Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಬಜೆಟ್ 2023 | ಭದ್ರಾ ಮೇಲ್ದಂಡೆ...

ಕೇಂದ್ರ ಬಜೆಟ್ 2023 | ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಹರ್ಷ

1 Feb 2023 2:05 PM IST
share
ಕೇಂದ್ರ ಬಜೆಟ್ 2023 | ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಹರ್ಷ

ಹಾವೇರಿ: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5300 ಕೋಟಿ ಘೋಷಣೆ ಮಾಡಿದ್ದಾರೆ. ಅದನ್ನು ನಾನು ಸ್ವಾಗತ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತಪಡಿಸಿದರು.

ಇಂದು ಬೆಂಗಳೂರಿನಿಂದ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮಕ್ಕೆ ಆಗಮಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಕ್ಟರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ  ಪ್ತಸ್ತಾವನೆ ಕಳಿಸಿದ್ದೆವು. ಹೀಗಾಗಿ 5300 ಕೋಟಿ ನೀಡಿದ್ದು ಸ್ವಾಗತಾರ್ಹ ಎಂದರು.

ಕರ್ನಾಟಕದ ಹಲವಾರು ಯೋಜನೆಗಳಲ್ಲಿ ಇದು ಮೊದಲು ರಾಷ್ಟ್ರೀಯ ಯೋಜನೆ. ಈ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಅನುನಾದ ಘೋಷಣೆ ಮಾಡಿದ್ದು ಸಂತಸದ ಸಂಗತಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

'ರೈತರ ಫಲವತ್ತಾದ ಭೂಮಿಯಲ್ಲಿ ಕಾರಿಡಾರ್ ಬೇಡ'

ಬ್ಯಾಡಗಿ ಇಂಡಸ್ಟ್ರಿಯಲ್  ಕಾರಿಡಾರ್ ಭೂ ಸ್ವಾದೀನಕ್ಕೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಫಲವತ್ತಾದ ಭೂಮಿ ಇರುವ ಕಾರಣ ರೈತರು ವಿರೋಧ ಮಾಡಿದ್ದಾರೆ. ಎಲ್ಲಿ ಫಲವತ್ತಾದ ಭೂಮಿ ಇರುತ್ತದೆ, ಅದನ್ನು ತೆಗೆದುಕೊಳ್ಳದೆ ಬಂಜರು ಭೂಮಿ ತಗೊಂಡು ಕೈಗಾರಿಕಾ ಕಾರಿಡಾರ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ. ಅದಕ್ಕಾಗಿಯೇ ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ ಗೆ ಭೂ ಸ್ವಾಧೀನ ಪ್ರಕ್ರಿಯೆ ಆದೇಶ ಹಿಂಪಡೆದಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಬೇರೆ ಕಡೆ ಎಲ್ಲಿ ಕಾರಿಡಾರ್ ಮಾಡಬೇಕು ಎಂಬುದರ ಬಗ್ಗೆ ಜಮೀನು ಹುಡುಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

"ಈ ಸಾಲಿನ ಕೇಂದ್ರೀಯ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5,300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ಶ್ರೀಮತಿ @nsitharaman ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಿ ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು" : ಮುಖ್ಯಮಂತ್ರಿ @BSBommai pic.twitter.com/BrRAYZQdZR

— CM of Karnataka (@CMofKarnataka) February 1, 2023
share
Next Story
X