Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೇನಾಮಿ ವ್ಯವಹಾರಗಳ ಕಾಯ್ದೆಗೆ ಸಂಬಂಧಿಸಿದ...

ಬೇನಾಮಿ ವ್ಯವಹಾರಗಳ ಕಾಯ್ದೆಗೆ ಸಂಬಂಧಿಸಿದ ಆದೇಶವನ್ನು ಮರುಪರಿಶೀಲಿಸಿ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರಕಾರ ಅರ್ಜಿ

31 Jan 2023 11:39 PM IST
share
ಬೇನಾಮಿ ವ್ಯವಹಾರಗಳ ಕಾಯ್ದೆಗೆ ಸಂಬಂಧಿಸಿದ ಆದೇಶವನ್ನು ಮರುಪರಿಶೀಲಿಸಿ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರಕಾರ ಅರ್ಜಿ

ಹೊಸದಿಲ್ಲಿ, ಜ. 31: ಬೇನಾಮಿ ವ್ಯವಹಾರಗಳ (ನಿಷೇಧ) ಕಾಯ್ದೆಯ ಜೈಲು ಅವಧಿಗೆ ಸಂಬಂಧಿಸಿದ ವಿಧಿಯು ಅಸಾಂವಿಧಾನಿಕವಾಗಿದೆ ಎಂದು ಘೋಷಿಸುವ 2022ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
ಪ್ರಕರಣವನ್ನು ಬಹಿರಂಗ ನ್ಯಾಯಾಲಯದಲ್ಲಿ ವಿಚಾರಣೆಗೆ ಎತ್ತಿಕೊಳ್ಳುವ ಬಗ್ಗೆ ಪರಿಶೀಲಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ಮಂಗಳವಾರ ಒಪ್ಪಿಕೊಂಡಿದ್ದಾರೆ. ಸಾಮಾನ್ಯವಾಗಿ ಸುಪ್ರೀಂ ಕೋರ್ಟ್ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಸಂಬಂಧಪಟ್ಟ ನ್ಯಾಯಾಧೀಶರ ಕೋಣೆಗಳಲ್ಲಿ ನಡೆಸಲಾಗುತ್ತದೆ.

ಬೇನಾಮಿ ವ್ಯವಹಾರಗಳ (ನಿಷೇಧ) ಕಾಯ್ದೆಯ 3(2) ವಿಧಿಯು ಸ್ವೇಚ್ಛಾಚಾರದ ಅಧಿಕಾರವನ್ನು ನೀಡುತ್ತದೆ ಎನ್ನುವುದು ಮೇಲ್ನೋಟಕ್ಕೇ ಕಂಡುಬರುತ್ತದೆ; ಹಾಗಾಗಿ ಅದು ಅಸಾಂವಿಧಾನಿಕವಾಗಿದೆ ಎಂದು ಕಳೆದ ವರ್ಷದ ಆಗಸ್ಟ್ನಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಆ ವಿಧಿಯ ಪ್ರಕಾರ, 1988 ಸೆಪ್ಟಂಬರ್ 5 ಮತ್ತು 2016 ಅಕ್ಟೋಬರ್ 25ರ ನಡುವೆ ಬೇನಾಮಿ ವ್ಯವಹಾರ ನಡೆಸಿರುವ ವ್ಯಕ್ತಿಯೊಬ್ಬನಿಗೆ ಮೂರು ವರ್ಷಗಳವರೆಗಿನ ಜೈಲುವಾಸದ ಶಿಕ್ಷೆಯನ್ನು ನೀಡಬಹುದಾಗಿದೆ ಎಂದು ಈ ವಿಧಿ ಹೇಳುತ್ತದೆ.

