Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಡ್ಸೆಯಲ್ಲಿನ ವೈರಸ್‌ ಬಿಜೆಪಿಗರಲ್ಲೂ...

ಗೋಡ್ಸೆಯಲ್ಲಿನ ವೈರಸ್‌ ಬಿಜೆಪಿಗರಲ್ಲೂ ಇದೆ: ಸುಧೀರ್‌ ಕುಮಾರ್‌ ಮುರೊಳ್ಳಿ

''ಪ್ರಧಾನಿ ಮೋದಿಯವರ 56 ಇಂಚಿನ ಎದೆಯಲ್ಲಿ ಪ್ರೀತಿಯಿಲ್ಲ''

30 Jan 2023 10:14 PM IST
share
ಗೋಡ್ಸೆಯಲ್ಲಿನ ವೈರಸ್‌ ಬಿಜೆಪಿಗರಲ್ಲೂ ಇದೆ: ಸುಧೀರ್‌ ಕುಮಾರ್‌ ಮುರೊಳ್ಳಿ
''ಪ್ರಧಾನಿ ಮೋದಿಯವರ 56 ಇಂಚಿನ ಎದೆಯಲ್ಲಿ ಪ್ರೀತಿಯಿಲ್ಲ''

ಶಿವಮೊಗ್ಗ: ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ ದ್ವೇಷ ರಾಜಕಾರಣ ವಿರುದ್ಧದ, ಸಂವಿಧಾನದ ಆಶಯ ಉಳಿವಿನ ಮತ್ತು ಎರಡು ಕೋಮುಗಳನ್ನು ಒಗ್ಗೂಡಿಸುವ ಯಾತ್ರೆಯಾಗಿದೆ ಎಂದು ಕಾಂಗ್ರೆಸ್‌ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ ಹೇಳಿದ್ದಾರೆ. 

ರಾಹುಲ್‌ ಗಾಂಧಿ ಅವರ ‘ಭಾರತ್‌ ಐಕ್ಯತಾ ಯಾತ್ರೆ’ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿಯಿಂದ ನಗರದ ಗೋಪಿ ವೃತ್ತದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಮೆರವಣಿಗೆ, ದೃಶ್ಯ ಪ್ರದರ್ಶನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.

ಗೋಡ್ಸೆಯಲ್ಲಿನ ವೈರಸ್‌ ಬಿಜೆಪಿಗರಲ್ಲೂ ಇದೆ ದೇಶ ವಿಭಜನೆಗಾಗಿ ಗಾಂಧೀಜಿ ಕೊಲೆ ಮಾಡಲಾಗಿದೆ ಎಂಬುವುದು ಆರೆಸ್ಸೆಸ್ ವಾದ. ವಾಸ್ತವದಲ್ಲಿಗಾಂಧೀಜಿಯನ್ನು ಕೊಂದಿದ್ದು ಗೋಡ್ಸೆ ಅಲ್ಲ. ಆತನಲ್ಲಿದ್ದ ಕೆಟ್ಟ ವಿಚಾರ ಧಾರೆ ಎಂಬ  ವೈರಸ್‌. ಇದೇ ವೈರಸ್‌ ಈಗಿನ ಬಿಜೆಪಿ ರಾಜ್ಯ ಮತ್ತು ರಾಷ್ಟ್ರ ನಾಯಕರಲ್ಲಿದೆ ಎಂದರು.

ಬಿಜೆಪಿ ತೆರಿಗೆ ಭಯೋತ್ಪಾದನೆಯ ಮೂಲಕ ಜನರನ್ನು ಆತಂಕಕ್ಕೀಡು ಮಾಡಿದೆ. ಬ್ರಿಟಿಷರು ತಿನ್ನುವ ಉಪ್ಪಿಗೆ ತೆರಿಗೆ ವಿಧಿಸಿದ್ದನ್ನು ವಿರೋಧಿಸಿ ಮಹಾತ್ಮ ಗಾಂಧೀಜಿ ಅವರು ಉಪ್ಪಿನ ಸತ್ಯಾಗ್ರಹ ಮಾಡಿದ್ದರು. ಅದೇ ವಂಶದ ಕುಡಿಯಾದ ರಾಹುಲ್‌ ಗಾಂಧಿ ಅವರು ಭಾರತ ಐಕ್ಯತಾ ಯಾತ್ರೆಯನ್ನು ಮಾಡಿದ್ದಾರೆ. ಈ ಮೂಲಕ ಜನಪರವಾದ ನಿಲುವನ್ನು ಪ್ರದರ್ಶಿಸಿದ್ದಾರೆ. ಇದಕ್ಕೆಭಾರಿ ಜನಸ್ಪಂದನೆ ಸಿಕ್ಕಿದೆ ಎಂದರು.

ಪಪ್ಪು’ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಅವರನ್ನು ಕರೆಯಬೇಕೇ ವಿನಹ ರಾಹುಲ್‌ ಗಾಂಧಿ ಅವರನ್ನಲ್ಲ. ಈಶ್ವರಪ್ಪ ಅವರ ಪ್ರಚೋದನೆಯಿಂದಾಗಿ ಶಿವಮೊಗ್ಗ ನಗರದಲ್ಲಿ60ಕ್ಕೂ ಹೆಚ್ಚು ದಿನಗಳ ಕಾಲ 144 ಸೆಕ್ಷನ್‌ ವಿಧಿಸಲಾಗಿತ್ತು. ಇದು ಶಿವಮೊಗ್ಗಕ್ಕೆ ಈಶ್ವರಪ್ಪ ಮಾಡಿದ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಚಾರ ಸಮಿತಿ ಅಧ್ಯಕ್ಷ ಎನ್‌.ರಮೇಶ್‌, ಜಿಲ್ಲಾಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌.ಸುಂದರೇಶ್‌, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌, ನಿಖಿತ್‌ರಾಜ್‌ ಮೌರ್ಯ, ಎಸ್‌.ಪಿ. ದಿನೇಶ್‌, ಕಲಗೋಡು ರತ್ನಾಕರ್‌, ಪಿ.ಒ.ಶಿವಕುಮಾರ್‌ ಇತರರಿದ್ದರು.

56 ಇಂಚಿನ ಎದೆಯಲ್ಲಿ ಪ್ರೀತಿಯಿಲ್ಲ: ಪ್ರಧಾನಿ ನರೇಂದ್ರ ಅವರ 56 ಇಂಚಿನ ಎದೆಯಲ್ಲಿಜನರ ಬಗ್ಗೆ ಪ್ರೀತಿ ಇಲ್ಲ. ಹಾಗೂ ಜನರನ್ನು ಎದುರಿಸುವ ಧೈರ್ಯ ಮತ್ತು ನೈತಿಕತೆಯೂ ಇಲ್ಲಎಂದು ಟೀಕಿಸಿದರು.

ದಲಿತರ ಮೇಲೆ ಭಯ ಇರುವುದರಿಂದ ನಾಟಕಕ್ಕಾಗಿ ಬಿಜೆಪಿಯವರು ಅಂಬೇಡ್ಕರ್‌ ಅವರನ್ನು ಗೌರವಿಸುತ್ತಾರೆಯೇ ವಿನಹ ವಾಸ್ತವದಲ್ಲಿಅವರಿಗೆ ಸಂವಿಧಾನ ಮತ್ತು ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ. ಬಿಜೆಪಿ ಜಾತ್ಯತೀತರನ್ನು ಅವಹೇಳನ ಮಾಡುತ್ತದೆ ಎಂದು ಆಪಾದಿಸಿದರು.

share
Next Story
X