ಚಿಕ್ಕಮಗಳೂರು | ಪಿಕಪ್ ಢಿಕ್ಕಿ: ಪಾದಚಾರಿ ಮೃತ್ಯು
ಚಿಕ್ಕಮಗಳೂರು, ಫೆ.1: ಪಿಕಪ್ ವಾಹನ ಢಿಕ್ಕಿ (Accident) ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಮೃತರನ್ನು ಉದ್ದೇಬೋರನಹಳ್ಳಿ ನಿವಾಸಿ ನೇಮರಾಜ(55) ಎಂದು ಗುರುತಿಸಲಾಗಿದೆ.
ಈ ಬಗ್ಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story