Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 26 ಲಕ್ಷ ರೂ. ಸ್ಥಾನಪಲ್ಲಟ ಪ್ರಕರಣ: ಎಇಇ...

26 ಲಕ್ಷ ರೂ. ಸ್ಥಾನಪಲ್ಲಟ ಪ್ರಕರಣ: ಎಇಇ ವಿರುದ್ಧದ ಲೋಕಾಯುಕ್ತ ವಿಚಾರಣೆ ಹಿಂಪಡೆದ ಸರಕಾರ

ಜಿ.ಮಹಾಂತೇಶ್ಜಿ.ಮಹಾಂತೇಶ್7 Feb 2023 7:55 AM IST
share
26 ಲಕ್ಷ ರೂ. ಸ್ಥಾನಪಲ್ಲಟ ಪ್ರಕರಣ: ಎಇಇ ವಿರುದ್ಧದ ಲೋಕಾಯುಕ್ತ ವಿಚಾರಣೆ ಹಿಂಪಡೆದ ಸರಕಾರ

ಬೆಂಗಳೂರು: ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆಯೇ 26.07 ಲಕ್ಷ ರೂ.ಗಳನ್ನು ಸ್ಥಾನಪಲ್ಲಟಗೊಳಿಸಿದ್ದ ಆರೋಪಕ್ಕೆ ಗುರಿಯಾಗಿರುವ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಹೊರಡಿಸಿದ್ದ ಆದೇಶವನ್ನೇ ಸರಕಾರವು ಹಿಂಪಡೆದುಕೊಂಡಿದೆ. ಇದೇ ಇಲಾಖೆಯ ಮತ್ತೊಬ್ಬ ಸಹಾಯಕ ಇಂಜಿನಿಯರ್ ಗುತ್ತಿಗೆದಾರರಿಂದ 1,000 ಅಕ್ರಮ ಸಂಭಾವನೆ ಪಡೆದ ಆರೋಪದಡಿಯಲ್ಲಿ ತನಿಖೆ ನಡೆಸಲು ಉಪ ಲೋಕಾಯುಕ್ತರಿಗೆ ವಹಿಸಿದೆ.

 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಹರಪನಹಳ್ಳಿ ಉಪ ವಿಭಾಗದ ಎಇಇ ಲಷ್ಕರಿನಾಯ್ಕ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ಸಂಬಂಧ 2016ರ ಅಕ್ಟೋಬರ್ 25ರಂದು ಆದೇಶ ಹೊರಡಿಸಿತ್ತು. ಆದರೀಗ 6 ವರ್ಷಗಳ ನಂತರ ಆಪಾದಿತ ಅಧಿಕಾರಿಯು ಮೇಲಾಧಿಕಾರಿಯ ನಿರ್ದೇಶನದ ಮೇರೆಗೆ ಕ್ರಮವಹಿಸಲಾಗಿದೆ ಎಂದು ನೀಡಿದ್ದ ಸಮಜಾಯಿಷಿಗೆ ಮಣೆ ಹಾಕಿ ಲೋಕಾಯುಕ್ತ ವಿಚಾರಣೆಗೆ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ. ಹೀಗಾಗಿ ಪ್ರಕರಣವು ಮುಕ್ತಾಯಗೊಂಡಂತಾಗಿದೆ.

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ರಘುನಾಥಗೌಡ ಎಸ್ ಪಾಟೀಲ ಅವರು 2023ರ ಜನವರಿ 31ರಂದು ಲೋಕಾಯುಕ್ತ ನಿಬಂಧಕರಿಗೆ ಪತ್ರ(ಸಂಖ್ಯೆ; ಗ್ರಾಅಪ 8 ಇಎನ್‌ಕ್ಯೂ-2023) ಬರೆದಿದ್ದಾರೆ. ಈ ಪತ್ರದ ಪ್ರತಿಯು "the-file.in"ಗೆ ಲಭ್ಯವಾಗಿದೆ.

 26.07 ಲಕ್ಷ ರೂ. ಸ್ಥಾನಪಲ್ಲಟ  ಪ್ರಕರಣ 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಉಪವಿಭಾಗಕ್ಕೆ ವಿಶೇಷ ಅಭಿವೃದ್ಧಿ ಯೋಜನೆಯಡಿ 2003ರಲ್ಲಿ 1735 ಲಕ್ಷ ರೂ. ಅನುದಾನ ಒದಗಿಸಲಾಗಿತ್ತು. ಈ ಪೈಕಿ 26.07 ಲಕ್ಷ ರೂ.ಗಳನ್ನು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ ಸ್ಥಾನಪಲ್ಲಟ ಮಾಡಿ ವೆಚ್ಚ ಮಾಡಿದ್ದರು. ಈ ಸಂಬಂಧ ಎಇಇ ಲಷ್ಕರಿನಾಯ್ಕ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು 2016ರ ಅಕ್ಟೋಬರ್ 25ರಂದು ಆದೇಶ ಹೊರಡಿಸಲಾಗಿತ್ತು.

