ದ.ಕ. ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಎಸ್ ಡಿಪಿಐ ಕಣಕ್ಕೆ: ಅಫ್ಸರ್ ಕೊಡ್ಲಿಪೇಟೆ
ಮಂಗಳೂರು, ಜ.30: ಮುಂಬರುವ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿಐ ) ತನ್ನ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲಿದೆ ಎಂದು ಪಕ್ಷದ ರಾಜ್ಯಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಾದ ಬಂಟ್ವಾಳಕ್ಕೆ ಇಲ್ಯಾಸ್ ತುಂಬೆ, ಬೆಳ್ತಂಗಡಿಗೆ ಅಕ್ಬರ್, ಮೂಡಬಿದಿರೆಗೆ ಅಲ್ಫಾನ್ಸೊ ಫ್ರಾಂಕೊ, ಪಕ್ಷ ಈಗಾಗಲೇ ಅಭ್ಯರ್ಥಿಯನ್ನು ಘೋಷಿಸಿದೆ. ರಾಜ್ಯದ 100 ವಿಧಾನಸಭಾ ಕ್ಷೇತ್ರ ಗಳಿಗೆ ಪಕ್ಷ ಅಭ್ಯರ್ಥಿ ಗಳನ್ನು ಘೋಷಿಸಲಿದೆ ಎಂದು ಅಫ್ಸರ್ ತಿಳಿಸಿದ್ದಾರೆ.
ಶರಣ್ ಪಂಪ್ ವೆಲ್ ಬಂಧನಕ್ಕೆ ಆಗ್ರಹ: ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತಿಕಾರವಾಗಿ ಫಾಝಿಲ್ ನನ್ನು ಕೊಲೆ ಮಾಡಿರುವುದಾಗಿ ಬಹಿರಂಗವಾಗಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ವಿಎಚ್ ಪಿ ರಾಜ್ಯ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್ ನನ್ನು ತಕ್ಷಣ ಬಂಧಿಸಬೇಕು ಎಂದು ಅಫ್ಸರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿ ಯಲ್ಲಿ ರಾಜ್ಯ ಸಮಿತಿಯ ಸಂಯೋಜಕರಾದ ನವಾಝ್ ಉಳ್ಳಾಲ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು , ರಾಜ್ಯ ಸಮಿತಿಯ ಸಂಯೋಜಕರಾದ ನವಾಝ್ ಉಳ್ಳಾಲ, ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಉಪಸ್ಥಿತರಿದ್ದರು.