Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಎಸ್‌ಐ ಗೋಪಾಲ್ ದಾಸ್‌ಗೆ ಸಚಿವರನ್ನು...

ಎಎಸ್‌ಐ ಗೋಪಾಲ್ ದಾಸ್‌ಗೆ ಸಚಿವರನ್ನು ಕೊಲ್ಲುವ ಸ್ಪಷ್ಟ ಉದ್ದೇಶ ಇತ್ತು: ಎಫ್‌ಐಆರ್

31 Jan 2023 2:54 PM IST
share
ಎಎಸ್‌ಐ ಗೋಪಾಲ್ ದಾಸ್‌ಗೆ ಸಚಿವರನ್ನು ಕೊಲ್ಲುವ ಸ್ಪಷ್ಟ ಉದ್ದೇಶ ಇತ್ತು: ಎಫ್‌ಐಆರ್

ಭುವನೇಶ್ವರ, ಜ. 31: ಆರೋಪಿ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಗೋಪಾಲ್ ದಾಸ್ಗೆ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರನ್ನು ಹತ್ಯೆಗೈಯುವ ಸ್ಪಷ್ಟ ಉದ್ದೇಶ ಇತ್ತು ಎಂದು ಸಚಿವರ ಹತ್ಯೆಗೆ ಸಂಬಂಧಿಸಿ ದಾಖಲಿಸಲಾದ ಎಫ್ಐಆರ್ನಲ್ಲಿ ಒಡಿಶಾ ಪೊಲೀಸರು ಹೇಳಿದ್ದಾರೆ. ಸಚಿವರ ಮೇಲೆ ಗುಂಡು ಹಾರಿಸಿದ ಸ್ಥಳದಲ್ಲಿ ಇದ್ದ ಬ್ರಜ್ನಗರ್ ಪೊಲೀಸ್ ಠಾಣೆಯ ಪ್ರಭಾರಿ ಇನ್ಸ್ಪೆಕ್ಟರ್ (ಐಐಸಿ) ಪ್ರದ್ಯುಮ್ನ ಕುಮಾರ್ ಸ್ವೈನ್ ಅವರು ಈ ಹೇಳಿಕೆ ನೀಡಿದ್ದಾರೆ. ‌

ಅಪರಾಹ್ನ ಸುಮಾರು 12.15ಕ್ಕೆ ಸಚಿವ ನಬಾ ಕಿಶೋರ್ ದಾಸ್ ಅವರ ಕಾರು ಕಟ್ಟಡದ ಸಮೀಪ ನಿಂತಿತು. ಅವರು ಕಾರಿನಿಂದ ಕೆಳಗಿಳಿದರು. ಎಲ್ಲವೂ ಇದ್ದಕ್ಕಿದ್ದಂತೆ ನಡೆಯಿತು. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಂಚಾರ ತೆರವುಗೊಳಿಸುವ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಗಾಂಧಿ ಚೌಕ ಪೊಲೀಸ್ ಹೊರ ಠಾಣೆಯ ಎಎಸ್ಐ ಗೋಪಾಲ್ ದಾಸ್ ಸಚಿವರ ಸಮೀಪಕ್ಕೆ ಆಗಮಿಸಿದ ಹಾಗೂ ತನ್ನ ಸೇವಾ ರಿವಾಲ್ವರ್ನಿಂದ ಅವರ ಮೇಲೆ ಗುಂಡು ಹಾರಿಸಿದ ಎಂದು ಸ್ವೈನ್ ತಿಳಿಸಿದ್ದಾರೆ. 

ಗುಂಡು ಎದೆಗೆ ತಾಗುತ್ತಿದ್ದಂತೆ ಸಚಿವರು ಕುಸಿದು ಬಿದ್ದರು. ಅವರ ದೇಹದಿಂದ ರಕ್ತ ಸೋರಲು ಆರಂಭವಾಯಿತು. ಆತ ಹಾರಿಸಿದ ಇನ್ನೊಂದು ಗುಂಡು ತನ್ನ ಉಂಗುರದ ಬೆರಳಿಗೆ ತಗುಲಿತು. ಅನಂತರ ತಾನು ಕಾನ್ಸ್ಟೆಬಲ್ ಕೆ.ಸಿ. ಪ್ರಧಾನ್ನ ಸಹಾಯದಿಂದ ದಾಸ್ನನ್ನು ಸೆರೆ ಹಿಡಿದೆ ಎಂದು ಅವರು ತಿಳಿಸಿದ್ದಾರೆ. ಗೋಪಾಲ್ ದಾಸ್ನ ದಾಳಿಗೆ ಅವರು ಎಫ್ಐಆರ್ನಲ್ಲಿ ಯಾವುದೇ ವಿವರಣೆ ನೀಡಿಲ್ಲ. 

ಬೆಹ್ರಾಮ್ಪುರದ ಎಂಕೆಸಿಜಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಮನೋವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋವೈದ್ಯ ಡಾ. ಚಂದ್ರಶೇಖರ್ ತ್ರಿಪಾಠಿ ಅವರು, ದಾಸ್ ಕಳೆದ 10 ವರ್ಷಗಳಿಂದ ಬೈಪೋಲಾರ್ ಡಿಸಾರ್ಡರ್ನಿಂದ ಬಳಲುತ್ತಿದ್ದಾನೆ. ಇದು ತೀವ್ರತರ ಮಾನಸಿಕ ಕಾಯಿಲೆಯಾಗಿದ್ದು, ಉನ್ಮಾದ ಸ್ಥಿತಿಯ ಕಾರಣ ಕೆಲವೊಮ್ಮೆ ವ್ಯಕ್ತಿಯ ಮನಸ್ಥಿತಿಯಲ್ಲಿ ಏರುಪೇರಾಗುವ ಸಾಧ್ಯತೆ ಇರುತ್ತದೆ ಎಂದಿದ್ದಾರೆ. 

ದಾಸ್ ಮೊದಲು ಎಂಟು ಹತ್ತು ವರ್ಷಗಳ ಹಿಂದೆ ತನ್ನ ಕ್ಲಿನಿಕ್ಗೆ ಭೇಟಿ ನೀಡಿದ್ದ. ಆತ ತುಂಬಾ ಬೇಗ ಕೋಪಗೊಳ್ಳುತ್ತಿದ್ದ. ಇದಕ್ಕಾಗಿ ಆತ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ. ಆತ ನಿಯಮಿತವಾಗಿ ಔಷಧ ತೆಗೆದುಕೊಳ್ಳುತ್ತಾನೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಔಷದವನ್ನು ನಿಯಮಿತವಾಗಿ ತೆಗೆದುಕೊಳ್ಳದೇ ಇದ್ದರೆ ರೋಗ ಮರುಕಳಿಸುವ ಸಾಧ್ಯತೆ ಇದೆ ಎಂದು ತ್ರಿಪಾಠಿ ಹೇಳಿದ್ದಾರೆ. 

share
Next Story
X