Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗ್ಯಾಂಗ್‌ಸ್ಟರ್‌ಗಳನ್ನು ಸಾಮಾಜಿಕ...

ಗ್ಯಾಂಗ್‌ಸ್ಟರ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡುತ್ತಿದ್ದ 26 ಮಂದಿಯನ್ನು ಬಂಧಿಸಿದ ಪೊಲೀಸರು

4 Feb 2023 5:11 PM IST
share
ಗ್ಯಾಂಗ್‌ಸ್ಟರ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡುತ್ತಿದ್ದ 26 ಮಂದಿಯನ್ನು ಬಂಧಿಸಿದ ಪೊಲೀಸರು

ಜೈಪುರ್: ಗ್ಯಾಂಗ್‌ಸ್ಟರ್‌ಗಳಾದ ರೋಹಿತ್‌ ಗೊಡಾರ (Rohit Godara) ಮತ್ತು ರಿತಿಕ್ ಬಾಕ್ಸರ್‌ (Ritik Boxer) ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ ಅವರ ಪೋಸ್ಟ್‌ಗಳನ್ನು ಲೈಕ್‌ ಮಾಡಿದ್ದ 26 ಮಂದಿಯನ್ನು ನಗರದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಪ್ರಮುಖವಾಗಿ  ಈ ಇಬ್ಬರು ಗ್ಯಾಂಗ್‌ಸ್ಟರ್‌ಗಳ ಎರಡು ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಲೈಕ್‌ ಮಾಡಿ ಶೇರ್‌ ಮಾಡಿದವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತ (ಅಪರಾಧ) ಅಜಯ್‌ ಪಾಲ್‌ ಲಾಂಬ ಹೇಳಿದ್ದಾರೆ.

"ಕಳೆದ ಶನಿವಾರ ಡೇಸ್‌ ಹೋಟೆಲ್‌ನಲ್ಲಿ ನಡೆದ ಗುಂಡಿನ ದಾಳಿಯ ತಕ್ಷಣ ಬಾಕ್ಸರ್‌ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಹೊಣೆ ಹೊತ್ತುಕೊಂಡಿದ್ದ. ಇನ್ನೊಂದು ಪೋಸ್ಟ್‌ನಲ್ಲಿ ತನ್ನ ಜನರ ಮೇಲೆ ಗುಂಡಿಕ್ಕಿದ ಪೊಲೀಸರ ಮೇಲೆ ಪ್ರತೀಕಾರ ತೀರಿಸುವುದಾಗಿ ಆತ ಪಣ ತೊಟ್ಟಿದ್ದ. ಈ ಎರಡೂ ಪೋಸ್ಟ್‌ಗಳು ಅಪಾಯಕಾರಿಯಾಗಿದ್ದವು ಹಾಗೂ ಸಮಾಜದಲ್ಲಿ ಆತಂಕ ಸೃಷ್ಟಿಸುವಂತಹ ಪೋಸ್ಟ್‌ಗಳಾಗಿದ್ದವು," ಎಂದು ಲಾಂಬ ಹೇಳಿದ್ದಾರೆ.

ಗ್ಯಾಂಗ್‌ಸ್ಟರ್‌ಗಳನ್ನು ಆನ್‌ಲೈನ್‌ನಲ್ಲಿ ಫಾಲೋ ಮಾಡುವುದು ಅಥವಾ ಅವರನ್ನು ಬೆಂಬಲಿಸುವುದರ ವಿರುದ್ಧ ನಗರ ಪೊಲೀಸರು ಸಾರ್ವಜನಿಕರಿಗೆ ಈಗಾಗಲೇ ಕಠಿಣ ಎಚ್ಚರಿಕೆ ನೀಡಿದ್ದರು.

ಬಂಧಿತರನ್ನು ನಗರದ ವಿವಿಧ ಠಾಣೆಗಳಲ್ಲಿರಿಸಲಾಗಿದೆ. ಒಬ್ಬ ಶೂಟರ್‌ ಅಂತೂ ಬಾಕ್ಸರ್‌ನನ್ನು ಸಾಮಾಜಿಕ ಜಾಲತಾಣದ ಮೂಲಕ ಭೇಟಿಯಾಗಿದ್ದನೆನ್ನಲಾಗಿದೆ.

ಬಂಧಿತರಿಗೆ ಗ್ಯಾಂಗ್‌ಸ್ಟರ್‌ಗಳೊಂದಿಗೆ ಯಾವುದೇ ರೀತಿಯ ನಂಟಿದೆಯೇ ಎಂದು ತಿಳಿಯಲು ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

"ಕಳೆದ ಎರಡು ತಿಂಗಳುಗಳಲ್ಲಿ ಗ್ಯಾಂಗ್‌ಸ್ಟರ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡುತ್ತಿದ್ದ 300 ಮಂದಿಯನ್ನು ಠಾಣೆಗೆ ಬರ ಹೇಳಿ ನಂತರ ಅವರ ಮೇಲೆ ನಿಗಾ ಇಡಲು ಅವರ ಕುಟುಂಬಗಳಿಗೆ ಸೂಚಿಸಿ ಅವರನ್ನು ಬಿಟ್ಟುಬಿಡಲಾಗಿತ್ತು," ಎಂದು ಲಾಂಬ ಹೇಳಿದ್ದಾರೆ.

ಶುಕ್ರವಾರ ಬಂಧಿತರಾದವರಲ್ಲಿ ಹೆಚ್ಚಿನವರು ಗ್ಯಾಂಗ್‌ಸ್ಟರ್‌ಗಳೊಂದಿಗೆ ನಿಯಮಿತವಾಗಿ ಆನ್ ಲೈನ್‌ ಮೂಲಕ ಸಂಪರ್ಕದಲ್ಲಿದ್ದರು ಎಂದು ತಿಳಿಸಿದ ಪೊಲೀಸರು ಯುವಜನರು ಅವರಿಂದ ಪ್ರೇರಿತರಾಗುವುದನ್ನು ತಡೆಯಬೇಕಿದೆ ಎಂದಿದ್ದಾರೆ.

ಬಾಕ್ಸರ್‌ ಮತ್ತು ಗೊಡಾರ ಇಬ್ಬರೂ ಯುವಕರನ್ನು ಕ್ರಿಮಿನಲ್‌ ಕೃತ್ಯಕ್ಕೆ ಬಳಸುವುದರಿಂದ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅನುಸರಿಸಬಾರದು ಎಂದು ತಿಳಿಸಿದ ಪೊಲೀಸರು ಈ ಇಬ್ಬರು ಗ್ಯಾಂಗ್‌ಸ್ಟರ್‌ಗಳ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸುವಂತೆ ಸಂಬಂಧಿತ ಕಂಪೆನಿಗಳನ್ನು ಕೇಳಿಕೊಳ್ಳಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ನ್ಯುಮೋನಿಯಾದಿಂದ ಬಳಲುತ್ತಿದ್ದ ಮಗುವಿಗೆ ನಕಲಿ ವೈದ್ಯನಿಂದ ಕಬ್ಬಿಣದ ರಾಡಿನಿಂದ ಬರೆ; ಮಗು ಸಾವು

share
Next Story
X