Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರೀಕ್ಷಾ ಪೆ ಚರ್ಚಾ: ಪರೀಕ್ಷೆಯಲ್ಲಿ...

ಪರೀಕ್ಷಾ ಪೆ ಚರ್ಚಾ: ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಯಾವುದೇ ಶಾರ್ಟ್‌ಕಟ್ ಇಲ್ಲ; ಪ್ರಧಾನಿ‌ ಮೋದಿ

27 Jan 2023 9:49 PM IST
share
ಪರೀಕ್ಷಾ ಪೆ ಚರ್ಚಾ: ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಯಾವುದೇ ಶಾರ್ಟ್‌ಕಟ್ ಇಲ್ಲ; ಪ್ರಧಾನಿ‌ ಮೋದಿ

ಹೊಸದಿಲ್ಲಿ, ಜ. 27: ಮುಂಬರುವ ಮಂಡಳಿ ಪರೀಕ್ಷೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi)ಶುಕ್ರವಾರ ‘ಪರೀಕ್ಷಾ ಪೆ ಚರ್ಚಾ’ದ 6ನೇ ಆವೃತ್ತಿಯ ಸಂದರ್ಭ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಪೋಷಕರೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳೊಂದಿಗಿನ ತನ್ನ ವಾರ್ಷಿಕ ಸಂವಾದದ ಸಂದರ್ಭ ವಿದ್ಯಾರ್ಥಿಗಳು ತಮ್ಮ ಕೆಲಸದ ಮೇಲೆ ಗಮನ ಕೇಂದ್ರೀಕರಿಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಯಾವುದೇ ಶಾರ್ಟ್ ಕಟ್ ಆರಿಸಿಕೊಳ್ಳಬೇಡಿ ಎಂದು ತಿಳಿಸಿದರು. 

ಪಾಲಕರು ತಮ್ಮ ಮಕ್ಕಳಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬೇಕೆಂದು ಒತ್ತಡ ಹೇರಬಾರದು ಎಂದು ಅವರು ಸಲಹೆ ನೀಡಿದರು.ಶಿಕ್ಷಣ ಸಚಿವಾಲಯ ಹೊಸದಿಲ್ಲಿಯ ತಾಲ್ಕಾಟೋರೆ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜಿಸಿತ್ತು. ಭಾರತದಲ್ಲಿ ಜನರು ಸರಾಸರಿ 6 ಗಂಟೆಗಳನ್ನು ಮೊಬೈಲ್ ನಲ್ಲಿ ಕಳೆಯುತ್ತಿದ್ದಾರೆ. ಇದು ಕಳವಳಕಾರಿ ವಿಷಯವಾಗಿದೆ. ದೇವರು ನಮಗೆ ಅಪಾರ ಸಾಮರ್ಥ್ಯದೊಂದಿಗೆ ಸ್ವತಂತ್ರ ಅಸ್ತಿತ್ವ ಹಾಗೂ ವೈಯುಕ್ತಿಕತೆಯನ್ನು ನೀಡಿರುವಾಗ ನಾವು ಮೊಬೈಲ್ಗಳ ಗುಲಾಮರಾಗುವುದು ಏಕೆ ? ಎಂದು ಅವರು ಪ್ರಶ್ನಿಸಿದರು. ನಮ್ಮ ದೇಶದಲ್ಲಿ ಜನರು ಮೊಬೈಲ್ ನೊಂದಿಗೆ 6 ಗಂಟೆಗಳನ್ನು ಕಳೆಯುವುದು ಅರ್ಥ ರಹಿತವಾದುದುದು.

ವಿದ್ಯಾರ್ಥಿಗಳು ಮೊಬೈಲ್ ಅನ್ನು ಬುದ್ದಿವಂತಿಕೆಯಿಂದ ಬಳಸಬೇಕು ಎಂದು ಅವರು ಕಿವಿ ಮಾತು ಹೇಳಿದರು. ಮೊಬೈಲ್ ಬಳಕೆ ಕಡಿಮೆ ಮಾಡಲು ‘‘ತಂತ್ರಜ್ಞಾನ ಉಪವಾಸ’’ ಕೈಗೊಳ್ಳಿ. ಆಗ ನೀವು ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುತ್ತದೆ ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. ತಮ್ಮ ಬುದ್ಧಿವಂತಿಕೆ ಕುರಿತು ನಂಬಿಕೆ ಇರಿಸುವಂತೆ ಅವರು ವಿದ್ಯಾರ್ಥಿಗಳಿಗೆ ಸೂಚಿಸಿದರು. ಮೊಬೈಲ್ ಗಳನ್ನು ಅವಲಂಬಿಸಿ ವಿದ್ಯಾರ್ಥಿಗಳು ಮಾಡುವ ಪ್ರಮುಖ ತಪ್ಪಿನ ಬಗ್ಗೆ ಅವರು ಗಮನ ಸೆಳೆದರು.

ಅಲ್ಲದೆ, ಪರೀಕ್ಷೆ ಸಮಯದಲ್ಲಿ ನಕಲು ಮಾಡುವ ಸಮಸ್ಯೆಯನ್ನು ಪ್ರಧಾನಿ ಅವರು ಪ್ರಸ್ತಾವಿಸಿದರು. ಕೆಲವು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ನಕಲು ಮಾಡಲು ತಮ್ಮ ಸೃಜನಶೀಲತೆಯನ್ನು ಬಳಸುತ್ತಾರೆ. ಆದರೆ, ಅದೇ ವಿದ್ಯಾರ್ಥಿಗಳು ತಮ್ಮ ಸಮಯ ಮತ್ತು ಸೃಜನಶೀಲತೆಯನ್ನು ಉತ್ತಮ ರೀತಿಯಲ್ಲಿ ಬಳಸಿದರೆ ಯಶಸ್ಸಿನ ಎತ್ತರವನ್ನು ಏರುತ್ತಾರೆ ಎಂದು ಮೋದಿ ಹೇಳಿದರು. ತಾಯಿಯಿಂದ ಸಮಯ ನಿರ್ವಹಣೆ ಕಲಿಯಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡಕ್ಕೆ ಮಣಿಯಬಾರದು ಎಂದು ಅವರು ತಿಳಿಸಿದರು. ಸಾಮಾಜಿಕ ಸ್ಥಾನಮಾನಕ್ಕಾಗಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದು ಎಂದು ಅವರು ಪೋಷಕರಿಗೆ ಕಿವಿ ಮಾತು ಹೇಳಿದರು.

ವಿದ್ಯಾರ್ಥಿಗಳ ನಡವಳಿಕೆಯನ್ನು ಸೂಕ್ಷ್ಮವಾಗಿ ಗಮನಿಸುವಂತೆ ಪ್ರಧಾನಿ ಅವರು ಪೋಷಕರು ಹಾಗೂ ಅಧ್ಯಾಪಕರಿಗೆ ಸೂಚಿಸಿದರು. ಅವರನ್ನು ನಿರ್ಬಂಧಿಸಬಾರದು. ಆದರೆ, ನಡವಳಿಕೆಯಲ್ಲಿ ಏನಾದರೂ ಬದಲಾವಣೆ ಆಗಿದೆಯೇ ಎಂಬ ಬಗ್ಗೆ ಗಮನ ಇರಿಸಿ ಎಂದು ಅವರು ಹೇಳಿದರು.

share
Next Story
X