ಲಷ್ಕರಿ ನಾಯ್ಕ ಅವರು ಸರಕಾರದ ಈ ಆದೇಶವನ್ನು ಪ್ರಶ್ನಿಸಿ ಕೆಎಟಿಯಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು 3 ವರ್ಷಗಳವರೆಗೆ ವಿಚಾರಣೆ ನಡೆಸಿದ್ದ ಕೆಎಟಿಯು 2019ರ ಅಕ್ಟೋಬರ್ 25ರಂದು ಸರಕಾರದ ಆದೇಶವನ್ನು ರದ್ದುಗೊಳಿಸಿತ್ತು. ಆದರೆ, ಈ ಆದೇಶವನ್ನು ಪ್ರಶ್ನಿಸಲು ಅರ್ಹವಲ್ಲವೆಂದು ಸರಕಾರಿ ವಕೀಲರು ಅಭಿಪ್ರಾಯ ನೀಡಿದ್ದರು.

ಈ ಪ್ರಕರಣದಲ್ಲಿ ಯಾವುದೇ ಆರ್ಥಿಕ ನಷ್ಟ ಆಗದೇ ಇರುವುದು ಮತ್ತು ಆಪಾದಿತ ಅಧಿಕಾರಿಯು ತಮ್ಮ ಮೇಲಧಿಕಾರಿಯ ನಿರ್ದೇಶನದ ಅನುಸಾರ ಕ್ರಮವಹಿಸಿರುವುದು ಇತ್ಯಾದಿ ಅಂಶಗಳು ದಾಖಲೆಗಳಿಂದ ಕಂಡುಬಂದಿತ್ತು. ಆದ್ದರಿಂದ ನ್ಯಾಯ ಮಂಡಳಿಯ ಆದೇಶವನ್ನು ಒಪ್ಪಿ ಲಷ್ಕರಿ ನಾಯ್ಕ ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸಲು ಉಪಲೋಕಾಯುಕ್ತರಿಗೆ ಆದೇಶ ವಹಿಸಿತ್ತು. ಈ ಆದೇಶವನ್ನು ರದ್ದುಪಡಿಸಿ ಮತ್ತು ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸದೇ ಇರಲು ತೀರ್ಮಾನಿಸಿ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಲೋಕಾಯುಕ್ತ ನಿಬಂ‘ಕರಿಗೆ ಬರೆದ ಪತ್ರದಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ವಿವರಿಸಿದ್ದಾರೆ.

ಅಕ್ರಮ ಸಂಭಾವನೆ ಪ್ರಕರಣ 

ಶಿವಮೊಗ್ಗದಲ್ಲಿರುವ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಉಪ ವಿಭಾಗದ  ಸಹಾಯಕ ಇಂಜಿನಿಯರ್ ಎಚ್.ಬಸವರಾಜ್ ಅವರು ಗುತ್ತಿಗೆದಾರರ ಸಹಾಯಕ ಪರಮೇಶ್ ಎಂಬವರಿಂದ 1,000 ರೂ. ಅಕ್ರಮ ಸಂಭಾವನೆ ಸ್ವೀಕರಿಸುವ ವೇಳೆಯಲ್ಲಿ ಸಿಕ್ಕಿಬಿದ್ದಿದ್ದರು. ಈ ಪ್ರಕರಣದ ಕುರಿತು ಇಲಾಖೆ ವಿಚಾರಣೆ ನಡೆಸಲು ಕರ್ನಾಟಕ ನಾಗರಿಕ ಸೇವಾ ನಿಯಮ (ಸಸಿಎ) 14ಎ ಅನ್ವಯ ಉಪ ಲೋಕಾಯುಕ್ತರಿಗೆ ವಹಿಸಲಾಗಿತ್ತು.

ಈ ಕುರಿತು ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಅವರು 2023ರ ಫೆಬ್ರವರಿ 1ರಂದು (ಸಂಖ್ಯೆ ಗ್ರಾಅಪ 29 ಇಎನ್‌ಕ್ಯೂ-2022) ಪತ್ರ ಬರೆದಿರುವುದು ಗೊತ್ತಾಗಿದೆ.

1,000 ಅಕ್ರಮ ಸಂಭಾವನೆ ಪಡೆದಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಎಚ್.ಬಸವರಾಜ್ ಅವರ ಮಾತೃ ಇಲಾಖೆಯು  ಲೋಕೋಪಯೋಗಿ ಇಲಾಖೆಯಾಗಿರುತ್ತದೆ. ಆದ್ದರಿಂದ ಅವರ ವಿರುದ್ಧ ಇಲಾಖೆ ವಿಚಾರಣೆ ಪ್ರಕರಣವನ್ನು ಲೋಕೋಪಯೋಗಿ ಇಲಾಖೆಯು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗಿರುತ್ತದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X