Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2023-24ರಲ್ಲಿ ಭಾರತದ ಆರ್ಥಿಕತೆಯ...

2023-24ರಲ್ಲಿ ಭಾರತದ ಆರ್ಥಿಕತೆಯ ಬೆಳವಣಿಗೆ ಶೇ.6ರಿಂದ ಶೇ.6.8: ಆರ್ಥಿಕ ಸಮೀಕ್ಷೆಯ ಅಂದಾಜು

31 Jan 2023 9:50 PM IST
share
2023-24ರಲ್ಲಿ ಭಾರತದ ಆರ್ಥಿಕತೆಯ ಬೆಳವಣಿಗೆ ಶೇ.6ರಿಂದ ಶೇ.6.8: ಆರ್ಥಿಕ ಸಮೀಕ್ಷೆಯ ಅಂದಾಜು

ಹೊಸದಿಲ್ಲಿ,ಜ.31: ಪ್ರಸ್ತುತ ವರ್ಷ (2022-23)ದ ಶೇ.7ರ ಮುನ್ನಂದಾಜಿಗೆ ಹೋಲಿಸಿದರೆ ಭಾರತದ ಜಿಡಿಪಿ ಬೆಳವಣಿಗೆಯು 2023-24ನೇ ಹಣಕಾಸು ವರ್ಷದಲ್ಲಿ ಶೇ.6ರಿಂದ ಶೇ.6.8ರಷ್ಟು ಬೆಳವಣಿಗೆಯಾಗಲಿದೆ ಎಂದು ಸರಕಾರದ ವಾರ್ಷಿಕ ಆರ್ಥಿಕ ಸಮೀಕ್ಷೆಯು ಅಂದಾಜಿಸಿದೆ.

ಕೇಂದ್ರ ಮುಂಗಡಪತ್ರದ ಮುನ್ನಾದಿನವಾದ ಮಂಗಳವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸಿದ ಸಮೀಕ್ಷೆಯು ದೇಶದ ಆರ್ಥಿಕತೆಯ ಸ್ಥಿತಿಯನ್ನು ವಿವರಿಸಿದೆ ಮತ್ತು ವೇಗದ ಬೆಳವಣಿಗೆಗಾಗಿ ನೀತಿ ಕ್ರಮಗಳನ್ನು ಸೂಚಿಸಿದೆ. ಆದರೆ ಹೆಚ್ಚಿನ ಸಲ ಆರ್ಥಿಕ ಸಮೀಕ್ಷೆಗಳು ಗುರಿಗಳನ್ನು ತಪ್ಪಿಸಿಕೊಂಡಿವೆ.

ಸರಕಾರದ ಮುನ್ನಂದಾಜು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯ ಅಂದಾಜಿಗಿಂತ ಹೆಚ್ಚಿದೆ. ಐಎಂಎಫ್ 2023-24ನೇ ಸಾಲಿಗೆ ಶೇ.6.1ರಷ್ಟು ಭಾರತದ ಆರ್ಥಿಕತೆಯ ಬೆಳವಣಿಗೆಯನ್ನು ಅಂದಾಜಿಸಿದೆ.

ಸರಕಾರದ ಆರ್ಥಿಕ ಸಮೀಕ್ಷೆಯು 2023-24ರಲ್ಲಿ ನೈಜ ಪರಿಭಾಷೆಯಲ್ಲಿ ಶೇ.6.5ರಷ್ಟು ಮೂಲ ಜಿಡಿಪಿ ಬೆಳವಣಿಗೆಯನ್ನು ಅಂದಾಜಿಸಿದೆ. ಕೆಳಮುಖ ಪರಿಷ್ಕರಣೆಯ ಹೊರತಾಗಿಯೂ 2023ನೇ ವಿತ್ತವರ್ಷಕ್ಕೆ ಬೆಳವಣಿಗೆ ಅಂದಾಜು ಹೆಚ್ಚಿನ ಎಲ್ಲ ಪ್ರಮುಖ ಆರ್ಥಿಕತೆಗಳಿಗಿಂತ ಮೇಲೆಯೇ ಇದೆ ಮತ್ತು ಸಾಂಕ್ರಾಮಿಕದ ಮೊದಲಿನ ದಶಕದಲ್ಲಿಯ ಭಾರತೀಯ ಆರ್ಥಿಕತೆಯ ಸರಾಸರಿ ಬೆಳವಣಿಗೆ ದರಕ್ಕಿಂತ ಕೊಂಚ ಹೆಚ್ಚೇ ಇದೆ ಎಂದು ಸಮೀಕ್ಷೆಯ ವರದಿಯು ತಿಳಿಸಿದೆ. 2021-22ರಲ್ಲಿ ಭಾರತೀಯ ಆರ್ಥಿಕತೆಯು ಶೇ.8.7ರಷ್ಟು ಬೆಳವಣಿಗೆಗೆ ಸಾಕ್ಷಿಯಾಗಿತ್ತು.

ಕೊರೋನವೈರಸ್ ಸಾಂಕ್ರಾಮಿಕದ ಸಂದರ್ಭದಲ್ಲಿ ಮತ್ತು ಯುರೋಪ್ನಲ್ಲಿ ಬಿಕ್ಕಟ್ಟಿನಿಂದಾಗಿ ನಿಧಾನಗೊಂಡಿದ್ದ ಆರ್ಥಿಕತೆಯು ಕಳೆದುಕೊಂಡಿದ್ದನ್ನು ಹೆಚ್ಚುಕಡಿಮೆ ಮರಳಿ ಪಡೆದುಕೊಂಡಿದೆ ಮತ್ತು ಚೇತರಿಸಿಕೊಂಡಿದೆ ಎಂದೂ ಸಮೀಕ್ಷೆಯು ಹೇಳಿದೆ. ಹಣದುಬ್ಬರವು ವೈಯಕ್ತಿಕ ಬಳಕೆಯನ್ನು ತಡೆಯುವಷ್ಟು ಹೆಚ್ಚಿಲ್ಲ ಅಥವಾ ಹೂಡಿಕೆಗೆ ಪ್ರೇರಣೆಯನ್ನು ದುರ್ಬಲಗೊಳಿಸುವಷ್ಟು ಕಡಿಮೆಯೂ ಇಲ್ಲ ಎಂದು ಅದು ತಿಳಿಸಿದೆ. ಜಾಗತಿಕ ಸರಕುಗಳ ಬೆಲೆಯೇರಿಕೆಯಿಂದಾಗಿ ಅಧಿಕ ಮಟ್ಟದಲ್ಲಿಯೇ ಉಳಿದುಕೊಳ್ಳಬಹುದಾದ ಚಾಲ್ತಿ ಖಾತೆ ಕೊರತೆಯ ಮೇಲೆ ನಿಗಾಯಿರಿಸುವ ಅಗತ್ಯಕ್ಕೂ ಆರ್ಥಿಕ ಸಮೀಕ್ಷೆಯು ಒತ್ತು ನೀಡಿದೆ.

share
Next Story
X