Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಣಿತ ಸ್ವಕಲಿಕೆಯ ಮಾದರಿಗಾಗಿ ದಕ್ಷಿಣ...

ಗಣಿತ ಸ್ವಕಲಿಕೆಯ ಮಾದರಿಗಾಗಿ ದಕ್ಷಿಣ ಭಾರತ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದ ಪೂರ್ಣಿಮಾ ಭಟ್

4 Feb 2023 12:07 AM IST
share
ಗಣಿತ ಸ್ವಕಲಿಕೆಯ ಮಾದರಿಗಾಗಿ ದಕ್ಷಿಣ ಭಾರತ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದ ಪೂರ್ಣಿಮಾ ಭಟ್

ಉಡುಪಿ: ಕೇರಳದ ತ್ರಿಶೂರಿನಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ ಸಿದ್ಧಾಪುರದ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಪೂರ್ಣಿಮಾ ಭಟ್‌ ದಕ್ಷಿಣ ಭಾರತ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ, ನವದೆಹಲಿ, ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಂತ್ರಜ್ಞಾನ ವಸ್ತು ಸಂಗ್ರಹಾಲಯ, ಬೆಂಗಳೂರು ಮತ್ತು ಕೇರಳ ಸರ್ಕಾರದ ಶಿಕ್ಷಣ ಸಚಿವಾಲಯವು ಜಂಟಿಯಾಗಿ ಈ ವಸ್ತು ಪ್ರದರ್ಶನವನ್ನು ಆಯೋಜಿಸಿದ್ದವು.

ವಸ್ತು ಪ್ರದರ್ಶನದಲ್ಲಿ ರಾಜ್ಯವನ್ನು‌ ಪ್ರತಿನಿಧಿಸಿದ ಪೂರ್ಣಿಮಾ ಭಟ್ ಅವರು ರೂಪಿಸಿದ ಗಣಿತದ ಸ್ವಕಲಿಕೆಯ ಸಾಮಗ್ರಿಗಳನ್ನು ಮೆಚ್ಚಿದ ತೀರ್ಪುಗಾರರು ಗಣಿತ ಕಲಿಕೆಯ ಕುರಿತು ಆಸಕ್ತಿ ಮತ್ತು ಪ್ರೀತಿ ಮೂಡಿಸಬಲ್ಲ ಈ ಸಾಮಗ್ರಿಗಳ ಬಳಕೆಯ ಕುರಿತು ಪ್ರಶ್ನೆಗಳನ್ನು ಕೇಳಿದ್ದರು. ಸಂಕಲನ ಹಾಗೂ ಗುಣಾಕಾರದಲ್ಲಿ ಬರುವ ಚಿಹ್ನೆಗಳ ಪರಿಕಲ್ಪನೆ ಮೂಡಿಸುವುದು, ತ್ರಿಭುಜದ ಮೂರು ಕೋನಗಳ ಒಟ್ಟು ಮೊತ್ತ 180° ಎಂಬುದನ್ನು ಚಟುವಟಿಕೆಯ ಮೂಲಕ  ತಿಳಿಸಿ ಕೊಡುವುದು, ಬೀಜೋಕ್ತಿಗಳ ಗುಣಾಕಾರ ಮಾಡುವುದು, ಬೀಜೋಕ್ತಿಗಳ ಸಾಮಾನ್ಯ ಅಪವರ್ತನ ಕಂಡು ಹಿಡಿಯುವುದು, ಭಿನ್ನರಾಶಿಗಳ ಕುರಿತು ಸ್ಪಷ್ಟ ಪರಿಕಲ್ಪನೆ ಮೂಡಿಸುವುದು, ಸಂಖ್ಯೆಗಳ ಮ. ಸಾ.ಅ ಹಾಗೂ ಲ.ಸಾ.ಅ  ಕಂಡುಹಿಡಿಯುವುದು, ಎರಡು ಸಮಾಂತರ ರೇಖೆಗಳನ್ನು ಒಂದು ಛೇದಕವು ಕತ್ತರಿಸಿದಾಗ ಉಂಟಾಗುವ ವಿವಿಧ ಬಗೆಯ ಕೋನಗಳ ಲಕ್ಷಣಗಳು, ವಿವಿಧ ವೃತ್ತ ಖಂಡದಲ್ಲಿ ಉಂಟಾಗುವ ಕೋನದ ಲಕ್ಷಣಗಳು, ಸರ್ವಸಮ ಆಕೃತಿಗಳು, ಸಮಮಿತಿಯ ಅಕ್ಷ ಹಾಗೂ ಅವುಗಳಲ್ಲಿ ಉಂಟಾಗುವ ಕೋನದ ಬೆಲೆ ಕಂಡು ಹಿಡಿಯುವುದು, ವಿವಿಧ ಮಾದರಿ ಕೋನಗಳನ್ನು  ಗುರುತಿಸುವುದು ಮುಂತಾದ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ಚಟುವಟಿಕೆಯ  ಮಾದರಿಯನ್ನು ಅವರು ರಚಿಸಿದ್ದರು.

ಸ್ಪರ್ಧೆಯ ಹೊರತಾಗಿಯೂ ಪೂರ್ಣಿಮಾ ಭಟ್‌ ರವರು ಗಣಿತವು ಕ್ಷಿಷ್ಟ ಎಂಬ ಭಯವನ್ನು ಹೋಗಲಾಡಿಸಲು ಸಾಕಷ್ಟು ಸ್ವಕಲಿಕೆಯ ಮಾದರಿಗಳನ್ನು ರಚಿಸಿದ್ದಾರೆ. ಆಯ್ದ ಕೆಲವು ಮಾದರಿಗಳನ್ನು ಅವರು ಚಲದೀನ್‌ ಸಿರಿಯನ್‌ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ನಡೆದ ದಕ್ಷಿಣ ಭಾರತ ವಿಜ್ಞಾನ ವಸ್ತು ಪ್ರದರ್ಶನಕ್ಕಾಗಿ ಕೊಂಡೊಯ್ದಿದ್ದರು. ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಗಣಿತ ಮಾದರಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ದಕ್ಷಿಣ ಭಾರತ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶವನ್ನು ಪಡೆದಿದ್ದರು.

ಈ ವರ್ಷದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿಯೂ ಅವರ ಮಾರ್ಗದರ್ಶನದಲ್ಲಿ ಮಳೆ ನೀರು ಇಂಗಿಸುವ ಕುರಿತಾದ ಅಧ್ಯಯನ ನಡೆಸಿ ಶಾಲೆಯ ವಿದ್ಯಾರ್ಥಿನಿ ಶ್ರೀನಿಧಿ ದಕ್ಷಿಣ ಭಾರತ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿರುವರು.

share
Next Story
X