Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫ್ಘಾನ್: ಮಹಿಳೆಯರ ಹಕ್ಕಿನ ಕುರಿತು...

ಅಫ್ಘಾನ್: ಮಹಿಳೆಯರ ಹಕ್ಕಿನ ಕುರಿತು ಧ್ವನಿ ಎತ್ತಿದ ಪ್ರೊಫೆಸರ್ ಗೆ ಥಳಿತ; ಬಂಧನ

3 Feb 2023 10:36 PM IST
share
ಅಫ್ಘಾನ್: ಮಹಿಳೆಯರ ಹಕ್ಕಿನ ಕುರಿತು ಧ್ವನಿ ಎತ್ತಿದ ಪ್ರೊಫೆಸರ್ ಗೆ ಥಳಿತ; ಬಂಧನ

ಕಾಬೂಲ್, ಫೆ.3:   ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಉನ್ನತ ಶಿಕ್ಷಣ ನಿಷೇಧಿಸಿದ ತಾಲಿಬಾನ್ ಆದೇಶದ ವಿರುದ್ಧ ಟಿವಿ ವಾಹಿನಿಯ ನೇರಪ್ರಸಾರ ಕಾರ್ಯಕ್ರಮದಲ್ಲಿ ಧ್ವನಿ ಎತ್ತಿದ ಪ್ರೊಫೆಸರ್ರನ್ನು ಥಳಿಸಿ ಬಂಧಿಸಲಾಗಿದೆ ಎಂದು ಅವರ ಆಪ್ತರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಡಿಸೆಂಬರ್ ನಲ್ಲಿ ಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕೋದ್ಯಮ ಉಪನ್ಯಾಸಕ ಇಸ್ಮಾಯಿಲ್ ಮಷಾಲ್ (Ismail mashal) ತನ್ನ ಪದವಿ ಪ್ರಮಾಣ ಪತ್ರವನ್ನು ಹರಿದುಹಾಕುವ ಮೂಲಕ ಮಹಿಳೆಯರಿಗೆ ಉನ್ನತ ಶಿಕ್ಷಣ ನಿಷೇಧಕ್ಕೆ ವಿರೋಧ ಸೂಚಿಸಿದ್ದರು. ಓರ್ವ ವ್ಯಕ್ತಿ ಮತ್ತು ಶಿಕ್ಷಕನಾಗಿ, ಮಹಿಳೆಯರ ಹಕ್ಕುಗಳ ಪ್ರತಿಪಾದನೆಯ ನಿಟ್ಟಿನಲ್ಲಿ ಏನನ್ನೂ ಮಾಡದ ಸ್ಥಿತಿಯಲ್ಲಿದ್ದೇನೆ. ಆದ್ದರಿಂದ ನನ್ನ ಪ್ರಮಾಣಪತ್ರಗಳು ನಿಷ್ಪ್ರಯೋಜಕವಾಗಿವೆ ಎಂದು ಅದನ್ನು ಹರಿದುಹಾಕಿದ್ದೇನೆ. ನನ್ನ ಜೀವಕ್ಕೆ ಸಂಚಕಾರ ಬಂದರೂ ತೊಂದರೆಯಿಲ್ಲ,  ಸಹೋದರಿಯರ ಪರ ಇನ್ನೂ ಧ್ವನಿ ಎತ್ತಲಿದ್ದೇನೆ  ಎಂದು ಇಸ್ಮಾಯಿಲ್ ಹೇಳಿದ್ದರು.

ಇತ್ತೀಚಿನ ದಿನಗಳಲ್ಲಿ ಅವರು ಕಾಬೂಲ್ನ ಸುತ್ತಮುತ್ತ ಸಂಚರಿಸುತ್ತಾ ಮಹಿಳೆಯರಿಗೆ ಹಾಗೂ ಪುರುಷರಿಗೆ ಉಚಿತ ಪುಸ್ತಕ ಹಂಚುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅವರನ್ನು ನಿರ್ದಯವಾಗಿ ಥಳಿಸಿ ಅತ್ಯಂತ ಅಗೌರವದ ರೀತಿಯಲ್ಲಿ ಬಂಧಿಸಲಾಗಿದ್ದು ಈಗ ಅವರ ಬಗ್ಗೆ ಯಾವುದೇ ಮಾಹಿತಿಯಿಲ್ಲ  ಎಂದು ಇಸ್ಮಾಯಿಲ್ ಅವರ ಆಪ್ತರು ಶುಕ್ರವಾರ ಹೇಳಿದ್ದಾರೆ.

ಶಿಕ್ಷಕ ಇಸ್ಮಾಯಿಲ್ ಮಷಾಲ್ (Ismail mashal) ಕಳೆದ ಕೆಲ ಸಮಯದಿಂದ ವ್ಯವಸ್ಥೆಯ ವಿರುದ್ಧ ಪ್ರಚೋದನಾತ್ಮಕ ಕ್ರಿಯೆಯಲ್ಲಿ ತೊಡಗಿದ್ದರು. ಅವರನ್ನು ವಿಚಾರಣೆಗಾಗಿ ಭದ್ರತಾ ಸಂಸ್ಥೆಗಳು ಕರೆದೊಯ್ದಿವೆ ಎಂದು ಮಾಹಿತಿ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಅಬ್ದುಲ್ ಹಕ್ ಹಮದ್ ಹೇಳಿದ್ದಾರೆ.

ಇದನ್ನು ಓದಿ: ಅಜ್ಜ-ಅಜ್ಜಿಯನ್ನು ಭೇಟಿ ಮಾಡಲು ಇಚ್ಛೆಯಿಲ್ಲದಿದ್ದರೆ...: ಮಕ್ಕಳ ಪರವಾಗಿ ತೀರ್ಪು ನೀಡಿದ ಇಟಲಿ ಕೋರ್ಟ್ ಹೇಳಿದ್ದೇನು?

share
Next Story
X