Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೂಲಸೌಕರ್ಯಕ್ಕೆ ಕೊರತೆಯಾಗದಂತೆ ಕ್ರಮ...

ಮೂಲಸೌಕರ್ಯಕ್ಕೆ ಕೊರತೆಯಾಗದಂತೆ ಕ್ರಮ ವಹಿಸಿ: ಸಚಿವ ಸುನಿಲ್

8 Feb 2023 3:11 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೂಲಸೌಕರ್ಯಕ್ಕೆ ಕೊರತೆಯಾಗದಂತೆ ಕ್ರಮ ವಹಿಸಿ: ಸಚಿವ ಸುನಿಲ್

ಉಡುಪಿ: ಉಡುಪಿಯಲ್ಲಿ ಫೆಬ್ರವರಿ 11 ಮತ್ತು 12ರಂದು ನಡೆಯುವ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನಕ್ಕೆ ಆಗಮಿಸುವ  ಕಲಾವಿದರು, ಕಲಾಸಕ್ತರು ಹಾಗೂ ಸಾರ್ವಜನಿಕರಿಗೆ  ಯಾವುದೇ ರೀತಿಯ  ಕೊರತೆ ಆಗದಂತೆ ಅಗತ್ಯ ಮೂಲಸೌಕರ್ಯಗಳು ಸೇರಿದಂತೆ, ಸಮರ್ಪಕ ರೀತಿಯಲ್ಲಿ ಊಟೋಪಚಾರದ ವ್ಯವಸ್ಥೆಯನ್ನು ಮಾಡಬೇಕೆಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅಧಿಕಾರಿಗಳು ಹಾಗೂ ಸಂಘಟಕರಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಎಂಜಿಎಂ ಕಾಲೇಜಿನ ಎ.ಎಲ್.ಎನ್.ರಾವ್ ಕ್ರೀಡಾಂಗಣ ದಲ್ಲಿ ನಡೆದ ರಾಜ್ಯಮಟ್ಟದ ಯಕ್ಷಗನ ಸಮ್ಮೇಳನ ಸಿದ್ಧತೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸಮ್ಮೇಳನದ ಅಧ್ಯಕ್ಷರ ಮೆರವಣಿಗೆ, ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿವಿಧ ಗೋಷ್ಠಿಗಳು ಹಾಗೂ ಸಂವಾದಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ ಅರ್ಥಪೂರ್ಣವಾಗಿ ಆಯೋಜಿಸಬೇಕು.ಯಕ್ಷಗಾನ ಸಮ್ಮೇಳನಕ್ಕೆ ರಾಜ್ಯ ಮತ್ತು ಹೊರರಾಜ್ಯದಿಂದ ಆಗಮಿಸುವ ಯಕ್ಷಗಾನ ಕಲಾವಿದರು, ಕಲಾಭಿಮಾನಿಗಳು, ಜನಸಾಮಾನ್ಯರು ಸೇರಿದಂತೆ 50,000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಆಗಮಿಸುವ ಪ್ರತಿಯೊಬ್ಬರಿಗೂ  ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಆಸನದ ವ್ಯವಸ್ಥೆ, ಆಹಾರ ವ್ಯವಸ್ಥೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಸಂಬಂದಿಸಿದ ಆಹ್ವಾನ ಪತ್ರಿಕೆಯನ್ನು ಶಿಷ್ಠಾಚಾರದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ಹಾಗೂ ಕರಾವಳಿ ಭಾಗದ 3 ಜಿಲ್ಲೆಗಳ ಎಲ್ಲಾ ಶಾಸಕರು, ಲೋಕಸಭಾ ಸದಸ್ಯರು, ಯಕ್ಷಗಾನ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಕಲಾವಿದರಿಗೆ, ಗಣ್ಯರಿಗೆ ತಲುಪಿಸಿ ಆಹ್ವಾನಿಸಬೇಕೆಂದರು.

ಸಮಾರಂಭದಲ್ಲಿ 75ಕ್ಕೂ ಅಧಿಕ ಮಂದಿ ಆಯ್ದ ಕಲಾವಿದರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದ್ದು, ಹೊರಜಿಲ್ಲೆಯಿಂದ ಬಂದ ಇವರಿಗೂ ಸೇರಿದಂತೆ ಇತರೆ ಕಲಾವಿದರಿಗೆ ವಸತಿ ಸೇರಿದಂತೆ ಸಮರ್ಪಕ ರೀತಿಯಲ್ಲಿ ಆತಿಥ್ಯ ವ್ಯವಸ್ಥೆ  ಮಾಡಬೇಕೆಂದು ತಿಳಿಸಿದರು.

