಅಬೂಬಕರ್ ರಿಯಾಝ್ ರಹ್ಮಾನಿ ಮುಖ್ಯ ಭಾಷಣಗೈದರು.

‘ಮಾನವ ಸರಪಳಿ’ಯೊಂದಿಗೆ ಎಸ್ಕೆಎಸೆಸ್ಸೆಫ್ ಮಂಗಳೂರು ವಲಯ ಅಧ್ಯಕ್ಷ ಎ.ಕೆ.ಅಬ್ದುಲ್ ಖಾದರ್ ಕಣ್ಣೂರು ಪ್ರತಿಜ್ಞಾವಿಧಿ ಬೋಧಿಸಿದರು. ಅನ್ಸಾರುಲ್ ಹುದಾ ದರ್ಸ್ ವಿದ್ಯಾರ್ಥಿಗಳು ರಾಷ್ಟ್ರಗೀತೆ ಮತ್ತು ಐಕ್ಯತಾ ಗಾನ ಹಾಡಿದರು. ‘ಹರಕೆಯ ಫಲ’ ಮತ್ತು ‘ಕ್ಷಮೆಯ ಪ್ರತಿಫಲ’ ಎಂಬ ಎರಡು ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು.

ಸ್ವಾಗತ ಸಮಿತಿಯ ಜನರಲ್ ಕನ್ವೀನರ್ ಹಾರಿಸ್ ಕುದ್ರೋಳಿ ಸ್ವಾಗತಿಸಿದರು. ವೇದಿಕೆಯಲ್ಲಿ ಎಸ್ಕೆಎಸೆಸ್ಸೆಫ್ ರಾಜ್ಯಾಧ್ಯಕ್ಷ ರಫೀಕ್ ಹುದವಿ ಕೋಲಾರಿ, ಸೈಯದ್ ಇಬ್ರಾಹೀಂ ಬಾತಿಶ್ ತಂಙಳ್ ಆನೆಕಲ್ಲ್, ಕಾಸಿಂ ದಾರಿಮಿ, ಇಸಾಕ್ ಫೈಝಿ, ಹಸನಬ್ಬ ಬುಖಾರಿ, ಸಿದ್ದೀಕ್ ಅಬ್ದುಲ್ ಖಾದರ್, ಸ್ವದಖತುಲ್ಲಾ ಫೈಝಿ, ಅಬ್ಬಾಸ್ ದಾರಿಮಿ, ಫಕೀರಬ್ಬ ಮಾಸ್ಟರ್, ಅಬ್ದುಲ್ ರಹ್ಮಾನ್ ನಸೀಮಾ ಬೀಡಿ, ಮುಹಮ್ಮದ್ ಅಶೋಕ್ ಬೀಡಿ, ರಮ್ಲಾನ್ ಮಾರಿಪಳ್ಳ, ನೌಶಾದ್ ಫೈಝಿ ಕಣ್ಣೂರು, ಇಫ್ತಿಕಾರ್ ದುಬೈ, ಬದ್ರುದ್ದೀನ್ ಕುಕ್ಕಾಜೆ, ಆರೀಫ್ ಕಮ್ಮಾಜೆ, ಎಂ.ಎಚ್. ಮೊಯ್ದಿನ್ ಹಾಜಿ, ಶಾಹುಲ್ ಹಮೀದ್ ಸೂರಿಂಜೆ, ಆಸೀಫ್ ಅಬ್ದುಲ್ಲಾ, ಇಮ್ತಿಯಾಝ್ ಇಡ್ಯ, ಫಾರೂಕ್ ದಾರಿಮಿ, ಸಿತಾರ್ ಮಜೀದ್ ಹಾಜಿ, ಮೂಸಾ ಕುದ್ದುಪದವು, ಅಬೂಸ್ವಾಲಿಹ್ ಫೈಝಿ, ಮಜೀದ್ ದಾರಿಮಿ, ಹಮೀದ್ ಕಣ್ಣೂರು ಟ್ಯಾಲೆಂಟ್, ನಝೀರ್ ವಳಚ್ಚಿಲ್, ಮುಸ್ತಫಾ ಕಟ್ಟದಪಡ್ಪು, ಇರ್ಫಾನ್ ಎ.ಎಚ್, ಅಬ್ದುಲ್ ಖಾದರ್ ಕಣ್ಣೂರು, ಮುಹಮ್ಮದ್ ಶರೀಫ್, ಕೆ.ಎಸ್. ಹಮೀದ್ ಹಾಜಿ ಕಣ್ಣೂರು, ಅಬ್ದುಲ್ ರಹ್ಮಾನ್ ಸಿಝರ್, ಡಿ.ಮುಹಮ್ಮದ್, ಉಸ್ಮಾನ್ ಏರ್ ಇಂಡಿಯಾ, ಅಲ್ತಾಫ್ ಡೈಮಂಡ್ ಸ್ಕೂಲ್, ಇಸ್ಮಾಯೀಲ್ ಹಾಜಿ ಉಳಾಯಿಬೆಟ್ಟು, ಹಸನಬ್ಬ ಫರಂಗಿಪೇಟೆ, ಮುನೀರ್ ಬೀಡು ಮತ್ತಿತರರು ಉಪಸ್ಥಿತರಿದ್ದರು.

share
Next Story
X