Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 58 ವರ್ಷದ ಮಹಿಳೆಯ ಅತ್ಯಾಚಾರವೆಸಗಿ...

58 ವರ್ಷದ ಮಹಿಳೆಯ ಅತ್ಯಾಚಾರವೆಸಗಿ ಹತ್ಯೆಗೈದ 16 ವರ್ಷದ ಬಾಲಕ

5 Feb 2023 3:16 PM IST
share
58 ವರ್ಷದ ಮಹಿಳೆಯ ಅತ್ಯಾಚಾರವೆಸಗಿ ಹತ್ಯೆಗೈದ 16 ವರ್ಷದ ಬಾಲಕ

ರೇವಾ (ಮಧ್ಯಪ್ರದೇಶ): 58 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ 16 ವರ್ಷದ ಬಾಲಕನೊಬ್ಬ, ನಂತರ ಮಹಿಳೆಯನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಿಂದ ವರದಿಯಾಗಿದೆ. ಈ ಕೃತ್ಯಕ್ಕೆ ಎರಡು ವರ್ಷಗಳ ಹಿಂದೆ ನಡೆದಿದ್ದ ಮೊಬೈಲ್ ಫೋನ್ ಕಳ್ಳತನ ಕಾರಣವಿರಬಹುದು ಎಂದು ರವಿವಾರ ಪೊಲೀಸರು ಶಂಕಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಈ ಕೃತ್ಯವು ಜನವರಿ 30ರ ರಾತ್ರಿಯಂದು ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಶ್‌ಪುರಿಯಲ್ಲಿ ನಡೆದಿದೆ. ಆರೋಪಿ ಬಾಲಕನು ಮಹಿಳೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಹಾಗೂ ಬಟ್ಟೆಯನ್ನು ತುರುಕಿ, ಆಕೆ ವಾಸವಿದ್ದ ನಿರ್ಮಾಣ ಹಂತದಲ್ಲಿದ್ದ ಮನೆಗೆ ಎಳೆದುಕೊಂಡು ಹೋಗಿದ್ದಾನೆ. ನಂತರ ಕುಡುಗೋಲಿನಿಂದ ಆಕೆಯ ತಲೆ ಮತ್ತು ದೇಹದ ಇತರ ಭಾಗಗಳ ಮೇಲೆ ಹಲ್ಲೆ ನಡೆಸಿ, ಆಕೆಯ ಗುಪ್ತಾಂಗವನ್ನು ದೊಣ್ಣೆಯಿಂದ ಗಾಯಗೊಳಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕನು ಎರಡು ವರ್ಷಗಳ ಹಿಂದೆ ನಮ್ಮ ಮನೆಯಲ್ಲಿ ಮೊಬೈಲ್ ಫೋನ್ ಕಳವು ಮಾಡಿದ್ದ ಮತ್ತು ಅದು ಬಯಲಾಗಿದ್ದರಿಂದ ಸೇಡು ತೀರಿಸಿಕೊಳ್ಳಲು ಬಯಸಿದ್ದ ಎಂದು  ಸಂತ್ರಸ್ತ ಮಹಿಳೆಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಲಾಲ್, ಫೆಬ್ರವರಿ 1ರಂದು ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ 58 ವರ್ಷದ ಮಹಿಳೆಯ ಮೃತದೇಹವಿದೆ ಎಂಬ ಮಾಹಿತಿ ಬಂದಿತು ಎಂದು ತಿಳಿಸಿದ್ದಾರೆ.

ಆರೋಪಿ ಬಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 302(ಹತ್ಯೆ), 376(ಅತ್ಯಾಚಾರ), 460(ಮನೆಯ ಅತಿಕ್ರಮಣ ಪ್ರವೇಶ ಅಥವಾ ರಾತ್ರಿ ವೇಳೆ ಮನೆಯೊಡೆದು ಪ್ರವೇಶ, 380(ಕಳವು) ಮತ್ತು 201(ಅಪರಾಧದ ಸಾಕ್ಷ್ಯಾಧಾರಗಳ ನಾಶ) ಅಡಿ ಪ್ರಕರಣ ದಾಖಲಿಸಿಕೊಂಡು, ಆತನನ್ನು ಬಾಲಾಪರಾಧ ಕಾರಾಗೃಹಕ್ಕೆ ಕಳಿಸಲಾಗಿದೆ ಎಂದೂ ಪೊಲೀಸರು ಹೇಳಿದ್ದಾರೆ.

share
Next Story
X