ಕಾರ್ಯಕ್ರಮದ ವೇದಿಕೆಯ ಪೆಂಡಾಲ್‌ನಲ್ಲಿ ಧ್ವನಿ ಹಾಗೂ ಬೆಳಕಿನ ವ್ಯವಸ್ಥೆಯನ್ನು ಸುವ್ಯವಸ್ಥಿತವಾಗಿ ಇರುವ ಹಾಗೆ ನೋಡಿಕೊಳ್ಳಬೇಕು. ಮೈದಾನದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಲ್ಲವೂ ಅಚ್ಚುಕಟ್ಟಾಗಿ ನಡೆಯಲು ಸ್ವಯಂ ಸೇವಕರನ್ನು ನಿಯೋಜಿಸಬೇಕು ಎಂದರು. 

ಮೈದಾನದಲ್ಲಿ 100ಕ್ಕೂ ಅಧಿಕ ವಾಣಿಜ್ಯ ಹಾಗೂ ವಿವಿಧ ಇಲಾಖೆಗಳ ಸವಲತ್ತುಗಳ ಪ್ರದರ್ಶನ, ಮಳಿಗೆಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದ ಅವರು, ಸಮ್ಮೇಳನಕ್ಕೆ ಆಗಮಿಸುವ ವಾಹನಗಳ ನಿಲುಗಡೆಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸೂಚಿಸಿದರು.

ಸಮ್ಮೇಳನಕ್ಕೆ ಆಗಮಿಸುವ ಜನಸಾಮಾನ್ಯರು ಉಡುಪಿ ಸುತ್ತಮುತ್ತಲಿನ ಪ್ರವಾಸಿತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಪ್ರವಾಸಿತಾಣ ಗಳ ಮಾರ್ಗಸೂಚಿಗಳು ಸುಲಭವಾಗಿ ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಪ್ರವಾಸೋಧ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಸರಕಾರ ಯಕ್ಷಗಾನ ಸಮ್ಮೇಳನ ಆಯೋಜನೆಯನ್ನು ಕಳೆದ ಆಯವ್ಯಯದಲ್ಲಿ ಘೋಷಿಸುವುದರೊಂದಿಗೆ ನಮ್ಮ ಜಿಲ್ಲೆಯಲ್ಲಿಯೇ ಆಯೋಜಿಸಲು ಅವಕಾಶ ಮಾಡಿಕೊಟ್ಟಿದೆ. ಇದನ್ನು ಮಾದರಿ ಸಮ್ಮೇಳನದ ರೀತಿಯಲ್ಲಿ ನಡೆಸಲು ಅಧಿಕಾರಿಗಳು, ಸಂಘಟಕರು, ಯಕ್ಷಗಾನ ಕಲಾವಿದರು ಹಾಗೂ ಆಸಕ್ತರು ಎಲ್ಲಾ ರೀತಿಯ ನೆರವು ಹಾಗೂ ಸಹಕಾರ ನೀಡಬೇಕೆಂದರು.

ಸಮ್ಮೇಳನವನ್ನು ವಿಶೇಷವಾಗಿ ಯುವಜನರಲ್ಲಿ ಕಲಾ ಆಸಕ್ತಿ ಮೂಡಿಸಬೇಕೆಂಬ ಉದ್ದೇಶದಿಂದಲೇ ಆಯೋಜಿಸಲಾಗುತ್ತಿದ್ದು, ಯುವಜನರು, ವಿದ್ಯಾರ್ಥಿಗಳು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಘುಪತಿ ಭಟ್ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸಮ್ಮೇಳನದ ಧ್ವಜವನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಪಂ  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಯಕ್ಷಗಾನ ಅಕಾಡೆಮಿಯ ಆಡಳಿತಾಧಿಕಾರಿ ಅಶೋಕ್ ಎನ್ ಛಲವಾದಿ, ರಿಜಿಸ್ಟ್ರಾರ್ ಶಿವರುದ್ರಪ್ಪ, ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್. ಹೆಗಡೆ, ಪ್ರಧಾನ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ, ಸಂಚಾಲಕ ಮುರಳಿ ಕಡೆಕಾರ್, ಸದಸ್ಯರಾದ ಧನಂಜಯ ಶೆಟ್ಟಿ, ಪ್ರೊ.ಎಂ.ಎಲ್.ಸಾಮಗ, ನಾರಾಯಣ ಎಂ ಹೆಗಡೆ, ಮಹಾವೀೀರ ಪಂಡಿ, ಸುರೇಂದ್ರ ಪಣಿಯೂರು, ಪೌರಾಯುಕ್ತ ಡಾ.ಉದಯ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X