Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟರ್ಕಿ, ಸಿರಿಯಾದಲ್ಲಿ ಭೂಕಂಪ: ಅವಶೇಷಗಳಡಿ...

ಟರ್ಕಿ, ಸಿರಿಯಾದಲ್ಲಿ ಭೂಕಂಪ: ಅವಶೇಷಗಳಡಿ ಸಿಲುಕಿರುವ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯನ್ ಅಟ್ಸು

7 Feb 2023 1:41 PM IST
share
ಟರ್ಕಿ, ಸಿರಿಯಾದಲ್ಲಿ ಭೂಕಂಪ: ಅವಶೇಷಗಳಡಿ ಸಿಲುಕಿರುವ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯನ್ ಅಟ್ಸು

ಇಸ್ತಾಂಬುಲ್: ಟರ್ಕಿ ಹಾಗೂ  ಸಿರಿಯಾದಲ್ಲಿ 3,000 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿರುವ ಭಾರೀ ಭೂಕಂಪದ   ಅವಶೇಷಗಳಡಿ ಘಾನಾ ವಿಂಗರ್ ಕ್ರಿಶ್ಚಿಯನ್ ಅಟ್ಸು  ಸಿಲುಕಿಕೊಂಡಿದ್ದಾರೆ ಎಂದು  ಕ್ರಿಶ್ಚಿಯನ್ ಅಟ್ಸು ಅವರು  ಪ್ರತಿನಿಧಿಸುತ್ತಿರುವ  ಟರ್ಕಿಶ್ ಕ್ಲಬ್ ಹಯಾಟ್ಸ್‌ಪೋರ್‌ನ ಉಪಾಧ್ಯಕ್ಷರು ಸೋಮವಾರ ಹೇಳಿದ್ದಾರೆ.

ಮಾಜಿ ನ್ಯೂ ಕ್ಯಾಸಲ್ ಹಾಗೂ  ಚೆಲ್ಸಿಯಾ ಮಿಡ್‌ಫೀಲ್ಡರ್ ಅಟ್ಸು( 31 ವರ್ಷ) ಸೆಪ್ಟೆಂಬರ್‌ನಲ್ಲಿ ಸೂಪರ್ ಲಿಗ್ ತಂಡವನ್ನು ಸೇರಿಕೊಂಡಿದ್ದರು.

" ಅಟ್ಸು ಅವರ ಕ್ರೀಡಾ ನಿರ್ದೇಶಕರಾದ ಟಾನರ್ ಸಾವುತ್ ಹಾಗೂ  ಕ್ರಿಶ್ಚಿಯನ್ ಅಟ್ಸು ಕುಸಿದುಬಿದ್ದಿರುವ ಕಟ್ಟಡದ ಅವಶೇಷಗಳಡಿ ಇದ್ದಾರೆಂದು ನಂಬಲಾಗಿದ್ದು, ಅವರು ಅದರಿಂದ ಹೊರಬರಲು ಪ್ರಯತ್ನಿಸುತ್ತಿದ್ದಾರೆ. ಭೂಕಂಪ ನಡೆದ ಕೆಲವೇ ಗಂಟೆಗಳ ನಂತರ ಈ ಇಬ್ಬರು ನಾಪತ್ತೆಯಾಗಿದ್ದಾರೆ. ಕ್ಲಬ್ ಅಧಿಕಾರಿಗಳಿಗೆ ಈ ಇಬ್ಬರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ''  ಎಂದು ಕ್ಲಬ್ ಡೈರೆಕ್ಟರ್ ತಿಳಿಸಿದ್ದಾರೆ.

ಅಟ್ಸು 2021 ರಲ್ಲಿ ಸೌದಿ ಅರೇಬಿಯಾಕ್ಕೆ ಹೊರಡುವ ಮೊದಲು ನ್ಯೂಕ್ಯಾಸಲ್‌ನಲ್ಲಿ ಐದು ವರ್ಷಗಳನ್ನು ಕಳೆದಿದ್ದರು.

"ಕೆಲವು ಸಕಾರಾತ್ಮಕ ಸುದ್ದಿಗಳಿಗಾಗಿ ಪ್ರಾರ್ಥಿಸುತ್ತಿದ್ದೇನೆ @ChristianAtsu20" ಎಂದು ಇಂಗ್ಲಿಷ್  ಕ್ಲಬ್ ಟ್ವಿಟರ್‌ನಲ್ಲಿ ತಿಳಿಸಿದೆ.

"ನಾವು ಘಾನಾ ಇಂಟರ್ನ್ಯಾಷನಲ್  ಆಟಗಾರ ಕ್ರಿಶ್ಚಿಯನ್ ಅಟ್ಸು ಮತ್ತು ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪದ ಬಲಿಪಶುಗಳಿಗಾಗಿ ಪ್ರಾರ್ಥಿಸುತ್ತೇವೆ. ಸಕಾರಾತ್ಮಕ ಸುದ್ದಿಯ ವಿಶ್ವಾಸದಲ್ಲಿದ್ದೇವೆ" ಎಂದು ಘಾನಾ ಫುಟ್ಬಾಲ್ ಅಸೋಸಿಯೇಶನ್ ಟ್ವಿಟರ್ ನಲ್ಲಿ ತಿಳಿಸಿದೆ.

2019ರಲ್ಲಿ ಘಾನಾ ಪರ ಕೊನೆಯ ಪಂದ್ಯ ಆಡಿದ್ದ ಅಟ್ಸು ಅಧಿಕೃತವಾಗಿ ಫುಟ್ಬಾಲ್ ನಿಂದ ನಿವೃತ್ತಿಯಾಗಿಲ್ಲ.

"ಕಠಿಣ ಪರಿಸ್ಥಿತಿಯನ್ನು ಪರಿಗಣಿಸಿ ಹಯಾಟ್ಸ್‌ಪೋರ್‌ ಹಾಗೂ  ಟರ್ಕಿಶ್ ಫುಟ್ಬಾಲ್ ಫೆಡರೇಶನ್ ಅಧಿಕಾರಿಗಳೊಂದಿಗೆ ಸಂಪರ್ಕವನ್ನು ಸ್ಥಾಪಿಸುವ ನಮ್ಮ ಪ್ರಯತ್ನಗಳನ್ನು ನಾವು ಮುಂದುವರಿಸುತ್ತೇವೆ" ಎಂದು ಅದು ತಿಳಿಸಿದೆ.

ಸೋಮವಾರ ಮುಂಜಾನೆ ಸಂಭವಿಸಿದ  7.8 ತೀವ್ರತೆಯ ಭೂಕಂಪದ ನಂತರ ಡಝನ್ ಗಟ್ಟಲೆ ರಾಷ್ಟ್ರಗಳು ಸಹಾಯ ನೀಡುವ  ವಾಗ್ದಾನ ಮಾಡಿವೆ,

share
Next Story
X