Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ...

ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ಡಿಎಂಕೆ ನಾಯಕನಿಂದ ದಲಿತ ಯುವಕನ ನಿಂದನೆ

30 Jan 2023 9:36 PM IST
share
ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ಡಿಎಂಕೆ ನಾಯಕನಿಂದ ದಲಿತ ಯುವಕನ ನಿಂದನೆ

ಸೇಲಂ(ತ.ನಾಡು),ಜ.30: ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ಡಿಎಂಕೆ ನಾಯಕರೋರ್ವರು ದಲಿತ ಯುವಕನನ್ನು ಅವಾಚ್ಯವಾಗಿ ನಿಂದಿಸುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಜ.19ರಂದು ಸೇಲಂನ ತಿರುಮಲೈಗಿರಿಯಲ್ಲಿ ಘಟನೆ ನಡೆದಿದ್ದು, ದಲಿತ ಯುವಕ ಮುಜರಾಯಿ ಇಲಾಖೆಯಡಿ ವಣ್ಣಿಯಾರ ಸಮುದಾಯವು ನಿರ್ವಹಿಸುತ್ತಿರುವ ದೇವಸ್ಥಾನವನ್ನು ಪ್ರವೇಶಿಸಿದ್ದ.

ಡಿಎಂಕೆ ಯೂನಿಯನ್ ಕಾರ್ಯದರ್ಶಿ ಹಾಗೂ ಪಂಚಾಯತ್ ಮುಖ್ಯಸ್ಥ ಮಾಣಿಕಂ ಯುವಕನಿಗೆ ಬೆದರಿಕೆಯೊಡ್ಡಿದ್ದನ್ನು ಮತ್ತು ಅವಮಾನಕಾರಿಯಾಗಿ ನಿಂದಿಸುತ್ತಿದ್ದನ್ನು ವೀಡಿಯೊ ತೋರಿಸಿದೆ. ದೇವಸ್ಥಾನವನ್ನು ಪ್ರವೇಶಿಸಿದ್ದೇಕೆ ಎಂದು ಯುವಕನನ್ನು ಪದೇ ಪದೇ ಪ್ರಶ್ನಿಸದ ಮಾಣಿಕಂ, ತನ್ನ ಗ್ರಾಮದ ಯಾರೂ ಈಗ ದೇವಸ್ಥಾನಕ್ಕೆ ಭೇಟಿ ನೀಡುತ್ತಿಲ್ಲ ಎಂದು ಹೇಳಿದ್ದನ್ನೂ ವೀಡಿಯೊ ತೋರಿಸಿದೆ.

ಘಟನೆಯು ನಡೆದು ಒಂದು ವಾರವಾಗಿದ್ದರೂ ಈವರೆಗೆ ದೂರು ದಾಖಲಾಗಿಲ್ಲ. ಈ ನಡುವೆ ಪಕ್ಷದ ನೀತಿಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಕ್ಕಾಗಿ ಮತ್ತು ಪಕ್ಷಕ್ಕೆ ಕೆಟ್ಟ ಹೆಸರು ತರುತ್ತಿರುವುದಕ್ಕಾಗಿ ಡಿಎಂಕೆಯು ಮಾಣಿಕಂ ಅವರನ್ನು ಅಮಾನತುಗೊಳಿಸಿದೆ.

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಮಾಣಿಕಂ, ದುರುದ್ದೇಶಪೂರ್ವಕವಾಗಿ ವೀಡಿಯೊವನ್ನು ವೈರಲ್ ಮಾಡಲಾಗಿದೆ ಎಂದರಾದರೂ ಘಟನೆ ನಡೆದಿದ್ದನ್ನು ದೃಢಪಡಿಸಿದರು. ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶವಿಲ್ಲವೇ ಎಂಬ ಪ್ರಶ್ನೆಗೆ ಇಂತಹ ಯಾವುದೇ ನಿರ್ಬಂಧವನ್ನು ಪರೋಕ್ಷವಾಗಿ ನಿರಾಕರಿಸಿದ ಅವರು, “ದಲಿತ ಯುವಕ ಮದ್ಯವನ್ನು ಸೇವಿಸಿದ್ದ. ಅಂದು ಮಾರಿಯಮ್ಮನ್ ದೇವಸ್ಥಾನದಲ್ಲಿ ಕಾರ್ಯಕ್ರಮವೊಂದು ನಡೆದಿತ್ತು ಮತ್ತು ಸಚಿವ ಉದಯನಿಧಿ ಬಂದಿದ್ದರಿಂದ ತಾನು ಅಲ್ಲಿಗೆ ತೆರಳಿದ್ದೆ. ಯುವಕ ಕುಡಿದು ಗಲಾಟೆ ಮಾಡುತ್ತಿದ್ದ. ಆತನನ್ನು ಒಂಟಿಯಾಗಿ ಬಿಡುವಂತೆ ತಾನು ಹೇಳಿದ್ದೆ. ಮರುದಿನ ಯುವಕನ ಕಡೆಯವರು ಕ್ಷಮೆ ಯಾಚಿಸಲು ಬಂದಿದ್ದರು. ಗ್ರಾಮಸ್ಥರೊಂದಿಗೆ ಜಗಳಗಳನ್ನು ಮಾಡುವ ಬಗ್ಗೆ ಅವರನ್ನು ಪ್ರಶ್ನಿಸಿದ್ದೆ” ಎಂದು ಉತ್ತರಿಸಿದರು. ದೂರು ನೀಡಿದ್ದರೆ ದಲಿತ ಯುವಕನ ಬಂಧನವಾಗುತ್ತಿತ್ತು ಎಂದರು.

‘ದಲಿತರಿಗೆ ದೇವಸ್ಥಾನ ಪ್ರವೇಶವನ್ನು ನಿರ್ಬಂಧಿಸಿಲ್ಲ. ಕುಡಿದು ಬಂದಿದ್ದಕ್ಕಾಗಿ ಇಡೀ ಗ್ರಾಮ ಆತನ್ನು ದೂಷಿಸುತ್ತಿದೆ. ನಾನು ಉಭಯ ಸಮುದಾಯಗಳಿಗೂ ಬೇಕಾದ ವ್ಯಕ್ತಿಯಾಗಿದ್ದೇನೆ, ಹೀಗಾಗಿ ಅವು ನನ್ನ ವಿರುದ್ಧ ಮಾತನಾಡುವುದಿಲ್ಲ ’ ಎಂದೂ ಮಾಣಿಕಂ ಹೇಳಿದ್ದಾರೆ.

Untouchability!

"Who allowed you to enter the temple?.. You and your father would not be able to reside in the vill. I'll break your teeth.

DMK leader Manickam abused a SC youth with casteist slurs and threatened him after entering a temple in Salem, TN.pic.twitter.com/h2tp05YYEE

— Mission Ambedkar (@MissionAmbedkar) January 30, 2023
share
Next Story
X