Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಮೀನು ಮಂಜೂರಾಗಿದ್ದರೂ ಇನ್ನೂ...

ಜಾಮೀನು ಮಂಜೂರಾಗಿದ್ದರೂ ಇನ್ನೂ ಜೈಲುಗಳಲ್ಲಿ ಕೊಳೆಯುತ್ತಿರುವ 5,000 ವಿಚಾರಣಾಧೀನ ಕೈದಿಗಳು: ವರದಿ

2 Feb 2023 10:01 PM IST
share
ಜಾಮೀನು ಮಂಜೂರಾಗಿದ್ದರೂ ಇನ್ನೂ ಜೈಲುಗಳಲ್ಲಿ ಕೊಳೆಯುತ್ತಿರುವ 5,000 ವಿಚಾರಣಾಧೀನ ಕೈದಿಗಳು: ವರದಿ

ಹೊಸದಿಲ್ಲಿ,ಫೆ.2:ಜಾಮೀನು ಮಂಜೂರಾಗಿದ್ದರೂ 2022ರ ಅಂತ್ಯದಲ್ಲಿ ದೇಶಾದ್ಯಂತದ ಜೈಲುಗಳಲ್ಲಿ ಸುಮಾರು 5,000 ವಿಚಾರಣಾಧೀನ ಕೈದಿಗಳು ಕೊಳೆಯುತ್ತಿದ್ದರು ಮತ್ತು ಈ ಪೈಕಿ 1,417 ಕೈದಿಗಳು ಡಿಸೆಂಬರ್‌ನಿಂದೀಚಿಗೆ ಬಿಡುಗಡೆಗೊಂಡಿದ್ದಾರೆ ಎಂದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (NALSA)ವು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.

ಜಾಮೀನು ಷರತ್ತುಗಳನ್ನು ಪೂರೈಸಲು ಸಾಧ್ಯವಾಗದೇ ಜೈಲುಗಳಲ್ಲಿಯೇ ಬಾಕಿಯಾಗಿರುವ ವಿಚಾರಣಾಧೀನ ಕೈದಿಗಳ ಕುರಿತು ಮಾಹಿತಿಯನ್ನು ಒದಗಿಸುವಂತೆ ಸರ್ವೋಚ್ಚ ನ್ಯಾಯಾಲಯವು ನ.29ರಂದು ರಾಜ್ಯಗಳಿಗೆ ನಿರ್ದೇಶನ ನೀಡಿದ್ದ ಹಿನ್ನೆಲೆಯಲ್ಲಿ ಪ್ರಾಧಿಕಾರವು ಈ ಅಂಕಿ ಅಂಶಗಳನ್ನು ಸಲ್ಲಿಸಿದೆ.

ತಾನು ಕೇಳಿರುವ ಮಾಹಿತಿಗಳನ್ನು ಪ್ರಾಧಿಕಾರಕ್ಕೆ ಒದಗಿಸುವಂತೆ ರಾಜ್ಯಗಳಿಗೆ ಆದೇಶಿಸಿದ್ದ ಸರ್ವೋಚ್ಚ ನ್ಯಾಯಾಲಯ(Supreme Court)ವು, ಪ್ರಾಧಿಕಾರವು ಈ ಸಮಸ್ಯೆಯನ್ನು ನಿಭಾಯಿಸಲು ಮಾರ್ಗಗಳನ್ನು ಸೂಚಿಸುತ್ತದೆ ಮತ್ತು ಅಗತ್ಯವಿದ್ದಲ್ಲಿ ಕಾನೂನು ನೆರವನ್ನು ಒದಗಿಸುತ್ತದೆ ಎಂದು ತಿಳಿಸಿತ್ತು.

ನ್ಯಾಯಾಲಯದ ಆದೇಶಕ್ಕೆ ಸ್ಪಂದಿಸಿದ್ದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳು ಮಾಹಿತಿಗಳನ್ನು ರಾಷ್ಟ್ರೀಯ ಪ್ರಾಧಿಕಾರಕ್ಕೆ ಸಲ್ಲಿಸಿದ್ದವು. ಬಳಿಕ,ವಿಚಾರಣಾಧೀನ ಕೈದಿಗಳಿಗೆ ಕಾನೂನು ನೆರವು ಮತ್ತು ಬಿಡುಗಡೆಯ ಬಗ್ಗೆ ಪ್ರಗತಿ ವರದಿಗಳನ್ನು ಸಲ್ಲಿಸುವಂತೆ ಅವುಗಳಿಗೆ ಸೂಚಿಸಲಾಗಿತ್ತು.2,357 ಕೈದಿಗಳಿಗೆ ಕಾನೂನು ನೆರವು ಒದಗಿಸಲಾಗಿದೆ ಮತ್ತು ಈ ಪೈಕಿ 1,147 ಕೈದಿಗಳನ್ನು ಬಿಡುಗಡೆಗೊಳಿಸಲಾಗಿದೆ ಎನ್ನುವುದನ್ನು ಈ ಪ್ರಗತಿ ವರದಿಗಳು ತೋರಿಸಿವೆ.

