Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಮುಂದೆ ವ್ಯವಹಾರಗಳಲ್ಲಿ ಸಾಮಾನ್ಯ...

ಇನ್ನು ಮುಂದೆ ವ್ಯವಹಾರಗಳಲ್ಲಿ ಸಾಮಾನ್ಯ ಗುರುತು ಚೀಟಿಯಾಗಿ ಪಾನ್ ಬಳಕೆ

1 Feb 2023 8:19 PM IST
share
ಇನ್ನು ಮುಂದೆ ವ್ಯವಹಾರಗಳಲ್ಲಿ ಸಾಮಾನ್ಯ ಗುರುತು ಚೀಟಿಯಾಗಿ ಪಾನ್ ಬಳಕೆ

ಹೊಸದಿಲ್ಲಿ,ಫೆ.1: ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ 2023-24ನೇ ಸಾಲಿನ ಕೇಂದ್ರ ಮುಂಗಡಪತ್ರದಲ್ಲಿ ವ್ಯವಹಾರಗಳನ್ನು ಸುಲಭಗೊಳಿಸುವ ಪ್ರಮುಖ ಕ್ರಮವಾಗಿ ಪಾನ್ ಎಂದೇ ಜನಪ್ರಿಯವಾಗಿ ಕರೆಯಲ್ಪಡುವ 10 ಅಂಕಿಗಳ ಕಾಯಂ ಖಾತೆ ಸಂಖ್ಯೆಯನ್ನು ಇನ್ನು ಮುಂದೆ ವ್ಯವಹಾರಗಳಿಗಾಗಿ ಸಾಮಾನ್ಯ ಗುರುತು ಚೀಟಿಯಾಗಿ ಬಳಸಲಾಗುವುದು ಎಂದು ಪ್ರಕಟಿಸಿದರು.

ಆದಾಯ ತೆರಿಗೆ ಇಲಾಖೆಯು ಪಾನ್ ಕಾರ್ಡ್‌ನ್ನು ವ್ಯಕ್ತಿ,ಸಂಸ್ಥೆ ಅಥವಾ ಕಂಪನಿಗೆ ನೀಡುತ್ತದೆ. ವಿವಿಧ ಸರಕಾರಿ ಏಜೆನ್ಸಿಗಳಿಗೆ ಒಂದೇ ಮಾಹಿತಿಯನ್ನು ಪ್ರತ್ಯೇಕವಾಗಿ ಸಲ್ಲಿಸುವ ಅಗತ್ಯ ಕುರಿತಂತೆ ಸೀತಾರಾಮನ್, ‘ಏಕೀಕೃತ ಫೈಲಿಂಗ್ ವ್ಯವಸ್ಥೆ’ಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಸಾಮಾನ್ಯ ಪೋರ್ಟಲ್‌ವೊಂದರಲ್ಲಿ ಸರಳೀಕೃತ ನಮೂನೆಗಳಲ್ಲಿ ಮಾಹಿತಿ ಅಥವಾ ರಿಟರ್ನ್‌ನ ಇಂತಹ ಸಲ್ಲಿಕೆಯನ್ನು ಸಲ್ಲಿಸಿದವರ ಆಯ್ಕೆಯ ಮೇರೆಗೆ ಅದನ್ನು ಇತರ ಏಜೆನ್ಸಿಗಳೊಂದಿಗೆ ಹಂಚಿಕೊಳ್ಳಲಾಗುವುದು ಎಂದರು.

ವ್ಯವಹಾರ ಸುಗಮತೆಯನ್ನು ಹೆಚ್ಚಿಸಲು 39,000ಕ್ಕೂ ಅಧಿಕ ಅನುಸರಣೆಗಳನ್ನು ಕಡಿಮೆ ಮಾಡಲಾಗಿದೆ ಮತ್ತು 3,400ಕ್ಕೂ ಅಧಿಕ ಕಾನೂನು ನಿಬಂಧನೆಗಳನ್ನು ನಿರಪರಾಧೀಕರಿಸಲಾಗಿದೆ ಎಂದು ಸತತ ಐದನೇ ಬಾರಿಗೆ ಮುಂಗಡಪತ್ರವನ್ನು ಮಂಡಿಸಿದ ಸೀತಾರಾಮನ್ ತಿಳಿಸಿದರು.

ಸರಕಾರವು ರಾಷ್ಟ್ರೀಯ ಡಾಟಾ ನೀತಿಯನ್ನು ತರಲಿದ್ದು,ಇದು ವೈಯಕ್ತಿಕ ಡಾಟಾವನ್ನು ಅನಾಮಧೇಯಗೊಳಿಸುವ ಜೊತೆಗೆ ಕೆವೈಸಿ ಪ್ರಕ್ರಿಯೆಯನ್ನು ಸರಳಗೊಳಿಸಲಿದೆ ಎಂದರು.

ಕಿರು,ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್‌ಎಂಇ)ಗಳು ಒಪ್ಪಂದಗಳನ್ನು ಕಾರ್ಯಗತಗೊಳಿಸುವಲ್ಲಿ ವಿಫಲಗೊಂಡರೆ ವಿವಾದ ಸೇ ವಿಶ್ವಾಸ್ ಯೋಜನೆಯ ಭಾಗವಾಗಿ ಕಾರ್ಯಕ್ಷಮತೆ ಠೇವಣಿಯ ಶೇ.95ರಷ್ಟನ್ನು ಸಣ್ಣ ಉದ್ಯಮಗಳಿಗೆ ಮರಳಿಸಲಾಗುವುದು ಎಂದು ವಿತ್ತಸಚಿವೆ ತಿಳಿಸಿದರು.

ಶೇ.100ರಷ್ಟು ವಿವಾದಿತ ತೆರಿಗೆ ಮತ್ತು ಶೇ.25ರಷ್ಟು ವಿವಾದಿತ ದಂಡ ಅಥವಾ ಬಡ್ಡಿ ಅಥವಾ ಶುಲ್ಕವನ್ನು ಪಾವತಿಸಿದರೆ ತೆರಿಗೆ ನಿರ್ಧಾರ ಅಥವಾ ಮರುನಿರ್ಧಾರಕ್ಕೆ ಸಂಬಂಧಿಸಿದಂತೆ ವಿವಾದಿತ ತೆರಿಗೆ,ಬಡ್ಡಿ,ದಂಡ ಅಥವಾ ಶುಲ್ಕಗಳನ್ನು ಇತ್ಯರ್ಥಗೊಳಿಸಲು ವಿವಾದ ಸೇ ವಿಶ್ವಾಸ್ ಅವಕಾಶವನ್ನು ಕಲ್ಪಿಸುತ್ತದೆ.ಇ-ನ್ಯಾಯಾಲಯಗಳ ಮೂರನೇ ಹಂತಕ್ಕೆ ಚಾಲನೆ ನೀಡಲಾಗುವುದು ಎಂದೂ ಸೀತಾರಾಮನ್ ತಿಳಿಸಿದರು.

share
Next Story
X