Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2022-23ರಲ್ಲಿ 10,000ಕ್ಕೂ ಅಧಿಕ ಕಿರು,...

2022-23ರಲ್ಲಿ 10,000ಕ್ಕೂ ಅಧಿಕ ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಬೀಗ

8 Feb 2023 6:33 PM IST
share
2022-23ರಲ್ಲಿ 10,000ಕ್ಕೂ ಅಧಿಕ ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಬೀಗ

ಹೊಸದಿಲ್ಲಿ: ವಿತ್ತವರ್ಷ 2022-23ರಲ್ಲಿ 10,655 ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮ (MSME)ಗಳು ಮುಚ್ಚಲ್ಪಟ್ಟಿದ್ದು,ಇದು ಕಳೆದ ನಾಲ್ಕು ವರ್ಷಗಳಲ್ಲಿ ಗರಿಷ್ಠವಾಗಿದೆ. ಪ್ರಸಕ್ತ ವಿತ್ತವರ್ಷವು ಕೊನೆಗೊಳ್ಳಲು ಇನ್ನೂ ಒಂದು ತಿಂಗಳು ಬಾಕಿಯಿದೆ, ಹೀಗಾಗಿ ನೈಜ ಸಂಖ್ಯೆ ಇನ್ನಷ್ಟು ಹೆಚ್ಚಬಹುದು.

2021-22ರಲ್ಲಿ ಮುಚ್ಚಲ್ಪಟ್ಟ ಎಂಎಸ್ಎಂಇಗಳ ಸಂಖ್ಯೆ 6,222 ಆಗಿತ್ತು. ಅದಕ್ಕೂ ಮುನ್ನ ಈ ಸಂಖ್ಯೆ 2020-21 ರಲ್ಲಿ 175 ಮತ್ತು 2019-20ರಲ್ಲಿ 400 ಆಗಿತ್ತು.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಉತ್ತರದಲ್ಲಿ ಕೇಂದ್ರ ಸರಕಾರವು ಈ ಮಾಹಿತಿಗಳನ್ನು ಒದಗಿಸಿದೆ.

ಅಂಕಿಅಂಶಗಳ ಪ್ರಕಾರ ಹೊಸದಾಗಿ ಆರಂಭಗೊಳ್ಳುತ್ತಿರುವ ಮತ್ತು ಮುಚ್ಚುತ್ತಿರುವ ಉದ್ಯಮಗಳ ನಡುವಿನ ಅನುಪಾತ ತೀವ್ರವಾಗಿ ಹದಗೆಡುತ್ತಿದೆ. 2020-21ರಲ್ಲಿ ಮುಚ್ಚಲ್ಪಟ್ಟ ಪ್ರತಿ ಎಎಸ್ಎಂಇಗೆ ಬದಲಾಗಿ 11,000ಕ್ಕೂ ಅಧಿಕ ಹೊಸ ಉದ್ಯಮಗಳು ಆರಂಭಗೊಂಡಿದ್ದವು. 2021-22ರಲ್ಲಿ ಇದು 349ಕ್ಕೆ ಇಳಿಕೆಯಾಗಿತ್ತು ಮತ್ತು ಪ್ರಸಕ್ತ ವರ್ಷದಲ್ಲಿ ಮುಚ್ಚಲ್ಪಟ್ಟ ಪ್ರತಿ ಎಂಎಎಸ್ಇಗೆ ಬದಲಾಗಿ 167 ಹೊಸ ಉದ್ಯಮಗಳು ಆರಂಭಗೊಂಡಿವೆ. ಆರ್ಥಿಕ ತಜ್ಞರು ದೇಶದಲ್ಲಿಯ ಎಂಎಸ್ಎಂಇಗಳ ಸ್ವಾಸ್ಥದ ಬಗ್ಗೆ ಕೆಲವು ಸಮಯದಿಂದ ಕಳವಳಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ವಿಶೇಷವಾಗಿ ನೋಟು ನಿಷೇಧ ಮತ್ತು ಅಸಮರ್ಪಕವಾಗಿ ಜಾರಿಗೊಂಡ ಜಿಎಸ್ಟಿಯ ಅವಳಿ ಆಘಾತಗಳು ಹಾಗೂ ನಂತರದ ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್ಡೌನ್ಗಳ ಬಳಿಕ ಒಟ್ಟಾರೆ ಆರ್ಥಿಕತೆ ಮತ್ತು ನಿರುದ್ಯೋಗ ಸಮಸ್ಯೆಯ ಕುರಿತು ಕಳವಳಗಳು ಸೃಷ್ಟಿಯಾಗಿವೆ.

ಆರ್ಥಿಕತೆಯಲ್ಲಿ ಶೇ.30ರಷ್ಟು ಮತ್ತು ಉದ್ಯೋಗಗಳಲ್ಲಿ ಪ್ರಾಯಶಃ ಶೇ.40ರಷ್ಟು ಪಾಲನ್ನು ಹೊಂದಿರುವ ಎಂಎಸ್ಎಂಇ ಕ್ಷೇತ್ರದ ಸ್ಥಿತಿಯು ಅತ್ಯಂತ ಆತಂಕಕಾರಿ ಮತ್ತು ಪ್ರಮುಖ ಸಮಸ್ಯೆಯಾಗಿದ್ದು,ಇದನ್ನು ಸೂಕ್ತವಾಗಿ ನಿಭಾಯಿಸುವ ಅಗತ್ಯವಿದೆ. ಸಾಂಕ್ರಾಮಿಕದ ಸಂದರ್ಭದಲ್ಲಿ ಮುಚ್ಚಲ್ಪಟ್ಟ ಶೇ.20ರಷ್ಟು ಎಂಎಸ್ಎಂಇಗಳ ಬದಲು ಹೊಸ ಉದ್ಯಮಗಳನ್ನು ಸೃಷ್ಟಿಸಲಾಗಿದೆಯೇ ಎನ್ನುವುದನ್ನು ಬಹಳಷ್ಟು ಅವಲಂಬಿಸಿದೆ ಎಂದು ಭಾರತದ ಮಾಜಿ ಮುಖ್ಯ ಸಂಖ್ಯಾಶಾಸ್ತ್ರಜ್ಞ ಪ್ರಣವ ಸೇನ್ ಅವರು ಇತ್ತೀಚಿಗೆ ಸಂದರ್ಶನವೊಂದರಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

share
Next Story
X