Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕ ದಿನಕರ ಶೆಟ್ಟಿ, ಬಿಜೆಪಿ ವಿರುದ್ಧವೇ...

ಶಾಸಕ ದಿನಕರ ಶೆಟ್ಟಿ, ಬಿಜೆಪಿ ವಿರುದ್ಧವೇ ತಿರುಗಿ ಬಿದ್ದ ಸಂಘಪರಿವಾರದ ಕಾರ್ಯಕರ್ತರು: ವೀಡಿಯೊ ವೈರಲ್

27 Jan 2023 5:22 PM IST
share
ಶಾಸಕ ದಿನಕರ ಶೆಟ್ಟಿ, ಬಿಜೆಪಿ ವಿರುದ್ಧವೇ ತಿರುಗಿ ಬಿದ್ದ ಸಂಘಪರಿವಾರದ ಕಾರ್ಯಕರ್ತರು: ವೀಡಿಯೊ ವೈರಲ್

ಭಟ್ಕಳ: ಶಾಸಕ ದಿನಕರ ಶೆಟ್ಟಿ, ಬಿಜೆಪಿ ವಿರುದ್ಧವೇ ಸಂಘಪರಿವಾರದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಹೊನ್ನಾವರದ ಶರಾವತಿ ಸರ್ಕಲ್ ನಲ್ಲಿ ಸೇರಿದ ಸಂಘಪರಿವಾರದ ಕಾರ್ಯಕರ್ತರು, ಬಿಜೆಪಿ, ಶಾಸಕ ದಿನಕರ್ ಶೆಟ್ಟಿ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

‘ಕಳೆದ ವಿಧಾನಸಭಾ ಚುನಾವಣೆಗೂ ಪೂರ್ವ ನಡೆದ ಹೊನ್ನಾವರದ ಪರೇಶ್ ಮೇಸ್ತಾನ ಅಕಸ್ಮಿಕ ಸಾವನ್ನು ಕೊಲೆ ಎಂದು ಬಿಂಬಿಸಿ ರಾಜಕೀಯ ಲಾಭ ಪಡೆದ ದಿನಕರ್ ಶೆಟ್ಟಿ ಹಾಗೂ ಬಿಜೆಪಿ ಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಸಂಘಪರಿವಾರದ ಕಲಾರ್ಯಕರ್ತರು, ‘ನಿಮ್ಮನ್ನು ನಂಬಿ ನಾವು ಇದುವರೆಗೂ ಕೋರ್ಟ್ ಕಚೇರಿಗಳಿಗೆ ಅಲೆಯುತ್ತಿದ್ದೇವೆ. ಹಿಂದುತ್ವ ಎಂದು ನಮ್ಮನ್ನು ಹುರಿದುಂಬಿಸಿ ಕೊನೆಗೆ ನಮ್ಮನ್ನು ಕೈಬಿಟ್ಟಿದ್ದಾರೆ ಎಂದು ಮಾಧ್ಯಮಗಳ ಮುಂದೆ ಅಳಲು ತೋಡಿಕೊಳ್ಳೂತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

‘ಬೆಂಗಳೂರು, ಚೆನ್ನೈ ಮತ್ತಿತರ ದೂರದ ಊರುಗಳಲ್ಲಿ ಕೆಲಸ ಮಾಡುತ್ತಿರುವ ನಾವು ಪ್ರತಿ ತಿಂಗಳು ಕೋರ್ಟ್ ಗೆ ಹಾಜರಾಗುತ್ತಿದ್ದೇವೆ. ನಮಗೆ ಸಂಬಧವಿಲ್ಲದ ಪ್ರಕರಣವೊಂದರಲ್ಲಿ ನಾವು ಇಷ್ಟೊಂದು ತೊಂದರೆಯನ್ನು ಅನುಭವಿಸುತ್ತಿದ್ದೇವೆ. ಪ್ರತಿ ತಿಂಗಳು ಹೊನ್ನಾವರಕ್ಕೆ ಬಂದು ಹೋಗಲು ನಮಗೆ ಯಾರು ದುಡ್ಡುಕೊಡುತ್ತಾರೆ’ ಎಂದು ಸಂಘಪರಿವಾರದ ಕಾರ್ಯಕರ್ತರು ತಮ್ಮ ಅಳಲು ತೋಡಿಕೊಳ್ಳುತ್ತಿರುವುದು ವೀಡಿಯೋದಲ್ಲಿ ಕಂಡು ಬಂದಿದೆ.

