Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯಮುನಾ ಎಕ್ಸ್ಪ್ರೆಸ್ವೇನಲ್ಲಿ ವ್ಯಕ್ತಿಗೆ...

ಯಮುನಾ ಎಕ್ಸ್ಪ್ರೆಸ್ವೇನಲ್ಲಿ ವ್ಯಕ್ತಿಗೆ ಡಿಕ್ಕಿ ಹೊಡೆದು ಮೃತದೇಹವನ್ನು 10 ಕಿ.ಮೀ. ದೂರದವರೆಗೆ ಎಳೆದೊಯ್ದ ಕಾರು

7 Feb 2023 11:10 PM IST
share
ಯಮುನಾ ಎಕ್ಸ್ಪ್ರೆಸ್ವೇನಲ್ಲಿ ವ್ಯಕ್ತಿಗೆ ಡಿಕ್ಕಿ ಹೊಡೆದು ಮೃತದೇಹವನ್ನು 10 ಕಿ.ಮೀ. ದೂರದವರೆಗೆ ಎಳೆದೊಯ್ದ ಕಾರು

ಹೊಸದಿಲ್ಲಿ,ಫೆ.7: ಹಿಟ್‌ಆ್ಯಂಡ್ ರನ್ ಪ್ರಕರಣವೊಂದರಲ್ಲಿ ವೇಗವಾಗಿ ಧಾವಿಸಿಬಂದ ಕಾರೊಂದು ಯುವಕನೊಬ್ಬನಿಗೆ ಡಿಕ್ಕಿಹೊಡೆದು, ಮೃತದೇಹವನ್ನು ಯಮುನಾ ಎಕ್ಸ್‌ಪ್ರೆಸ್‌ವೇ(Yamuna Expressway) ಹೆದ್ದಾರಿಯಲ್ಲಿ ಹೆಚ್ಚುಕಮ್ಮಿ 10 ಕಿ.ಮೀ. ದೂರವರೆಗೆ ಎಳೆದುಕೊಂಡು ಹೋದ ಆಘಾತಕಾರಿ ಘಟನೆ ಮಂಗಳವಾರ ನಡೆದಿದೆ. ಮೃತದೇಹವನ್ನು ಎಳೆದುಕೊಂಡು ಹೋಗುತ್ತಿದ್ದ ಕಾರನ್ನು ಮಥುರಾ ಟೋಲ್ (Mathura Toll)ಬ್ಲಾಕ್ ಬಳಿ ನಿಲ್ಲಿಸಲಾಗಿದ್ದು, ವಾಹನದಲ್ಲಿ ನೇತಾಡುತ್ತಿದ್ದ ಮೃತದೇಹ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ನೊಯ್ಡದಿಂದ ಆಗ್ರಾಕ್ಕೆ ತೆರಳುತ್ತಿದ್ದ ಈ ಕಾರು ಮಥುರಾ ಟೋಲ್‌ಗೇಟ್ ಬಳಿಕ ನಿಂತಾಗ, ಅದರಲ್ಲಿ ಮಾನವಮೃತದೇಹ ಸಿಕ್ಕಿಹಾಕಿಕೊಂಡಿರುವುದು ಭದ್ರತಾಸಿಬ್ಬಂದಿಯ ಗಮನಕ್ಕೆ ಬಂದಿತು. ಈ ಕಾರನ್ನು ದಿಲ್ಲಿ ನಿವಾಸಿ ವಿರೇಂದ್ರ ಸಿಂಗ್ ಎಂಬಾತ ಚಲಾಯಿಸುತ್ತಿದ್ದು, ಆತನನ್ನು ಪೊಲೀಸರು ಪ್ರಶ್ನಿಸುತ್ತಿದ್ದಾರೆ.

ಸೋಮವಾರ ರಾತ್ರಿ ಮಥುರಾ ಎಕ್ಸ್‌ಪ್ರೆಸ್‌ವೇನಲ್ಲಿ ದಟ್ಟವಾದ ಮಂಜು ಆವರಿಸಿತ್ತು. ಆದ್ದರಿಂದ ಗೋಚರತೆಯು ಕ್ಷೀಣವಾಗಿದ್ದರಿಂದ ವ್ಯಕ್ತಿಯು ಆಪಘಾತಕ್ಕೀಡಾಗಿದ್ದಾನೆ ಹಾಗೂ ಆತನ ಮೃತದೇಹವು ಕಾರಿಗೆ ಸಿಕ್ಕಿಹಾಕಿಕೊಂಡಿತ್ತು ಎಂದು ದೇಹತ್ ವಿಭಾಗದ ಪೊಲೀಸ್ ಅಧೀಕ್ಷಕ ತ್ರಿಗುಣ್ ಬೈಸೆನ್ ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಪಾದರಕ್ಷೆಗಳು ಹಾಗೂ ಮೊಬೈಲ್ ಫೋನ್ ಯಮುನಾ ಎಕ್ಸ್‌ಪ್ರೆಸ್‌ವೇನ 106 ಮೈಲುಗಲ್ಲು ಸಮೀಪ ಪತ್ತೆಯಾಗಿದ್ದು, ಅಲ್ಲಿಯೇ ಅವಘಧ ನಡೆದಿರಬೇಕೆಂದು ಶಂಕಿಸಲಾಗಿದೆ.

ಪ್ರಕರಣದ ತನಿಖೆ ನಡೆಯುತ್ತಿದ್ದು, ಘಟನೆ ನಡೆದ ಪರಿಸರದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಮೃತ ವ್ಯಕ್ತಿಯ ಗುರುತನ್ನು ದೃಢಪಡಿಸಲು ಪೊಲೀಸರು ಆಸುಪಾಸಿನ ಗ್ರಾಮಗಳ ಜನರನ್ನು ವಿಚಾರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜನವರಿ 1ರಂದು ದಿಲ್ಲಿಯ ಕಾಂಜಾವಾಲಾ ಪ್ರದೇಶದಲ್ಲಿ 20 ವರ್ಷದ ಯುವತಿಯೊಬ್ಬಳ ಮೃತದೇಹವು ಕಾರಿನಲ್ಲಿ ಸಿಕ್ಕಿಕೊಂಡು 12 ಕಿ.ಮೀ.ದೂರದವರೆಗೆ ಎಳೆಯಲ್ಪಟ್ಟ ದಾರುಣ ಘಟನೆಯನ್ನೇ ಈ ಪ್ರಕರಣ ನೆನಪಿಸಿದೆ. ಈ ಘಟನೆಯು ದಿಲ್ಲಿಯಲ್ಲಿ ಭಾರೀ ಕೋಲಾಹಲವನ್ನು ಸೃಷ್ಟಿಸಿತ್ತು ಹಾಗೂ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಏಳು ಮಂದಿಯನ್ನು ಬಂಧಿಸಿ, ಅವರ ವಿರುದ್ದ ಪ್ರಕರಣ ದಾಖಲಿಸಿತ್ತು.

share
Next Story
X