Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 15 ಸಾವಿರ ಶಿಕ್ಷಕರ ನೇಮಕಾತಿ ಆಯ್ಕೆಪಟ್ಟಿ...

15 ಸಾವಿರ ಶಿಕ್ಷಕರ ನೇಮಕಾತಿ ಆಯ್ಕೆಪಟ್ಟಿ ರದ್ದುಗೊಳಿಸಿದ ಹೈಕೋರ್ಟ್

30 Jan 2023 9:25 PM IST
share
15 ಸಾವಿರ ಶಿಕ್ಷಕರ ನೇಮಕಾತಿ ಆಯ್ಕೆಪಟ್ಟಿ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು, ಜ.30: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಇತ್ತೀಚೆಗೆ ಅಧಿಸೂಚಿಸಿ ನೇಮಕಾತಿ ಪ್ರಕ್ರಿಯೆ ನಡೆಸಿದ್ದ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಶಿಕ್ಷಕರ ನೇಮಕಾತಿಯಲ್ಲಿ 1:2 ಆಯ್ಕೆಪಟ್ಟಿಯಲ್ಲಿ ಅರ್ಹತೆ ಇದ್ದರೂ ಮೀಸಲಾತಿ ಗೊಂದಲದಿಂದ ತಾತ್ಕಾಲಿಕ ಆಯ್ಕೆಪಟ್ಟಿ 1:1ರಲ್ಲಿ ಹೆಸರು ಪ್ರಕಟವಾಗದ ಉಡುಪಿಯ ಎಡತಾಡಿ ಗ್ರಾಮದ ಅನಿತಾ ಸೇರಿ 40ಕ್ಕೂ ಅಧಿಕ ಆಕಾಂಕ್ಷಿಗಳು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಹದಿನೈದು ಸಾವಿರ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ ಆದೇಶಿಸಿದೆ. 

ಅಭ್ಯರ್ಥಿಗಳ ಆಯ್ಕೆ ವೇಳೆ ಶಿಕ್ಷಣ ಇಲಾಖೆ, ಮಹಿಳಾ ಅಭ್ಯರ್ಥಿಗಳ ಪತಿಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಿದ್ದು, ಇದರಿಂದ ಹಲವು ಅಭ್ಯರ್ಥಿಗಳ ಹೆಸರುಗಳು ಆಯ್ಕೆಪಟ್ಟಿಯಲ್ಲಿ ಬಂದಿಲ್ಲ. ಇದನ್ನು ಪ್ರಶ್ನಿಸಿ ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದರು ಮತ್ತು ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು. 

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಈಗ ಪ್ರಕಟಿಸಲಾಗಿರುವ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿದ್ದು, ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸುವಂತೆ ಶಿಕ್ಷಣ ಇಲಾಖೆಗೆ ಆದೇಶಿಸಿದೆ.

ಇನ್ನು ಅಭ್ಯರ್ಥಿಗಳು ದಾಖಲಿಸಿದ್ದ ರಿಟ್ ಅರ್ಜಿಯ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರು, ಶಿಕ್ಷಣ ಇಲಾಖೆಯ ನಿಯಮ ಕಾನೂನುಬಾಹಿರವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಜೊತೆಗೆ, ಈಗ ಸರಕಾರ ಬಿಡುಗಡೆ ಮಾಡಿರುವ ತಾತ್ಕಾಲಿಕ ಆಯ್ಕೆಪಟ್ಟಿ ಕಾನೂನು ಬಾಹಿರವಾಗಿದೆ ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. 

ತಾತ್ಕಾಲಿಕ ಪಟ್ಟಿಗೆ ತಕರಾರು ಏಕೆ?: ತಕರಾರು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಹಿಂದೆ ಪದವೀಧರರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ನೇಮಕಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಲಿಖಿತ ಪರೀಕ್ಷೆಗೆ ಹಾಜರಾಗಿ ಉತ್ತಮ ರ್ಯಾಂಕ್ ಗಳಿಸಿದ್ದರು. ಅಲ್ಲದೆ, 1:2 ಅನುಪಾತದ ತಾತ್ಕಾಲಿಕ ಪಟ್ಟಿಯಲ್ಲಿ ದಾಖಲೆಗಳ ಪರಿಶೀಲನೆಗೆ ಅರ್ಹರಾಗಿದ್ದರು. ಆದರೆ, ದಾಖಲೆಗಳನ್ನು ಪರಿಶೀಲಿಸಿದ್ದ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. 2022ರ ನ.18ರಂದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಪ್ರಕಟಿಸಿದ್ದು, ಅರ್ಜಿದಾರರು ಅದರಲ್ಲಿ ಸ್ಥಾನ ಪಡೆದಿರಲಿಲ್ಲ. ಇದರಿಂದ ಅರ್ಜಿದಾರರು ತಾತ್ಕಾಲಿಕ ಪಟ್ಟಿಯನ್ನು ಪ್ರಶ್ನಿಸಿದ್ದರು. 

share
Next Story
X