Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೃತ್ತಿ ಘನತೆ ಕೊರತೆಯಿಂದ ನಿರುದ್ಯೋಗ:...

ವೃತ್ತಿ ಘನತೆ ಕೊರತೆಯಿಂದ ನಿರುದ್ಯೋಗ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್

6 Feb 2023 8:01 AM IST
share
ವೃತ್ತಿ ಘನತೆ ಕೊರತೆಯಿಂದ ನಿರುದ್ಯೋಗ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್

ಮುಂಬೈ: ದೇಶದಲ್ಲಿ ನಿರುದ್ಯೋಗ ತಾಂಡವವಾಡಲು ವೃತ್ತಿಘನತೆಯ ಕೊರತೆ ಕಾರಣ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ಸ್ವರೂಪದ ಉದ್ಯೋಗವಾಗಿದ್ದರೂ, ಜನತೆ ಎಲ್ಲ ಬಗೆಯ ಉದ್ಯೋಗವನ್ನು ಗೌರವಿಸಬೇಕು. ಜತೆಗೆ ಉದ್ಯೋಗಕ್ಕಾಗಿ ಹಾತೊರೆಯುವುದನ್ನು ನಿಲ್ಲಿಸಬೇಕು ಎಂದು ಸಲಹೆ ಮಾಡಿದ್ದಾರೆ.

ಸಮಾಜಕ್ಕಾಗಿ ಮಾಡುವ ಯಾವುದೇ ಕೆಲಸವನ್ನು ದೊಡ್ಡದು ಅಥವಾ ಸಣ್ಣದು ಎಂದು ಪರಿಗಣಿಸುವಂತಿಲ್ಲ ಎಂದು ವಿಶ್ಲೇಷಿಸಿದರು. "ಯಾವ ಬಗೆಯ ಉದ್ಯೋಗವನ್ನು ಜನ ಮಾಡಿದರೂ ಪರವಾಗಿಲ್ಲ; ಅದನ್ನು ಗೌರವಿಸಬೇಕು. ವೃತ್ತಿಘನತೆಯ ಕೊರತೆ, ಸಮಾಜದಲ್ಲಿ ನಿರುದ್ಯೋಗ ತಾಂಡವವಾಡಲು ಮುಖ್ಯ ಕಾರಣ. ಒಂದು ಕೆಲಸಕ್ಕೆ ದೈಹಿಕ ಅಥವಾ ಬುದ್ಧವಿಂತಿಕೆ ಹೀಗೆ ಯಾವುದೇ ಅಗತ್ಯವಿರಲಿ, ಅದು ಕಠಿಣ ಪರಿಶ್ರಮದ ಕೆಲಸವಿರಲಿ ಅಥವಾ ಕೌಶಲಗಳಿರಲಿ ಎಲ್ಲವನ್ನೂ ಗೌರವಿಸಬೇಕು ಎಂದು ಸಾರ್ವಜನಿಕ ಸಮಾರಂಭದಲ್ಲಿ ಅಭಿಪ್ರಾಯಟ್ಟರು.

"ಎಲ್ಲರೂ ಉದ್ಯೋಗದ ಹಿಂದೆ ಓಡುತ್ತಿದ್ದಾರೆ. ಸರ್ಕಾರಿ ಉದ್ಯೋಗ ಇರುವುದು ಶೇಕಡ 10ರಷ್ಟು ಮಾತ್ರ. ಇತರ ಉದ್ಯೋಗಗಳು ಶೇಕಡ 20ರಷ್ಟು ಮಾತ್ರ ಇವೆ. ವಿಶ್ವದಲ್ಲಿ ಯಾವ ಸಮಾಜ ಕೂಡಾ ಶೇಕಡ 30ಕ್ಕಿಂತ ಹೆಚ್ಚು ಉದ್ಯೋಗ ಸೃಷ್ಟಿಸಲಾರವು. ಕೈಯಿಂದ ಮಾಡುವ ಕೆಲಸವನ್ನು ಇಂದಿಗೂ ಗೌರವಿಸುತ್ತಿಲ್ಲ" ಎಂದರು.

ಒಬ್ಬ ವ್ಯಕ್ತಿ ಜೀವನಾಧಾರವನ್ನು ಗಳಿಸುತ್ತಾರೆ ಎಂದಾದರೆ, ಸಮಾಜದ ಬಗ್ಗೆ ಆತನಿಗೆ ಹೊಣೆಗಾರಿಕೆ ಇದೆ. ಸಮಾಜಕ್ಕಾಗಿ ಪ್ರತಿಯೊಂದು ಕೆಲಸವನ್ನೂ ಮಾಡುವುದು ಎಂದಾದಾಗ, ಅದು ಸಣ್ಣದು ಅಥವಾ ದೊಡ್ಡದು ಇಲ್ಲವೇ ಒಂದಕ್ಕಿಂತ ಒಂದು ಭಿನ್ನವಾಗಲು ಹೇಗಾಗಲು ಸಾಧ್ಯ ಎಂದು ಪ್ರಶ್ನಿಸಿದರು. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು; ಅವರಿಗಿಂತ ಹಿಂದೆ ಯಾವುದೇ ಜಾತಿ ಪಂಥ ಇದ್ದಿರಲಿಲ್ಲ. ಈ ಎಲ್ಲವನ್ನೂ ಪುರೋಹಿತಶಾಹಿ ಸೃಷ್ಟಿಸಿದ್ದು, ಇದು ತಪ್ಪು ಎಂದು ವಿಶ್ಲೇಷಿಸಿದರು.

share
Next Story
X