‘ಮನೆಯಲ್ಲಿ ತಾಯಿಗೆ ಹುಷಾರಿಲ್ಲ. ತಮ್ಮನಿಗೆ ಪ್ರತಿ ವಾರಕ್ಕೆ ಔಷಧಿ ಬೇಕು. ದುಡಿದು ತಿನ್ನುವವ ನಮ್ಮಂಥವರಿಗೆ ಇದು ಸಾಧ್ಯವೇ? ಈ ದುಡ್ಡು ದಿನಕರ ಶೆಟ್ಟಿ ಕೊಡುತ್ತಾರಾ?’ ಎಂದು ಮತ್ತೊಬ್ಬ ವ್ಯಕ್ತಿ ಪ್ರಶ್ನಿಸುತ್ತಿದ್ದಾರೆ.

'ಹಿಂದುತ್ವ ಎಂದು ನಮ್ಮನ್ನು ಹುರಿದುಂಬಿಸಿ ಕೊನೆಗೆ ನಮ್ಮನ್ನು ಕೈಬಿಟ್ಟಿದ್ದಾರೆ. ಬಿಜೆಪಿ ಅಧಿಕಾರವನ್ನು ಅನುಭವಿಸಿ ನಮಗೆ ಏನು ಮಾಡಿದ್ದೀರಿ? ನಿಮಗೆ ಬೇಕಾದವರ ಕೇಸ್ ಗಳನ್ನು ವಜಾ ಮಾಡಿಸಿಕೊಂಡಿದ್ದೀರಿ, ಆದರೆ, ನಾವು ಮಾತ್ರ ಕೋರ್ಟ್ ಗೆ ಇಂದಿನವರೆಗೂ ಅಲೆದಾಡುತ್ತಿದ್ದೇವೆ. ಒಬ್ಬ ಬಿಜೆಪಿ ನಾಯಕರು ನಮ್ಮ ಸಮಸ್ಯೆಯನ್ನು ಆಲಿಸಲು ಬಂದಿದ್ದೀರಾ?' ಎಂದು ಸಂಘಪರಿವಾರದ ಕಾರ್ಯಕರ್ತರು ಪ್ರಶ್ನಿಸುತ್ತಿರುವುದು ವೀಡಿಯೋದಲ್ಲಿ ಕಂಡು ಬಂದಿದೆ.

'ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ 95 ಮಂದಿ ಮೇಲೆ ದೂರು ದಾಖಲಾಗಿತ್ತು. ಶಾಸಕ ದಿನಕರ ಶೆಟ್ಟಿ ಮೇಲೂ ಸಹ ದೂರು ದಾಖಲಾಗಿತ್ತು. ಆದರೆ, ನಮಗೆ ಓಡಾಡಲು ಸಮಸ್ಯೆಯಾಗುತ್ತಿದೆ. ನಿಮ್ಮನ್ನು ನಂಬಿ ಸಮಸ್ಯೆಗೆ ಸಿಲುಕಿದ್ದೇವೆ. ಕಾಂಗ್ರೆಸ್ ಪಕ್ಷವನ್ನೂ ಸಹ ವಿರೋಧ ಕಟ್ಟಿಕೊಂಡಿದ್ದೇವೆ. ಆದರೆ, ನಮ್ಮ ರಕ್ಷಣೆಗೆ ಮಾತ್ರ ಯಾರೂ ಬರುತ್ತಿಲ್ಲ' ಎಂದು ಸಂಘಪರಿವಾರದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

share
Next Story
X