ಡಿಸೆಂಬರ್ ಅಂತ್ಯದ ವೇಳೆಗೆ ಮಹಾರಾಷ್ಟ್ರದ ಜೈಲುಗಳಲ್ಲಿ ಜಾಮೀನು ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ 703 ವಿಚಾರಣಾಧೀನ ಕೈದಿಗಳಿದ್ದು,ಈ ಪೈಕಿ 215 ಜನರಿಗೆ ಕಾನೂನು ನೆರವು ಒದಗಿಸಲಾಗಿದೆ ಮತ್ತು 314 ಕೈದಿಗಳನ್ನು ಬಿಡುಗಡೆಗೊಳಿಸಲಾಗಿದೆ. ದಿಲ್ಲಿಯ ಜೈಲುಗಳಲ್ಲಿ ಇಂತಹ 287 ಕೈದಿಗಳಿದ್ದು,ಈ ಪೈಕಿ ಈ ಪೈಕಿ 217 ಜನರಿಗೆ ಕಾನೂನು ನೆರವು ಒದಗಿಸಲಾಗಿದೆ ಮತ್ತು 71 ಕೈದಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಪ್ರಾಧಿಕಾರವು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

ಜಾಮೀನು ಭದ್ರತೆಯನ್ನು ಒದಗಿಸಲು ಮಹಾರಾಷ್ಟ್ರದಲ್ಲಿಯ ಇಂತಹ ಕೈದಿಗಳು ಅಸಮರ್ಥರಾಗಿರುವುದು ಬಹು ದೊಡ್ಡ ತೊಡಕಾಗಿದೆ. ಆದರೆ ದಿಲ್ಲಿಯಲ್ಲಿ ಕೈದಿಗಳು ಹಲವಾರು ಪ್ರಕರಣಗಳಲ್ಲಿ ಆರೋಪಿಗಳಾಗಿರುವುದು ಅವರು ಜಾಮೀನು ಲಭಿಸಿದರೂ ಜೈಲಿನಿಂದ ಬಿಡುಗಡೆಗೊಳ್ಳದಿರಲು ಕಾರಣವಾಗಿದೆ ಎಂದು ವರದಿಯಲ್ಲಿ ತಿಳಿಸಿರುವ ಪ್ರಾಧಿಕಾರವು,ಎಲ್ಲ ಪ್ರಕರಣಗಳಲ್ಲಿ ತಮಗೆ ಜಾಮೀನು ನೀಡುವವರೆಗೆ ಜಾಮೀನು ಬಾಂಡ್ಗಳನ್ನು ಸಲ್ಲಿಸಲು ದಿಲ್ಲಿಯಲ್ಲಿನ ಕೈದಿಗಳು ಸಿದ್ಧರಿಲ್ಲ ಎಂದು ಹೇಳಿದೆ.

ನ್ಯಾಷನಲ್ ಇನ್ಫಾರ್ಮಾಟಿಕ್ಸ್ ಸೆಂಟರ್ (NIC) ಕೂಡ ಈ ವಿಷಯದಲ್ಲಿ ವ್ಯವಹರಿಸುತ್ತದೆ ಮತ್ತು ಪ್ರಮಾಣಿತ ಕಾರ್ಯಾಚರಣೆ ಕಾರ್ಯವಿಧಾನವೊಂದನ್ನು ಅದು ಸಿದ್ಧಪಡಿಸಿದೆ. ಎನ್ಐಸಿಯ ಇ-ಪ್ರಿಸನ್ ಸಾಫ್ಟವೇರ್ ದೇಶಾದ್ಯಂತ ಸುಮಾರು 1,300 ಜೈಲುಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,ಜೈಲು ಅಧಿಕಾರಿಗಳು ಕೈದಿಗಳ ಜಾಮೀನು ದಿನಾಂಕಗಳನ್ನು ಅದರಲ್ಲಿ ನಮೂದಿಸುತ್ತಾರೆ. ಜಾಮೀನು ಮಂಜೂರಾದ ದಿನಾಂಕದಿಂದ ಏಳು ದಿನಗಳಲ್ಲಿ ಆರೋಪಿಯು ಬಿಡುಗಡೆಗೊಳ್ಳದಿದ್ದರೆ ಇ-ಪ್ರಿಸನ್ ಸಾಫ್ಟ್ವೇರ್ ಸ್ವಯಂಚಾಲಿತವಾಗಿ ಅದನ್ನು ಸೂಚಿಸುತ್ತದೆ.

ಇದೇ ವೇಳೆ,ಸಂಬಂಧಿತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಇ-ಮೇಲ್ ಅನ್ನು ಕಳುಹಿಸಲಾಗುತ್ತದೆ ಮತ್ತು ಅದು ಆರೋಪಿಯನ್ನು ಬಿಡುಗಡೆಗೊಳಿಸದಿರಲು ಕಾರಣವನ್ನು ಪತ್ತೆ ಹಚ್ಚುತ್ತದೆ ಎಂದು ಪ್ರಾಧಿಕಾರವು ವರದಿಯಲ್ಲಿ ತಿಳಿಸಿದೆ.

share
Next Story
X