Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಫ್‌ಪಿಒ ವಾಪಸ್‌ ಪಡೆದ ನಂತರವೂ...

ಎಫ್‌ಪಿಒ ವಾಪಸ್‌ ಪಡೆದ ನಂತರವೂ ಮುಂದುವರಿದ ಅದಾನಿ ಷೇರು ಮೌಲ್ಯಗಳ ಕುಸಿತ: 100 ಬಿಲಿಯನ್‌ ಡಾಲರ್‌ಗೂ ಅಧಿಕ ನಷ್ಟ

2 Feb 2023 2:07 PM IST
share
ಎಫ್‌ಪಿಒ ವಾಪಸ್‌ ಪಡೆದ ನಂತರವೂ ಮುಂದುವರಿದ ಅದಾನಿ ಷೇರು ಮೌಲ್ಯಗಳ ಕುಸಿತ: 100 ಬಿಲಿಯನ್‌ ಡಾಲರ್‌ಗೂ ಅಧಿಕ ನಷ್ಟ

ಹೊಸದಿಲ್ಲಿ: "ಷೇರುದಾರರ ಹಿತಾಸಕ್ತಿಗಳನ್ನು" ಕಾಪಾಡುವ ಉದ್ದೇಶದಿಂದ ತಾನು ತನ್ನ ರೂ 20,000 ಕೋಟಿ ಮೌಲ್ಯದ ಎಫ್‌ಪಿಒ ಅನ್ನು ವಾಪಸ್‌ ಪಡೆಯುತ್ತಿರುವುದಾಗಿ ಹಾಗೂ ಹೂಡಿಕೆದಾರರ ಹಣ ವಾಪಸ್‌ ನೀಡುವುದಾಗಿ ಅದಾನಿ ಸಮೂಹ ಘೋಷಿಸಿರುವುದು ಸಂಸ್ಥೆಯ ಆರ್ಥಿಕ ವಹಿವಾಟುಗಳ ಕುರಿತಂತೆ ಹೂಡಿಕೆದಾರರಿಗೆ ಇನ್ನಷ್ಟು ಆತಂಕ ಸೃಷ್ಟಿಯಾಗಿದೆಯೆಂಬುದಕ್ಕೆ ಪುರಾವೆಯೆಂಬಂತೆ ಗುರುವಾರ ಕೂಡ ಅದಾನಿ ಸಂಸ್ಥೆಗಳ ಕಂಪೆನಿಗಳ ಷೇರುಗಳ ಮೌಲ್ಯ ಮತ್ತೆ ಕುಸಿದಿವೆ. 

ಅದಾನಿ ಸಂಸ್ಥೆ ವ್ಯಾಪಕ ಅವ್ಯವಹಾರಗಳಲ್ಲಿ ತೊಡಗಿಕೊಂಡಿದೆ ಎಂದು ಕಳೆದ ವಾರ ಅಮೆರಿಕಾದ ಹಿಂಡೆನ್‌ಬರ್ಗ್‌ ಸಂಸ್ಥೆ ಪ್ರಕಟಿಸಿದ ಸಂಶೋಧನಾ ವರದಿ ಬೆನ್ನಲ್ಲೇ ಉಂಟಾದ ಷೇರು ಮೌಲ್ಯಗಳ ಕುಸಿತದ ಮುಂದುವರಿಕೆಯೊಂದಿಗೆ ಅದಾನಿ ಸಂಸ್ಥೆಯ ನಷ್ಟ 100 ಬಿಲಿಯನ್‌ ಡಾಲರ್‌ಗೂ ಅಧಿಕವಾಗಿದೆ.‌

ಅದಾನಿ ಸಮೂಹದ ಪ್ರಮುಖ ಸಂಸ್ಥೆಯಾಗಿರುವ ಅದಾನಿ ಎಂಟರ್‌ಪ್ರೈಸಸ್‌ನ ಷೇರು ಮೌಲ್ಯ ಇಂದು ಶೇ 10 ರಷ್ಟು ಕುಸಿತ ಕಂಡಿದ್ದರೆ, ಇದೇ ಪರಿಸ್ಥಿತಿ ಅದಾನಿ ಪೋರ್ಟ್ಸ್‌ ಎಂಡ್‌ ಸ್ಪೆಷಲ್‌ ಇಕಮಾಮಿಕ್‌ ಝೋನ್‌,ಅದಾನಿ ಟೋಟಲ್‌ ಗ್ಯಾಸ್‌, ಅದಾನಿ ಗ್ರೀನ್‌ ಎನರ್ಜಿ ಹಾಗೂ ಅದಾನಿ ಟ್ರಾನ್ಸ್‌ಮಿಷನ್‌ನದ್ದಾಗಿತ್ತು. ಅದಾನಿ ಪವರ್‌ ಮತ್ತು ಅದಾನಿ ವಿಲ್ಮಾರ್‌ ಷೇರು ಬೆಲೆಗಳು ತಲಾ ಶೇ 5 ರಷ್ಟು ಕುಸಿತ ಕಂಡಿವೆ.

ಮಧ್ಯಾಹ್ನದ ಟ್ರೇಡಿಂಗ್‌ ಅವಧಿಯಲ್ಲಿ ಅದಾನಿ ಷೇರು ಬೆಲೆಗಳಲ್ಲಿ ಇನ್ನಷ್ಟು ಏರಿಳಿತಿಗಳ ಸಾಧ್ಯತೆಯಿರಬಹುದೆಂದು ತಜ್ಞರು ಹೇಳಿದ್ದಾರೆ. ಈಗಾಗಲೇ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ದೇಶದ ಬ್ಯಾಂಕುಗಳಲ್ಲಿ ಅದಾನಿ ಸಂಸ್ಥೆಗಳ ಸಾಲ ಮತ್ತಿತರ ಮಾಹಿತಿಯನ್ನು ಕೇಳಿದೆ. ಅದಾನಿ ಸಮೂಹದ ಸೆಕ್ಯುರಿಟಿಗಳ ಆಧಾರದಲ್ಲಿ ತನ್ನ ಕ್ಲೈಂಟ್‌ಗಳಿಗೆ ಮಾರ್ಜಿನ್‌ ಸಾಲ ವಿಸ್ತರಿಸುವುದನ್ನು ಸಿಟಿಗ್ರೂಪ್‌ನ ವೆಲ್ತ್‌ ಯುನಿಟ್‌ ಈಗಾಗಲೇ ನಿಲ್ಲಿಸಿದೆ.

ಅದಾನಿ ಸಮೂಹದ ಬಗ್ಗೆ ಹಿಂಡೆನ್‌ಬರ್ಗ್‌ ವರದಿಯಲ್ಲಿರುವ ವಿಚಾರಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ವಿಪಕ್ಷಗಳು ಪಟ್ಟು ಹಿಡಿಯುವ ಎಲ್ಲಾ ಸಾಧ್ಯತೆಗಳಿವೆ. ಈ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆಗೆ ಆಗ್ರಹಿಸಲಾಗುವುದು ಎಂದು ಕಾಂಗ್ರೆಸ್‌ ಸಂಸದ ಮನೀಶ್‌ ತಿವಾರಿ ಹೇಳಿದ್ದಾರೆ.

share
Next Story
X