Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಗ್ರೂಪ್ ನಲ್ಲಿ ಹೂಡಿಕೆ ಕುರಿತು...

ಅದಾನಿ ಗ್ರೂಪ್ ನಲ್ಲಿ ಹೂಡಿಕೆ ಕುರಿತು ಎಲ್ಐಸಿ ಸ್ಪಷ್ಟೀಕರಣ

30 Jan 2023 11:25 PM IST
share
ಅದಾನಿ ಗ್ರೂಪ್ ನಲ್ಲಿ ಹೂಡಿಕೆ ಕುರಿತು ಎಲ್ಐಸಿ ಸ್ಪಷ್ಟೀಕರಣ

ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಭಾರತೀಯ ಜೀವವಿಮಾ ನಿಗಮ (ಎಲ್ಐಸಿ)ವು ಅದಾನಿ ಗ್ರೂಪ್ ನಲ್ಲಿ ತನ್ನ ಹೂಡಿಕೆಗಳ ಕುರಿತು ಸೋಮವಾರ ಹೇಳಿಕೆಯೊಂದರಲ್ಲಿ ಸ್ಪಷ್ಟೀಕರಣವನ್ನು ನೀಡಿದೆ. 2022, ಡಿಸೆಂಬರ್ 31ಕ್ಕೆ ಇದ್ದಂತೆ ಅದಾನಿ ಗ್ರೂಪ್ ನ ಕಂಪನಿಗಳಲ್ಲಿ ಎಲ್ಐಸಿಯು ಶೇರುಗಳು ಮತ್ತು ಸಾಲದ ರೂಪದಲ್ಲಿ 35,917.31 ಕೋ.ರೂ.ಗಳ ಹೂಡಿಕೆಯನ್ನು ಹೊಂದಿದೆ. 2022,ಸೆ.30ಕ್ಕೆ ಇದ್ದಂತೆ ಎಲ್ಐಸಿಯ ನಿರ್ವಹಣೆಯಡಿ ಹೂಡಿಕೆಗಳ (ಎಯುಎಂ)ಒಟ್ಟು ಮೌಲ್ಯ 41.66 ಲಕ್ಷ ಕೋಟಿ ರೂ. ಗಳಿದ್ದು, ಹೀಗಾಗಿ ಅದಾನಿ ಗ್ರೂಪ್ ನಲ್ಲಿ ಎಲ್ಐಸಿಯ ಹೂಡಿಕೆಗಳ ಪ್ರಮಾಣ ಈ ದಿನಕ್ಕೆ ಇದ್ದಂತೆ ಎಲ್ಐಸಿಯ ಒಟ್ಟು ಎಎಯುಎಮ್ನ ಶೇ.0.975 ರಷ್ಟಿದೆ (ಬುಕ್ ವ್ಯಾಲ್ಯೂ ಪ್ರಕಾರ) ಎಂದು ಹೇಳಿಕೆಯು ತಿಳಿಸಿದೆ.

ಕಳೆದ ಹಲವು ವರ್ಷಗಳಲ್ಲಿ ಎಲ್ಐಸಿಯಿಂದ ಅದಾನಿ ಗ್ರೂಪ್ ನ ಎಲ್ಲ ಕಂಪನಿಗಳ ಶೇರುಗಳ ಒಟ್ಟು ಖರೀದಿ ಮೌಲ್ಯ 30,127 ಕೋಟಿ ರೂ.ಗಳಾಗಿದ್ದು 2023,ಜ.27ರಂದು ಶೇರು ಮಾರುಕಟ್ಟೆಗಳ ವಹಿವಾಟು ಅವಧಿಯು ಮುಗಿದ ಬಳಿಕ ಈ ಶೇರುಗಳ ಮಾರುಕಟ್ಟೆ ಮೌಲ್ಯ 56,142 ಕೋಟಿ ರೂ.ಗಳಾಗಿದ್ದವು. ಜ.30ಕ್ಕೆ ಇದ್ದಂತೆ ಅದಾನಿ ಗ್ರೂಪ್ ನಲ್ಲಿ ಹೂಡಿಕೆ ಮಾಡಲಾಗಿರುವ ಒಟ್ಟು ಮೊತ್ತ 36,474.78 ಕೋ.ರೂ.ಗಳಾಗಿವೆ. ಆದರೂ ಈ ಎಲ್ಲ ಹೂಡಿಕೆಗಳನ್ನು ಕ್ರಮೇಣ ಮಾಡಲಾಗಿದೆ. ಅಲ್ಲದೆ ಎಲ್ಐಸಿ ಹೊಂದಿರುವ ಎಲ್ಲ ಅದಾನಿ ಸಾಲ ಭದ್ರತೆಗಳು ಮತ್ತು ಹೆಚ್ಚಿನ ರೇಟಿಂಗ್ ಹೊಂದಿದ್ದು,ಇದು ಎಲ್ಲ ಜೀವವಿಮೆ ಕಂಪನಿಗಳಿಗೆ ಅನ್ವಯಿಸುವ ಐಆರ್ಡಿಎಐ ಹೂಡಿಕೆ ನಿಯಮಗಳಿಗೆ ಅನುಗುಣವಾಗಿದೆ.

‘ಸಾಮಾನ್ಯ ವ್ಯವಹಾರ ಕ್ರಮದಲ್ಲಿ ಎಲ್ಐಸಿ ತನ್ನ ಕಂಪನಿ ಮತ್ತು ಕೈಗಾರಿಕಾ ಸಮೂಹ ನಿರ್ದಿಷ್ಟ ಹೂಡಿಕೆಗಳ ವಿವರಗಳನ್ನು ಹಂಚಿಕೊಳ್ಳುವುದಿಲ್ಲ. ಆದರೆ ಅದಾನಿ ಗ್ರೂಪ್ ನಲ್ಲಿ ಎಲ್ಐಸಿಯ ಹೂಡಿಕೆಗಳ ಕುರಿತು ಮಾಧ್ಯಮಗಳಲ್ಲಿಯ ವಿವಿಧ ಲೇಖನಗಳು ಮತ್ತು ವೀಡಿಯೊ ಚಾನೆಲ್ಗಳಲ್ಲಿ ಕೆಲವು ಮಾಹಿತಿಗಳು ಹರಿದಾಡುತ್ತಿರುವುದರಿಂದ ಸದ್ರಿ ಸಮೂಹದ ಶೇರುಗಳು ಮತ್ತು ಸಾಲಗಳಲ್ಲಿ ನಮ್ಮ ಹೂಡಿಕೆಗಳ ವಾಸ್ತವ ಸ್ಥಿತಿಯನ್ನು ಮುಂದಿಡಲು ನಾವು ಈ ಮಾಹಿತಿಯನ್ನು ಬಿಡುಗಡೆಗೊಳಿಸುತ್ತಿದ್ದೇವೆ ’ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

share
Next Story
X