Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 'ವಿಶ್ವದ ಕುಶಾಗ್ರಮತಿ ವಿದ್ಯಾರ್ಥಿಗಳ...

'ವಿಶ್ವದ ಕುಶಾಗ್ರಮತಿ ವಿದ್ಯಾರ್ಥಿಗಳ ಪಟ್ಟಿ'ಯಲ್ಲಿ ಭಾರತೀಯ ಮೂಲದ ಅಮೆರಿಕಾ ವಿದ್ಯಾರ್ಥಿನಿ

7 Feb 2023 1:41 PM IST
share
ವಿಶ್ವದ ಕುಶಾಗ್ರಮತಿ ವಿದ್ಯಾರ್ಥಿಗಳ ಪಟ್ಟಿಯಲ್ಲಿ  ಭಾರತೀಯ ಮೂಲದ ಅಮೆರಿಕಾ ವಿದ್ಯಾರ್ಥಿನಿ

ವಾಷಿಂಗ್ಟನ್: ಭಾರತ ಮೂಲದ ಅಮೆರಿಕಾ ವಿದ್ಯಾರ್ಥಿನಿ ನತಾಶಾ ಪೆರಿಯನಾಯಗಮ್ 'ವಿಶ್ವದ ಕುಶಾಗ್ರಮತಿ' ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಅಮೆರಿಕಾದ ಜಾನ್ಸ್ ಹಾಪ್ಕಿನ್ಸ್ ಕೇಂದ್ರವು ಆಯೋಜಿಸುವ 'ಪ್ರತಿಭಾವಂತ ಯುವಕರ ಆಯ್ಕೆ ಪಟ್ಟಿ'ಯಲ್ಲಿ ಸತತ ಎರಡನೆಯ ಬಾರಿಗೆ ಸ್ಥಾನ ಪಡೆದಿದ್ದಾಳೆ. ಈ ಪಟ್ಟಿಯು 67 ದೇಶಗಳ 15,000 ವಿದ್ಯಾರ್ಥಿಗಳಿಗೆ ನಡೆಸುವ ಸಾಮಾನ್ಯಕ್ಕಿಂತ ಮೇಲ್ದರ್ಜೆ ಪರೀಕ್ಷೆಯ ಫಲಿತಾಂಶವಾಗಿದೆ ಎಂದು ndtv.com ವರದಿ ಮಾಡಿದೆ.

ಪೆರಿಯನಾಯಗಮ್ (13) ನ್ಯೂಜೆರ್ಸಿಯ ಫ್ಲಾರೆನ್ಸ್ ಎಂ. ಗೌಡಿನಿಯರ್ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಐದನೆ ದರ್ಜೆ ವಿದ್ಯಾರ್ಥಿನಿಯಾಗಿದ್ದಾಗ 2021ರ ಚಳಿಗಾಲದಲ್ಲೂ ಕೂಡಾ ಜಾನ್ಸ್ ಹಾಪ್ಕಿನ್ಸ್ ಕೇಂದ್ರದಲ್ಲಿ ಪ್ರತಿಭಾವಂತ ಯುವಕರಿಗಾಗಿನ ಪರೀಕ್ಷೆ ತೆಗೆದುಕೊಂಡಿದ್ದಳು.

ಮೌಖಿಕ ಹಾಗೂ ಮೌಲಿಕ ಪರೀಕ್ಷೆಯಲ್ಲಿ ಮೇಲ್ದರ್ಜೆಯ ಎಂಟನೆ ದರ್ಜೆ ಸಾಧನೆಯ ಮೂಲಕ ಶೇ. 90ರಷ್ಟು ಅಂಕ ಗಳಿಸಿದ್ದ ಈಕೆ, ಆ ವರ್ಷದಲ್ಲಿ ಕುಶಾಗ್ರಮತಿ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಳು. ಈ ವರ್ಷ ಜಾನ್ಸ್ ಹಾಪ್ಕಿನ್ಸ್ ಕೇಂದ್ರದಿಂದ ಪ್ರತಿಭಾವಂತ ಯುವಕರಿಗಾಗಿ ಆಯೋಜಿಸಲಾಗಿದ್ದ SAT, ACT, ಶಾಲೆ ಮತ್ತು ಕಾಲೇಜು ಸಾಮರ್ಥ್ಯ ಪರೀಕ್ಷೆ ಅಥವಾ ಅಂತಹುದೇ ಮೌಲ್ಯಾಂಕನದಲ್ಲಿ ಅಸಾಧಾರಣ ಸಾಧನೆ ತೋರುವ ಮೂಲಕ ಮತ್ತೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾಳೆ ಎಂದು ವಿಶ್ವವಿದ್ಯಾಲಯದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೆರಿಯನಾಯಗಮ್ ಪೋಷಕರು, ತಮ್ಮ ಮಗಳು ವಿರಾಮದ ವೇಳೆಯಲ್ಲಿ ಚಿತ್ರಕಲೆ ಬಿಡಿಸುವುದು ಹಾಗೂ ಜೆಆರ್‌ಆರ್ ಟೋಕಿನ್ ಅವರ ಕಾದಂಬರಿ ಓದುವ ಮೂಲಕ ಕಾಲ ಕಳೆಯುತ್ತಾಳೆ ಎಂದು ಹೇಳಿದ್ದಾರೆ.

ಜಾನ್ ಹಾಪ್ಕಿನ್ಸ್ ಕೇಂದ್ರದ 'ಪ್ರತಿಭಾವಂತ ಯುವಕರು' ಪರೀಕ್ಷೆಯನ್ನು ಜಗತ್ತಿನಾದ್ಯಂತ ಇರುವ ಚುರುಕುಮತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗುತ್ತಾ ಬರುತ್ತಿದ್ದು, ಅವರ ಶೈಕ್ಷಣಿಕ ಸಾಮರ್ಥ್ಯದ ಕುರಿತು ಸ್ಪಷ್ಟ ಚಿತ್ರಣ ಒದಗಿಸುತ್ತದೆ.

share
Next Story
X