Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್ ಚುನಾವಣೆಯಿಂದ ಹಿಂಸಾಚಾರ...

ಮ್ಯಾನ್ಮಾರ್ ಚುನಾವಣೆಯಿಂದ ಹಿಂಸಾಚಾರ ಉಲ್ಬಣದ ಸಾಧ್ಯತೆ: ವಿಶ್ವಸಂಸ್ಥೆ ಕಳವಳ

31 Jan 2023 7:49 PM IST
share
ಮ್ಯಾನ್ಮಾರ್ ಚುನಾವಣೆಯಿಂದ ಹಿಂಸಾಚಾರ ಉಲ್ಬಣದ ಸಾಧ್ಯತೆ: ವಿಶ್ವಸಂಸ್ಥೆ ಕಳವಳ

ವಿಶ್ವಸಂಸ್ಥೆ, ಜ.31: ದಂಗೆಪೀಡಿತ ಮ್ಯಾನ್ಮಾರ್ ನಲ್ಲಿ ಈ ವರ್ಷ ಚುನಾವಣೆ ನಡೆಸುವ ಸೇನಾಡಳಿತದ ನಿರ್ಧಾರವು ಹಿಂಸೆಯ ದಳ್ಳುರಿಗೆ ತುಪ್ಪ ಸುರಿಯುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ ಮಂಗಳವಾರ ಕಳವಳ ವ್ಯಕ್ತಪಡಿಸಿದ್ದು ಯೋಜಿತ ಚುನಾವಣೆಯ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಒಗ್ಗಟ್ಟಿನ ನಿಲುವು ತಳೆಯಬೇಕಿದೆ ಎಂದು ಆಗ್ರಹಿಸಿದೆ.

‌ಮ್ಯಾನ್ಮಾರ್ ನಲ್ಲಿ 2020ರಲ್ಲಿ ನಡೆದ ಚುನಾವಣೆಯಲ್ಲಿ ಬಹುಮತ ಪಡೆದ ಆಂಗ್ಸಾನ್ ಸೂಕಿ ನೇತೃತ್ವದ ಸರಕಾರವನ್ನು 2 ವರ್ಷದ ಹಿಂದೆ ಅಲ್ಲಿನ ಸೇನೆ ಕ್ಷಿಪ್ರಕ್ರಾಂತಿಯಲ್ಲಿ ಪದಚ್ಯುತಗೊಳಿಸಿ ಆಡಳಿತವನ್ನು ಕೈಗೆತ್ತಿಕೊಂಡಿತ್ತು. ಅಂದಿನಿಂದ ಸೂಕಿ ಸೇರಿದಂತೆ ವಿಪಕ್ಷದ ಪ್ರಮುಖ ಮುಖಂಡರನ್ನು ಬಂಧನದಲ್ಲಿಡಲಾಗಿದೆ. ದೇಶದಲ್ಲಿ ವಿಧಿಸಲಾಗಿರುವ ತುರ್ತುಪರಿಸ್ಥಿತಿ ಜನವರಿ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದ್ದು, ಆ ಬಳಿಕ ಹೊಸದಾಗಿ ಚುನಾವಣೆ ನಡೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ.

ಮಿಲಿಟರಿ ನೇತೃತ್ವದಲ್ಲಿ ನಡೆಯುವ ಯಾವುದೇ ಚುನಾವಣೆ ಹಿಂಚಾಚಾರ ಉಲ್ಬಣಕ್ಕೆ ಪ್ರೇರಣೆಯಾಗಲಿದೆ. ಇದು ದೇಶಕ್ಕೆ ಎದುರಾಗಿರುವ ಬಿಕ್ಕಟ್ಟನ್ನು ವಿಸ್ತರಿಸಲಿದೆ ಮತ್ತು ದೇಶವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮತ್ತು ಸ್ಥಿರತೆಯ ಹಳಿಗೆ  ಮರಳುವ ಹಾದಿಯನ್ನು ಕಠಿಣಗೊಳಿಸಲಿದೆ ಎಂದು ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ ನೊಯಿಲೀನ್ ಹೇಝರ್ ಹೇಳಿದ್ದಾರೆ. ಸೇನಾಡಳಿತದ ಯೋಜಿತ ಚುನಾವಣೆಯ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಬಲವಾದ ಏಕೀಕೃತ ನಿಲುವನ್ನು ತಳೆಯಬೇಕೆಂದು ಅವರು ಆಗ್ರಹಿಸಿದ್ದಾರೆ.

