Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮಲಯಾಳಂ ನಟ-ನಿರ್ದೇಶಕ ಬಾಬುರಾಜ್ ಬಂಧನ

ಮಲಯಾಳಂ ನಟ-ನಿರ್ದೇಶಕ ಬಾಬುರಾಜ್ ಬಂಧನ

5 Feb 2023 12:14 PM IST
share
ಮಲಯಾಳಂ ನಟ-ನಿರ್ದೇಶಕ ಬಾಬುರಾಜ್ ಬಂಧನ

ತಿರುವನಂತಪುರಂ: ಇಡುಕ್ಕಿ ಜಿಲ್ಲೆಯ ಆದಿಮಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದ ಸಂಬಂಧ ಮಲಯಾಳಂ ನಟ-ನಿರ್ದೇಶಕ ಬಾಬುರಾಜ್ (Malayalam actor Baburaj) ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಅವರು ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ಪೊಲೀಸರಿಗೆ ಶರಣಾದರು. ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು ಎಂದು  thenewsminute.com ವರದಿ ಮಾಡಿದೆ.

ಈ ಕುರಿತು PTI ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿರುವ ಪೊಲೀಸರು, "ಹೈಕೋರ್ಟ್ ನಿರ್ದೇಶನದನ್ವಯ ಅವರನ್ನು ಬಂಧಿಸಲಾಗಿತ್ತು. ಇಡುಕ್ಕಿಯ ಸ್ಥಳೀಯ ನ್ಯಾಯಾಲಯದಲ್ಲಿ ಅವರನ್ನು ಹಾಜರುಪಡಿಸಿದ ನಂತರ ಜಾಮೀನಿನ ಮೇಲೆ ಅವರು ಬಿಡುಗಡೆಯಾದರು" ಎಂದು ತಿಳಿಸಿದ್ದಾರೆ.

ವಂಚನೆಯ ಪ್ರಕರಣವು ಬಾಬುರಾಜ್ ಅವರ ಇಡುಕ್ಕಿಯಲ್ಲಿನ ರೆಸಾರ್ಟ್‌ಗೆ ಸಂಬಂಧಿಸಿದೆ. ಅವರ ರೆಸಾರ್ಟ್ ಕಂದಾಯ ವಸೂಲಾತಿ ಪ್ರಕ್ರಿಯೆಗೆ ಗುರಿಯಾಗಿದೆ ಎಂಬ ಅಂಶವನ್ನು ಮುಚ್ಚಿಟ್ಟು, ಅದನ್ನು ವ್ಯಕ್ತಿಯೊಬ್ಬರಿಗೆ ಭೋಗ್ಯಕ್ಕೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

2020ರಲ್ಲಿ ಬಾಬುರಾಜ್ ತಮ್ಮ ರೆಸಾರ್ಟ್ ಅನ್ನು ಅರುಣ್ ಎಂಬುವವರಿಗೆ ರೂ. 40 ಲಕ್ಷಕ್ಕೆ ಭೋಗ್ಯಕ್ಕೆ ನೀಡಿದ್ದರು. ಇದೇ ವೇಳೆ ಕೋವಿಡ್-19 ವ್ಯಾಪಿಸಿದ್ದರಿಂದ ರೆಸಾರ್ಟ್ ಅನ್ನು ಮುಚ್ಚಿಸಲಾಗಿತ್ತು. ಆದರೆ, ಕೋವಿಡ್ ನಿರ್ಬಂಧಗಳನ್ನು ತೆರವುಗೊಳಿಸಿದ ನಂತರ ಅರುಣ್ ರೆಸಾರ್ಟ್ ತೆರೆಯಲು ಪ್ರಯತ್ನಿಸಿದರಾದರೂ ಕೆಲವು ತಾಂತ್ರಿಕ ಸಮಸ್ಯೆಗಳಿಗೆ ಗುರಿಯಾದರು. ನಂತರ ಪರಿಶೀಲಿಸಿದಾಗ ಸ್ವತ್ತಿನ ವಿಚಾರದಲ್ಲಿ ಕೆಲವು ಸಮಸ್ಯೆಗಳಿರುವುದು ಕಂಡು ಬಂದಿತ್ತು. ಈ ಅಂಶಗಳನ್ನು ಭೋಗ್ಯಕ್ಕೆ ನೀಡುವಾಗ ನನ್ನಿಂದ ಮುಚ್ಚಿಡಲಾಗಿತ್ತು ಎಂದು ಅರುಣ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ತಾನು ನೀಡಿರುವ ಹಣವನ್ನು ಮರುಪಾವತಿಸುವಂತೆ ಅರುಣ್ ಅವರು ಬಾಬುರಾಜ್‌ಗೆ ಮನವಿ ಮಾಡಿದರೂ ಅವರದನ್ನು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅರುಣ್ ದೂರು ದಾಖಲಿಸಿದ್ದರು. ಹೀಗಾಗಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಬಾಬುರಾಜ್‌ಗೆ ಸಮನ್ಸ್ ಜಾರಿ ಮಾಡಿದ್ದರು ಹಾಗೂ ಕೇರಳ ಹೈಕೋರ್ಟ್ ಕೂಡಾ ಶನಿವಾರ ಪೊಲೀಸರೆದುರು ಹಾಜರಾಗುವಂತೆ ಅವರಿಗೆ ಸೂಚಿಸಿತ್ತು. ಪೊಲೀಸರು ಅವರನ್ನು ಬಂಧಿಸಿದ ನಂತರ, ಬಂಧನದ ಶಿಷ್ಟಾಚಾರಗಳನ್ನು ಪೂರೈಸಲು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು.

ಮೊದಲಿಗೆ ಖಳನಾಯಕನಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದ ಬಾಬುರಾಜ್, ನಂತರ ಹಾಸ್ಯ ನಟರಾಗಿ ಭಾರಿ ಜನಪ್ರಿಯರಾಗಿದ್ದಾರೆ. 'ಸಾಲ್ಟ್ ಎನ್ ಪೆಪ್ಪರ್', 'ಮಾಯಾಮೋಹಿನಿ', 'ಹನಿ ಬೀ'ಯಂತಹ ಯಶಸ್ವಿ ಚಿತ್ರಗಳಲ್ಲಿ ಅವರು ಹಾಸ್ಯನಟರಾಗಿ ಅಭಿನಯಿಸಿದ್ದಾರೆ. ಇದರೊಂದಿಗೆ 'ಪೆಪ್ಪರ್ ಎನ್ ಸಾಲ್ಟ್' ಸಿನಿಮಾದ ಎರಡನೆ ಭಾಗ ಹಾಗೂ 'ಬ್ಲ್ಯಾಕ್ ಕಾಫಿ' ಸಿನಿಮಾಗಳನ್ನೂ ಅವರು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಝ್ ಮುಷರಫ್ ನಿಧನ

share
Next Story
X