Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 5 ವರ್ಷಗಳ ಬಳಿಕ ಜನವರಿಯಲ್ಲಿ ಮಳೆ ಕೊರತೆ;...

5 ವರ್ಷಗಳ ಬಳಿಕ ಜನವರಿಯಲ್ಲಿ ಮಳೆ ಕೊರತೆ; ಚಳಿಗಾದ ಬೆಳೆಗಳಿಗೆ ಹಾನಿ

31 Jan 2023 7:46 AM IST
share
5 ವರ್ಷಗಳ ಬಳಿಕ ಜನವರಿಯಲ್ಲಿ ಮಳೆ ಕೊರತೆ; ಚಳಿಗಾದ ಬೆಳೆಗಳಿಗೆ ಹಾನಿ

ಪುಣೆ: ದೇಶದಲ್ಲಿ ಜನವರಿ ತಿಂಗಳಲ್ಲಿ ಐದು ವರ್ಷಗಳಲ್ಲೇ ಕನಿಷ್ಠ ಮಳೆ ಬಿದ್ದಿದೆ. ಜನವರಿಯ ಮೊದಲ 30 ದಿನಗಳಲ್ಲಿ ದೇಶಾದ್ಯಂತ ಕೇವಲ 12.4 ಮಿಲಿಮೀಟರ್ ಮಳೆಯಾಗಿದ್ದು, ಇದು ವಾಡಿಕೆಯ ಮಳೆಗಿಂತ ಶೇಕಡ 25ರಷ್ಟು ಕಡಿಮೆ. ಈ ಕೊರತೆ ಜನವರಿ 31ರಂದು ಸರಿದೂಗುವ ಸಾಧ್ಯತೆ ಇಲ್ಲ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಹೇಳಿಕೆ ನೀಡಿದೆ.

ಪಂಜಾಬ್, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಕೊರತೆ ಇದೆ ಎಂದು ಐಎಂಡಿ ಅಂಕಿ ಅಂಶಗಳಿಂದ ತಿಳಿದು ಬರುತ್ತದೆ.

"ಪಶ್ಚಿಮಮುಖ ಪ್ರಕ್ಷುಬ್ಧತೆ ಚಟುವಟಿಕೆಯಿಂದಾಗಿ ಪಶ್ಚಿಮ ಹಾಗೂ ವಾಯವ್ಯ ಭಾರತದಲ್ಲಿ ಸಾಮಾನ್ಯ ಅಥವಾ ಅಧಿಕ ಮಳೆ ಬಿದ್ದಿದೆ. ಆದಾಗ್ಯೂ ಚಳಿಗಾಲದ ಮಳೆ ಒಟ್ಟಾರೆಯಾಗಿ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಇದೆ. ದುರ್ಬಲ ಪಶ್ಚಿಮಮುಖಿ ಪ್ರಕ್ಷುಬ್ಧತೆ ಚಟುವಟಿಕೆಯ ಪರಿಣಾಮ ಕಲೆದ ವರ್ಷದ ಡಿಸೆಂಬರ್‌ನಲ್ಲೂ ಮಳೆ ವಾಡಿಕೆಗಿಂತ ಕಡಿಮೆ" ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ಹೇಳಿದ್ದಾರೆ.

ಕೊನೆಯ ಪಶ್ಚಿಮಮುಖಿ ಪ್ರಕ್ಷುಬ್ಧತೆಯ ಪರಿಣಾಮ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಪಂಜಾಬ್ ಹಾಗೂ ಹರ್ಯಾಣದ ಉತ್ತರ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಈಗ ಬರುತ್ತಿರುವ ಮಳೆ ಮಂಗಳವಾರದ ವರೆಗೆ ಮುಂದವರಿಯುವ ಸಾಧ್ಯತೆ ಇದ್ದು, ಬಳಿಕ ಕಡಿಮೆಯಾಗಲಿದ್ದು, ಈ ತಿಂಗಳ ಕೊರತೆ ನೀಗುವ ಸಾಧ್ಯತೆ ಇಲ್ಲ ಎಂದು ಸ್ಪಷ್ಟಪಡಿಸಿದಾರೆ.

2022ರ ಡಿಸೆಂಬರ್‌ನಲ್ಲಿ ಕೂಡಾ ಕೇವಲ 13.6 ಮಿಲಿಮೀಟರ್ ಮಳೆಯಾಗಿದ್ದು, 2016ರ ಡಿಸೆಂಬರ್ ಬಳಿಕ ಇದು ಅತ್ಯಂತ ಕನಿಷ್ಠ ಪ್ರಮಾಣವಾಗಿದೆ.

ಭಾರತದ ಗೋಧಿ ಬೆಳೆಯುವ ಶೇಕಡ 95ಕ್ಕಿಂತ ಹೆಚ್ಚು ಪ್ರದೇಶ ನೀರಾವರಿ ಜಮೀನು. ಆದಾಗ್ಯೂ ಮಂದ ಮಳೆ, ತಂಪಾಗುವಿಕೆಯ ಅವಧಿ ಹೆಚ್ಚಲು ಕಾರಣವಾಗಲಿದ್ದು, ಇದು ಚಳಿಗಾಲದ ಗೋಧಿ ಇಳುವರಿಗೆ ಅನುಕೂಲ. ಸಕಾಲಿಕ ಮತ್ತು ಚಳಿಗಾಲದ ಲಘು ಮಳೆ ಗೋಧಿ ಉತ್ಪಾದನೆಗೆ ಅನುಕೂಲ. ಚಳಿಗಾಲ ಒಣಹವೆಯಿಂದ ಕೂಡಿದ್ದರೆ, ಹಿಮ ಬೆಳೆಗಳ ಮೆಲೆ ಹೆಚ್ಚಾಗಿ ಬೀಳುತ್ತದೆ. ಇದು ಬೆಳೆ ಹಾನಿಗೆ ಕಾರಣವಾಗಿ ಉತ್ಪಾದನೆ ಕುಂಠಿತಗೊಳ್ಳುವ ಸಾಧ್ಯತೆ ಇದೆ ಎಂದು ಐಸಿಎಆರ್-ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ವಿಜ್ಞಾನಿ ರಾಜಬೀರ್ ಯಾವದ್ ಹೇಳಿದ್ದಾರೆ.

share
Next Story
X