Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದ ಬೇಹುಗಾರಿಕೆ ಪ್ರಯತ್ನವನ್ನು...

ಚೀನಾದ ಬೇಹುಗಾರಿಕೆ ಪ್ರಯತ್ನವನ್ನು ನಿರೀಕ್ಷಿಸಿದ್ದೆವು: ಬೈಡನ್

8 Feb 2023 12:10 AM IST
share

ವಾಷಿಂಗ್ಟನ್, ಫೆ.7: ಚೀನಾದ ಬೇಹುಗಾರಿಕೆ ಬಲೂನ್ ಅಮೆರಿಕದ ಪ್ರದೇಶವನ್ನು ದಾಟಿದ ಬಳಿಕ ಅದನ್ನು ಹೊಡೆದುರುಳಿಸಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, ನಮ್ಮ ಮೇಲೆ ಬೇಹುಗಾರಿಕೆ ನಡೆಸುವ ಪ್ರಯತ್ನವನ್ನು ಚೀನಾ ಮಾಡುತ್ತದೆ ಎಂಬ ನಿರೀಕ್ಷೆಯಿತ್ತು ಎಂದಿದ್ದಾರೆ.

ಬಲೂನು ಪ್ರಕರಣದಿಂದ ನಮಗೆ ಆಶ್ಚರ್ಯವಾಗಿಲ್ಲ. ಯಾಕೆಂದರೆ ಅಮೆರಿಕದ ಮೇಲೆ ಬೇಹುಗಾರಿಕೆಯ ಪ್ರಯತ್ನವನ್ನು ಚೀನಾ ನಡೆಸಲಿದೆ ಎಂದು ನಾವು ನಿರೀಕ್ಷಿಸಿದ್ದೆವು. ಇಲ್ಲಿ ಚೀನಾದ ಮೇಲೆ ವಿಶ್ವಾಸವಿಡುವ ಪ್ರಶ್ನೆ ಬರುವುದಿಲ್ಲ. ನಾವಿಬ್ಬರು ಜತೆಯಾಗಿ ಕಾರ್ಯನಿರ್ವಹಿಸುವ ಕ್ಷೇತ್ರ ಯಾವುದು, ಎಲ್ಲಿ ನಮಗೆ ವಿರೋಧವಿದೆ ಎಂಬುದು ಇಲ್ಲಿರುವ ಪ್ರಶ್ನೆಯಾಗಿದೆ ಎಂದವರು ಹೇಳಿದ್ದಾರೆ.

 ಈ ಮಧ್ಯೆ, ಹೊಡೆದುರುಳಿಸಿದ ಬಲೂನ್ನಿಂದ ಅಮೂಲ್ಯವಾದ ಗುಪ್ತಚರ ಮಾಹಿತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಶ್ವೇತಭವನದ ಹೇಳಿಕೆ ತಿಳಿಸಿದೆ. ಬಲೂನು ಯಾವುದೇ ಮಿಲಿಟರಿ ಉದ್ದೇಶವಿಲ್ಲದ ಹವಾಮಾನ ವೀಕ್ಷಣಾ ವಿಮಾನವಾಗಿದೆ ಎಂದು ಚೀನಾ ಪ್ರತಿಪಾದಿಸಿದೆ. ಆದರೆ ಇದೊಂದು ಅತ್ಯಾಧುನಿಕ, ಅಧಿಕ ಎತ್ತರದಲ್ಲಿ ಹಾರಾಟ ನಡೆಸುವ ಬೇಹುಗಾರಿಕೆ ಸಾಧನವಾಗಿದೆ ಎಂದು ಅಮೆರಿಕ ಹೇಳಿದೆ. ಅಟ್ಲಾಂಟಿಕ್ ಸಾಗರದ ಬಳಿ ಶನಿವಾರ ಅಮೆರಿಕದ ಯುದ್ಧವಿಮಾನ ಚೀನಾದ ಬಲೂನನ್ನು ಹೊಡೆದುರುಳಿಸಿತ್ತು ಮತ್ತು ಬಲೂನಿನ ಅವಶೇಷಗಳನ್ನು ಅಮೆರಿಕದ ನೌಕಾದಳ ಮತ್ತು ಕರಾವಳಿ ರಕ್ಷಣಾ ಪಡೆ ಪರಿಶೀಲಿಸುತ್ತಿದೆ ಎಂದು ವರದಿಯಾಗಿದೆ.

