Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಐಎಂಎಫ್ ಷರತ್ತು ಕಲ್ಪನೆಗೆ ಮೀರಿದೆ,...

ಐಎಂಎಫ್ ಷರತ್ತು ಕಲ್ಪನೆಗೆ ಮೀರಿದೆ, ಒಪ್ಪಿಕೊಳ್ಳಲೇಬೇಕು: ಪಾಕ್ ಪ್ರಧಾನಿ

3 Feb 2023 11:01 PM IST
share
ಐಎಂಎಫ್ ಷರತ್ತು ಕಲ್ಪನೆಗೆ ಮೀರಿದೆ, ಒಪ್ಪಿಕೊಳ್ಳಲೇಬೇಕು: ಪಾಕ್ ಪ್ರಧಾನಿ

ಇಸ್ಲಮಾಬಾದ್, ಫೆ.3: ಆರ್ಥಿಕ ನೆರವು ಒದಗಿಸಲು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(IMF) ಮುಂದಿರಿಸಿದ ಷರತ್ತುಗಳು ಕಲ್ಪನೆಗೆ ಮೀರಿದ್ದರೂ ಅದನ್ನು ಒಪ್ಪಿಕೊಳ್ಳದೆ ದಾರಿಯಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಶಹಬಾಝ್ ಶರೀಫ್ ಶುಕ್ರವಾರ ಹೇಳಿದ್ದಾರೆ.

`ಹೆಚ್ಚಿನ ವಿವರ ನೀಡಲು ನಾನು ಬಯಸುವುದಿಲ್ಲ. ಆದರೆ ನಮ್ಮ ಆರ್ಥಿಕ ಸವಾಲುಗಳು ಊಹೆಗೂ ಮೀರಿವೆ ಮತ್ತು ಐಎಂಎಫ್ನ ನೆರವು ಪಡೆಯಬೇಕಿದ್ದರೆ ನಾವು ಐಎಂಎಫ್ ಮುಂದಿರಿಸಿರುವ ಕಲ್ಪನೆಗೂ ಮೀರಿದ ಸವಾಲುಗಳನ್ನು ಒಪ್ಪಿಕೊಳ್ಳಬೇಕಾಗಿದೆ ಎಂದವರು ಹೇಳಿದ್ದಾರೆ.

ಆರ್ಥಿಕ  ಬಿಕ್ಕಟ್ಟಿಗೆ ಸಿಲುಕಿರುವ ಪಾಕಿಸ್ತಾನ ಐಎಂಎಫ್  ನಿಂದ ತುರ್ತು ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದೆ, ಆದರೆ ಈ ಕುರಿತ ಮಾತುಕತೆ ಇನ್ನೂ ಅಂತಿಮ ಹಂತದಲ್ಲಿದೆ. ಆರ್ಥಿಕ ನೆರವು ಮಂಜೂರು ಮಾಡಬೇಕಿದ್ದರೆ ಐಎಂಎಫ್ ಮುಂದಿರಿಸಿದ ಕೆಲವು ಕಠಿಣ ಷರತ್ತುಗಳು ಪಾಕ್ ಸರಕಾರಕ್ಕೆ ಬಿಸಿತುಪ್ಪವಾಗಿದೆ. ತೆರಿಗೆ ಹೆಚ್ಚಳ ಮತ್ತು ಸಬ್ಸಿಡಿ ರದ್ದತಿಯ ಷರತ್ತಿಗೆ ಒಪ್ಪಿದರೆ ಅಕ್ಟೋಬರ್ನಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಹಿನ್ನಡೆಯಾಗುವ ಭೀತಿ ಸರಕಾರಕ್ಕಿದೆ. 

ಈ ಮಧ್ಯೆ, ದೇಶದ ವಿದೇಶಿ ವಿನಿಮಯ ದಾಸ್ತಾನು ಮತ್ತೆ 3.1 ಶತಕೋಟಿ ಡಾಲರ್ಗೆ ಕುಸಿದಿದ್ದು ಇದು ಮೂರು ವಾರಗಳ ಆಮದಿಗೆ ಸಾಕಾಗಬಹುದು ಎಂದು ಪಾಕಿಸ್ತಾನದ ಸೆಂಟ್ರಲ್ ಬ್ಯಾಂಕ್ ಹೇಳಿದೆ. ದೇಶದಲ್ಲಿ ದೈನಂದಿನ ಅಗತ್ಯದ ವಸ್ತುಗಳ ಕೊರತೆ ಹೆಚ್ಚುತ್ತಿರುವಂತೆಯೇ ಹಣದುಬ್ಬರದ ಪ್ರಮಾಣ ಕಳೆದ 48 ವರ್ಷಗಳಲ್ಲೇ ಗರಿಷ್ಟ ಮಟ್ಟಕ್ಕೆ ತಲುಪಿದೆ ಎಂದು ಮಾಧ್ಯಮಗಳ ವರದಿ ಹೇಳಿದೆ.

ಪಾಕಿಸ್ತಾನ 2019ರಲ್ಲಿ ಐಎಂಎಫ್ನಿಂದ 6 ಶತಕೋಟಿ ಡಾಲರ್ನಷ್ಟು ಸಾಲ ಪಡೆಯಲು ಶಕ್ತವಾಗಿತ್ತು. ಈ ಮೊತ್ತಕ್ಕೆ  2022ರಲ್ಲಿ ಮತ್ತೆ 1 ಶತಕೋಟಿ ಡಾಲರ್ ಹೆಚ್ಚುವರಿ ಸಾಲ ಒದಗಿಸಿದೆ. ಆದರೆ ಸಾಲ ಮರುಪಾವತಿಸಲು ಬಾಕಿ ಇರುವುದರಿಂದ ಇದೀಗ ಪಾಕ್ ಕೋರಿರುವ ಹೊಸ ಸಾಲ ಮಂಜೂರುಮಾಡಲು ಐಎಂಎಫ್ ಕೆಲವು ಕಠಿಣ ಷರತ್ತು ಮುಂದಿರಿಸಿದೆ.

share
Next Story
X