ಮ್ಯಾನ್ಮಾರ್ ನಲ್ಲಿ ಚುನಾವಣೆಯು ಮತ್ತೊಂದು ಮೋಸವಾಗಿದೆ ಎಂದು ಅಮೆರಿಕ ಹೇಳಿದ್ದರೆ ಚುನಾವಣೆ ನಡೆಯುವುದನ್ನು ಬೆಂಬಲಿಸುವುದಾಗಿ ಮ್ಯಾನ್ಮಾರ್ನ ಮಿತ್ರ ರಶ್ಯ ಪ್ರತಿಕ್ರಿಯಿಸಿದೆ.

`ರಾಜಕೀಯ ನಾಯಕರು, ನಾಗರಿಕ ಸಮಾಜದ ಮುಖಂಡರು ಮತ್ತು ಪತ್ರಕರ್ತರಿಗೆ  ನಿರಂತರ ಬೆದರಿಕೆ, ಬಂಧನ ಮತ್ತು ಕಿರುಕುಳದ ನಡುವೆ ಚುನಾವಣೆಗಳನ್ನು ನಡೆಸಲು ಮಿಲಿಟರಿ ಆಡಳಿತ ಉದ್ದೇಶಿಸಿರುವ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅವರ  ವಕ್ತಾರರು ಸೋಮವಾರ ಹೇಳಿದ್ದಾರೆ. ಮ್ಯಾನ್ಮಾರ್ ನ ಜನತೆ ತಮ್ಮ ರಾಜಕೀಯ ಹಕ್ಕುಗಳನ್ನು ಮುಕ್ತವಾಗಿ ಚಲಾಯಿಸಲು ಸಾಧ್ಯವಾಗುವ ಪರಿಸ್ಥಿತಿ ಇಲ್ಲದಿರುವಾಗ ಈ ಪ್ರಸ್ತಾವಿತ ಚುನಾವಣೆಯು ಅಸ್ಥಿರತೆಯನ್ನು ಮತ್ತಷ್ಟು ಹೆಚ್ಚಿಸುವ ಅಪಾಯವಿದೆ ಎಂದು ವಕ್ತಾರರ ಹೇಳಿಕೆ ತಿಳಿಸಿದೆ.

ಆದರೆ ಅಂತರಾಷ್ಟ್ರೀಯ ಒತ್ತಡಕ್ಕೆ ಮಣಿಯದ ಮ್ಯಾನ್ಮಾರ್ ನ ಸೇನಾಡಳಿತ ಈ ವರ್ಷ ಚುನಾವಣೆ ನಡೆಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು ದೇಶದಲ್ಲಿ ನೂತನ ಚುನಾವಣಾ ಕಾನೂನನ್ನು ಜಾರಿಗೊಳಿಸಿದ್ದು ಇದಕ್ಕೆ ಅನುಗುಣವಾಗಿ ಆಸಕ್ತ ರಾಜಕೀಯ ಪಕ್ಷಗಳು ತಮ್ಮ ಹೆಸರನ್ನು ಮರುನೋಂದಾಯಿಸಿಕೊಂಡರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿದೆ ಎಂದು ಸೂಚಿಸಿದೆ.

ಈಗಿನ ಪರಿಸ್ಥಿತಿಯಲ್ಲಿ ಯೋಜಿತ ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತ ಆಗಿರದು ಎಂದು ವಿಶ್ವಸಂಸ್ಥೆಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. 

share
Next Story
X