Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವಭಾರತಿ ವಿವಿ ವಿವಾದ: ಅಮರ್ತ್ಯ ಸೇನ್...

ವಿಶ್ವಭಾರತಿ ವಿವಿ ವಿವಾದ: ಅಮರ್ತ್ಯ ಸೇನ್ ರಿಗೆ ಭೂದಾಖಲೆಗಳನ್ನು ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

31 Jan 2023 10:43 PM IST
share
ವಿಶ್ವಭಾರತಿ ವಿವಿ ವಿವಾದ: ಅಮರ್ತ್ಯ ಸೇನ್ ರಿಗೆ ಭೂದಾಖಲೆಗಳನ್ನು ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಕೋಲ್ಕತಾ,ಜ.31: ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ರನ್ನು ಸೋಮವಾರ ಅವರ ಬೋಲ್ಪುರ ನಿವಾಸದಲ್ಲಿ ಭೇಟಿಯಾದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ವಿಶ್ವಭಾರತಿ ವಿವಿಯು ತೆರವುಗೊಳಿಸುವಂತೆ ಅವರಿಗೆ ನೋಟಿಸ್ ಜಾರಿಗೊಳಿಸಿದ್ದ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಹಸ್ತಾಂತರಿಸಿದರು.

ಸೇನ್ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ಆದೇಶಿಸುವಾಗ ಈ ವಿಷಯ ಕುರಿತು ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದೂ ಬ್ಯಾನರ್ಜಿ ತಿಳಿಸಿದರು.ವಿಶ್ವಭಾರತಿಯು ಕೇಂದ್ರೀಯ ವಿವಿಯಾಗಿದ್ದು,ಪ್ರಧಾನಿಗಳು ಅದರ ಕುಲಾಧಿಪತಿಗಳಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ವಿವಿಯ ಕುಲಪತಿ ಬಿದ್ಯುತ್ ಚಕ್ರವರ್ತಿ ತಿಳಿಸಿದ್ದಾರೆ.

ಬೀರ್ಭೂಮ್ ಜಿಲ್ಲೆಯ ಬೋಲ್ಪುರದ ಶಾಂತಿನಿಕೇತನದಲ್ಲಿ ಸೇನ್ ಅವರ ಕುಟುಂಬಕ್ಕೆ 1.25 ಎಕರೆ ಭೂಮಿಯನ್ನು ಲೀಸ್ಗೆ ನೀಡಲಾಗಿತ್ತು,ಆದರೆ ವಿವಿಯ ಹೆಚ್ಚುವರಿ 0.13 ಎಕರೆ ಭೂಮಿಯು ಸೇನ್ ಅವರ ಅಕ್ರಮ ಸ್ವಾಧೀನದಲ್ಲಿದೆ ಎಂದು ಜ.24ರಂದು ಜಾರಿಗೊಳಿಸಿದ್ದ ನೋಟಿಸ್ನಲ್ಲಿ ಆರೋಪಿಸಿದ್ದ ವಿಶ್ವಭಾರತಿ,ಅದನ್ನು ತೆರವುಗೊಳಿಸುವಂತೆ ಅವರಿಗೆ ಸೂಚಿಸಿತ್ತು. ವಿವಿಯು ಹಿಂದೆಯೂ ಸೇನ್ ಅವರಿಗೆ ಇಂತಹುದೇ ನೋಟಿಸ್ಗಳನ್ನು ಕಳುಹಿಸಿತ್ತು.

ಸೇನ್ ಅವರಿಗೆ ಭವಿಷ್ಯದಲ್ಲಿ ಕಿರುಕುಳ ನೀಡಲಾಗುವುದಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಬ್ಯಾನರ್ಜಿ ಅವರಿಗೆ ಭೂದಾಖಲೆಗಳನ್ನು ಹಸ್ತಾಂತರಿಸಿದ್ದಾರೆ ಎಂದು ಟಿಎಂಸಿ ತಿಳಿಸಿದೆ.ಸೇನ್ ಬಂಗಾಳವನ್ನು ಮಾತ್ರವಲ್ಲ,ಇಡೀ ದೇಶವನ್ನು ಮತ್ತು ವಿಶ್ವವನ್ನು ವೈಭವೀಕರಿಸಿದ್ದಾರೆ ಎಂದು ಹೇಳಿದ ಬ್ಯಾನರ್ಜಿ, ಬಿಜೆಪಿಯು ಅವರನ್ನು ಕೀಳಾಗಿ ನೋಡುವ ಧೈರ್ಯವನ್ನು ಇನ್ನೊಮ್ಮೆ ಮಾಡಕೂಡದು ಎಂದರು.
‘ಆದರೆ,ಭೂದಾಖಲೆಗಳ ಹಸ್ತಾಂತರದೊಂದಿಗೆ ವಿಷಯವು ಇಲ್ಲಿಗೇ ಅಂತ್ಯಗೊಳ್ಳುತ್ತದೆ ಎಂದು ನಾನು ಭಾವಿಸಿಲ್ಲ. ನನ್ನನ್ನು ನನ್ನ ಮನೆಯಿಂದ ಹೊರದಬ್ಬಲು ಬಯಸಿರುವವರ ಉದ್ದೇಶದಲ್ಲಿ ರಾಜಕೀಯವಡಗಿದೆ. ನಾನು ಜಾತ್ಯತೀತ ದೃಷ್ಟಿಕೋನಕ್ಕೆ ಆದ್ಯತೆ ನೀಡುತ್ತೇನೆ. ಕೋಮು ರಾಜಕೀಯದಲ್ಲಿ ತೊಡಗಿರುವವರು ಇದನ್ನು ಒಪ್ಪುವುದಿಲ್ಲ ’ಎಂದು ಸೇನ್ ಹೇಳಿದರು.81ರ ಹರೆಯದ ಸೇನ್ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ನೀತಿಗಳ ಕಟು ಟೀಕಾಕಾರರಾಗಿದ್ದಾರೆ.

share
Next Story
X