Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ನನ್ನ ಮೇಲೆ ಕ್ಷಿಪಣಿ ದಾಳಿ ನಡೆಸುವುದಾಗಿ...

​ನನ್ನ ಮೇಲೆ ಕ್ಷಿಪಣಿ ದಾಳಿ ನಡೆಸುವುದಾಗಿ ಪುಟಿನ್ ಬೆದರಿಸಿದ್ದರು: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್

30 Jan 2023 10:27 PM IST
share
​ನನ್ನ ಮೇಲೆ ಕ್ಷಿಪಣಿ ದಾಳಿ ನಡೆಸುವುದಾಗಿ ಪುಟಿನ್ ಬೆದರಿಸಿದ್ದರು: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್

ಲಂಡನ್, ಜ.30: ಉಕ್ರೇನ್ ಮೇಲೆ ದಾಳಿ ನಡೆಸುವಂತೆ ರಶ್ಯ ಪಡೆಗೆ ಆದೇಶಿಸುವ ಕೆಲ ಕ್ಷಣಗಳ ಮೊದಲು  ರಶ್ಯ ಅಧ್ಯಕ್ಷ ಪುಟಿನ್ ತನ್ನ ಮೇಲೆ ಕ್ಷಿಪಣಿ ದಾಳಿ ನಡೆಸುವ ಬೆದರಿಕೆ ಒಡ್ಡಿದ್ದರು ಎಂದು ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಪ್ರತಿಪಾದಿಸಿದ್ದಾರೆ.

ಫೆಬ್ರವರಿ 24ರಂದು ಉಕ್ರೇನ್ ಮೇಲೆ ರಶ್ಯದ ಆಕ್ರಮಣಕ್ಕೆ ಸ್ವಲ್ಪ ಮೊದಲು ಬೋರಿಸ್ ಜಾನ್ಸನ್ಗೆ ದೂರವಾಣಿ ಕರೆ ಮಾಡಿದ್ದ ಪುಟಿನ್ ಈ ಬೆದರಿಕೆ ಒಡ್ಡಿದ್ದರು ಎಂದು ಬಿಬಿಸಿ ಪ್ರಸಾರ ಮಾಡಲಿರುವ ನೂತನ ಸಾಕ್ಷ್ಯಚಿತ್ರದಲ್ಲಿ ಉಲ್ಲೇಖಿಸಲಾಗಿದೆ. ಬೋರಿಸ್ ಜಾನ್ಸನ್ ಹಾಗೂ ಇತರ ಪಾಶ್ಚಿಮಾತ್ಯ ಮುಖಂಡರು  ಉಕ್ರೇನ್ ದೇಶವನ್ನು ಬೆಂಬಲಿಸುವ ಜತೆಗೆ ರಶ್ಯದ ಆಕ್ರಮಣವನ್ನು ಖಂಡಿಸಿ ಹೇಳಿಕೆ ನೀಡಿದ್ದರಿಂದ ಪುಟಿನ್ ಹತಾಶರಾಗಿದ್ದರು. ದೂರವಾಣಿ ಸಂಭಾಷಣೆಯ ಸಂದರ್ಭ ತಮ್ಮ ಅಸಮಾಧಾನವನ್ನು ಸೂಚಿಸಿದ ಪುಟಿನ್ ಒಂದು ಹಂತದಲ್ಲಿ `ಬೋರಿಸ್, ನಿಮಗೆ ನೋವುಂಟು ಮಾಡಲು ನಾನು ಬಯಸುವುದಿಲ್ಲ. ಆದರೆ ನಿಮ್ಮತ್ತ ಒಂದು ಕ್ಷಿಪಣಿ ಹಾರಿಸಿದರೆ ಒಂದೇ ನಿಮಿಷ ಸಾಕು' ಎಂದಿದ್ದರು.

ಬೋರಿಸ್, ಉಕ್ರೇನ್ ಖಂಡಿತಾ ನೇಟೊದತ್ತ ವಾಲುವುದಿಲ್ಲ ಎಂದು ನೀವು ಹೇಳಿದ್ದು ನೆನಪಿದೆಯೇ? ಈಗೇನು ಹೇಳುತ್ತೀರಿ ಎಂದು ಪ್ರಶ್ನಿಸಿದ್ದ ಪುಟಿನ್ `ಏನೇ ಆದರೂ ಉಕ್ರೇನ್ ನೇಟೋಗೆ ಸೇರ್ಪಡೆಗೊಳ್ಳುವ ಪ್ರಶ್ನೆಯೇ ಇಲ್ಲ. ಇದು ನಿಮಗೆ ನೆನಪಿರಲಿ ಎಂದು ಹೇಳಿರುವುದಾಗಿ ಸಾಕ್ಷ್ಯಚಿತ್ರದಲ್ಲಿ ಉಲ್ಲೇಖಿಸಲಾಗಿದೆ.
ನನ್ನ ಮೇಲೆ ಕ್ಷಿಪಣಿ ದಾಳಿಯ ಬೆದರಿಕೆ ಒಡ್ಡುವಾಗ ಪುಟಿನ್ ಅತ್ಯಂತ ನಿರಾಳವಾಗಿ ಮಾತನಾಡುತ್ತಿದ್ದರು. ಧ್ವನಿಯಲ್ಲಿ ಯಾವುದೇ ಉದ್ವೇಗವಿರಲಿಲ್ಲ ಎಂದೂ ಜಾನ್ಸನ್ ಹೇಳಿದ್ದಾರೆ.

ಉಕ್ರೇನ್ ಮೇಲಿನ ಆಕ್ರಮಣ ಆರಂಭಗೊಳ್ಳುವ ಕೆಲ ದಿನಗಳ ಹಿಂದೆ ಪುಟಿನ್ಗೆ ದೂರವಾಣಿ ಕರೆ ಮಾಡಿದ್ದ ಜಾನ್ಸನ್, ಉಕ್ರೇನ್ ನೇಟೊಗೆ ಸೇರ್ಪಡೆಯಾಗುವ ಸಾಧ್ಯತೆಯಿಲ್ಲ. ಆದ್ದರಿಂದ ಯಾವುದೇ ಸಮಸ್ಯೆಯನ್ನೂ ಮಾತುಕತೆಯ ಮೂಲಕ ಪರಿಹರಿಸಬಹುದು. ಒಂದು ವೇಳೆ ಉಕ್ರೇನ್ ಮೇಲೆ ಆಕ್ರಮಣ ನಡೆಸಿದರೆ ಉಕ್ರೇನ್ ನೇಟೊದ ಸದಸ್ಯನಾಗಲು ಪ್ರೇರೇಪಿಸಿದಂತಾಗುತ್ತದೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಕರೆ ಮಾಡಿದ್ದ ಪುಟಿನ್, ಕ್ಷಿಪಣಿ ದಾಳಿಯ ಬೆದರಿಕೆ ಒಡ್ಡಿದ್ದಾರೆ ಎಂದು ಬಿಬಿಸಿಯಲ್ಲಿ ಪ್ರಸಾರವಾಗಲಿರುವ ಸಾಕ್ಷ್ಯಚಿತ್ರದಲ್ಲಿ ಹೇಳಲಾಗಿದೆ.

share
Next Story
X