ಕಾಯ್ದೆಯ ಈ ವಿಧಿಯು ಸಂವಿಧಾನದ 20(1) ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಾನೂನು ಜಾರಿಗೆ ಬಂದ ಅವಧಿಯಲ್ಲಿ ಅಪರಾಧವಾಗಿರದ ಯಾವುದೇ ಅಪರಾಧಕ್ಕಾಗಿ ಯಾರಿಗೂ ಶಿಕ್ಷೆ ವಿಧಿಸಬಾರದು ಎಂದು ಸಂವಿಧಾನದ ಈ ವಿಧಿ ಹೇಳುತ್ತದೆ.
ಬೇನಾಮಿ ವ್ಯವಹಾರವೆಂದರೆ, ಯಾವುದಾದರೊಂದು ವ್ಯವಹಾರ ಅಥವಾ ಗುತ್ತಿಗೆಯನ್ನು ಹಣ ಹಾಕಿದ ವ್ಯಕ್ತಿಯ ಬದಲಿಗೆ ಬೇರೊಬ್ಬ ವ್ಯಕ್ತಿಯು ನಡೆಸುವುದು.ಅದೂ ಅಲ್ಲದೆ, ಬೇನಾಮಿ ವ್ಯವಹಾರಗಳ (ನಿಷೇಧ) ತಿದ್ದುಪಡಿ ಕಾಯ್ದೆಯನ್ನು ಪೂರ್ವಾನ್ವಯವಾಗಿ ಜಾರಿಗೊಳಿಸುವಂತಿಲ್ಲ ಎಂಬುದಾಗಿಯೂ ನ್ಯಾಯಾಲಯ ತೀರ್ಪು ನೀಡಿತ್ತು. ಯಾವುದೇ ಆಸ್ತಿಯು ಬೇನಾಮಿ ವ್ಯವಹಾರದ ಭಾಗವಾಗಿದ್ದರೆ ಅದನ್ನು ಕೇಂದ್ರ ಸರಕಾರವು ಮುಟ್ಟುಗೋಲು ಹಾಕಿಕೊಳ್ಳಬಹುದಾಗಿದೆ ಎಂದು ತಿದ್ದುಪಡಿ ಕಾಯ್ದೆಯು ಹೇಳಿತ್ತು.

ಆಗಸ್ಟ್ನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು, ವಿವಾದಾತೀತ ಕಾನೂನು ವಿಧಿಗಳನ್ನೂ ರದ್ದುಗೊಳಿಸಿದೆ ಎಂದು ಕೇಂದ್ರ ಸರಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಹೇಳಿದರು. ‘‘ಆದೇಶ ಮರುಪರಿಶೀಲನಾ ಅರ್ಜಿಯ ಬಹಿರಂಗ ವಿಚಾರಣೆಯನ್ನು ನಾವು ಬಯಸುತ್ತೇವೆ’’ ಎಂದು ಅವರು ಹೇಳಿದರು. ‘‘ಈ ತೀರ್ಪಿನ ಹಿನ್ನೆಲೆಯಲ್ಲಿ, ಬೇನಾಮಿ ಕಾಯ್ದೆಯ ಕೆಲವು ವಿಧಿಗಳು ವಿವಾದಾತೀತವಾಗಿದ್ದರೂ ಭಾರತದಾದ್ಯಂತ ನ್ಯಾಯಾಲಯಗಳು ತುಂಬಾ ಆದೇಶಗಳನ್ನು ನೀಡುತ್ತಿವೆ’’ ಎಂದು ಅವರು ನುಡಿದರು.
ಅಕ್ಟೋಬರ್ನಲ್ಲಿ, ದಿಲ್ಲಿ ಹೈಕೋರ್ಟ್ ಸುಪ್ರೀಂ ಕೋರ್ಟ್ನ ತೀರ್ಪನ್ನು ಉಲ್ಲೇಖಿಸಿ, ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ಈ ಕಾಯ್ದೆಯನ್ವಯ ದಾಖಲಿಸಲಾಗಿದ್ದ ಮೊಕದ್ದಮೆಯನ್ನು ರದ್ದುಪಡಿಸಿತ್ತು. ಹಾಗಾಗಿ, ಕೇಂದ್ರ ಸರಕಾರ ಈಗ ನೆಮ್ಮದಿ ಪಡೆಯಲು ಸುಪ್ರೀಂ ಕೋರ್ಟ್ನತ್ತ ಧಾವಿಸಿದೆ.

share
Next Story
X