 ಬಲೂನು ಕೆನಡಾದ ಕಡೆಯಿಂದ ನಮ್ಮ ವಾಯುಪ್ರದೇಶದತ್ತ ಬಂದಿರುವ ಮಾಹಿತಿ ತಿಳಿದೊಡನೆ ಅದನ್ನು ಹೊಡೆದುರುಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆ. ಆದರೆ ಈಗ ಹೊಡೆದುರುಳಿಸಿದರೆ ಅದರ ಅವಶೇಷ ನೆಲದ ಮೇಲಿರುವ ಜನರಿಗೆ ಹಾನಿ ಎಸಗಬಹುದು. ಇದು ಗಂಭೀರ ಪ್ರಕರಣವಾಗಿದೆ ಎಂದು ಅಧಿಕಾರಿಗಳು ಸಲಹೆ ನೀಡಿದ್ದರು ಎಂದು ಬೈಡನ್ ಹೇಳಿದ್ದಾರೆ.

 ಸಮುದ್ರದ ಮೇಲೆ ತೇಲುತ್ತಿದ್ದ ಕೆಲವು ಅವಶೇಷಗಳನ್ನು ವಶಕ್ಕೆ ಪಡೆದಿದ್ದೇವೆ. ಈಗ ಹವಾಮಾನ ಸೂಕ್ತವಲ್ಲದ ಕಾರಣ ಸಮುದ್ರದ ತಳ ಸೇರಿರುವ ಕೆಲವು ಅವಶೇಷಗಳನ್ನು ಮುಂದಿನ ದಿನದಲ್ಲಿ ಪತ್ತೆಹಚ್ಚಲಾಗುವುದು. ಆದರೆ ಪತನಗೊಂಡ ಬಲೂನಿನ ಚೂರುಗಳನ್ನು ಚೀನಾಕ್ಕೆ ಮರಳಿಸುವ ಪ್ರಶ್ನೆಯೇ ಇಲ್ಲ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಮಿತಿಯ ವಕ್ತಾರ ಜಾನ್ ಕಿರ್ಬಿ ಹೇಳಿದ್ದಾರೆ.

ಸಾಮಾನ್ಯ ಜೆಟ್ವಿಮಾನದ ಗಾತ್ರವಿದ್ದ ಈ ಬಲೂನು ಹಲವು ಸಾವಿರ ಪೌಂಡ್ ಗಳಷ್ಟು ತೂಕದ ಸರಕು ಸಾಗಿಸುವ ಸಾಮರ್ಥ್ಯ ಹೊಂದಿದ್ದು ಸುಮಾರು 200 ಅಡಿ ಎತ್ತರವಿತ್ತು. ಇದರ ಅವಶೇಷವು ಅಟ್ಲಾಂಟಿಕ್ ಸಮುದ್ರದ ತಳಭಾಗ ಸೇರಿದ್ದು ಈ ಅವಶೇಷ ಬಿದ್ದಿರುವ ಪ್ರದೇಶದ ನಕ್ಷೆ ರಚಿಸುವ ಕಾರ್ಯಕ್ಕೆ ನೌಕಾಪಡೆಯ ಹಡಗನ್ನು ನಿಯೋಜಿಸಲಾಗಿದೆ ಎಂದು ಅಮೆರಿಕದ ನಾರ್ಥನ್ ಕಮಾಂಡ್ ನ ಮುಖ್ಯಸ್ಥ ಜನರಲ್ ಗ್ಲೆನ್ ವ್ಯಾನ್ಹರ್ಕ್ ಹೇಳಿದ್ದಾರೆ.

share
Next Story
X