Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಷ್ಟ್ರದ ಸಲುವಾಗಿ ಜನಪ್ರಿಯವಲ್ಲದ...

ರಾಷ್ಟ್ರದ ಸಲುವಾಗಿ ಜನಪ್ರಿಯವಲ್ಲದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಿದ್ಧ: ಶ್ರೀಲಂಕಾ ಅಧ್ಯಕ್ಷ ವಿಕ್ರಮಸಿಂಘೆ

8 Feb 2023 9:09 PM IST
share
ರಾಷ್ಟ್ರದ ಸಲುವಾಗಿ ಜನಪ್ರಿಯವಲ್ಲದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಿದ್ಧ: ಶ್ರೀಲಂಕಾ ಅಧ್ಯಕ್ಷ ವಿಕ್ರಮಸಿಂಘೆ

ಕೊಲಂಬೊ, ಫೆ.8: ದಿವಾಳಿಯ ಅಂಚಿಗೆ ತಲುಪಿರುವ ದೇಶದ ಹಿತಾಸಕ್ತಿಗೆ ಪೂರಕವಾಗುವುದಾದರೆ ಅಧಿಕಾರ ವಿಕೇಂದ್ರೀಕರಣದಲ್ಲಿ ಮುಂದುವರಿಯುವ ಜತೆಗೆ ಜನಪ್ರಿಯವಲ್ಲದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಿದ್ಧ ಎಂದು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ(Ranil Wickremesinghe) ಬುಧವಾರ ಹೇಳಿದ್ದಾರೆ.

ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರು, 2.9 ಶತಕೋಟಿ ಡಾಲರ್ ಮೊತ್ತದ ಐಎಂಎಫ್ (IMF)ಸಾಲ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದರು. ಏಕೀಕೃತ ದೇಶದೊಳಗೆ ಅಧಿಕಾರವನ್ನು ವಿನಿಯೋಗಿಸಲು ನಿರೀಕ್ಷಿಸುತ್ತೇವೆ. ಹಲವು ಸಂದರ್ಭದಲ್ಲಿ ಒತ್ತಿಹೇಳಲಾದ ಸತ್ಯವನ್ನು ನಾನು ಪುನರುಚ್ಚರಿಸಲು ಬಯಸುತ್ತೇನೆ. ದೇಶ ಖಂಡಿತಾ ವಿಭಜನೆಯಾಗುವುದಿಲ್ಲ ಎಂದು ವಿಕ್ರಮಸಿಂಘೆ ಹೇಳಿದ್ದಾರೆ.

ದೇಶದಲ್ಲಿ ಅಲ್ಪಸಂಖ್ಯಾತ ತಮಿಳರಿಗೆ ರಾಜಕೀಯ ಸ್ವಾಯತ್ತತೆ ಕಲ್ಪಿಸುವ  ಸಂವಿಧಾನದ 13ನೇ ತಿದ್ದುಪಡಿಯನ್ನು ಸಂಪೂರ್ಣವಾಗಿ ಜಾರಿಗೊಳಿಸುವ ಅಗತ್ಯವನ್ನು ವಿಕ್ರಮಸಿಂಘೆ ಒತ್ತಿಹೇಳಿದ್ದಾರೆ. ಆದರೆ ಇದಕ್ಕೆ ದೇಶದ ಪ್ರಭಾವೀ ಬೌದ್ಧ ಸಮುದಾಯದ ಗುರುಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಹೀಗೆ ಮಾಡಿದರೆ ದೇಶದ ಏಕತೆಯ ಸ್ವರೂಪಕ್ಕೆ ಸವಾಲಾಗಲಿದೆ ಎಂದಿದ್ದಾರೆ. ಶ್ರೀಲಂಕಾದ 22 ದಶಲಕ್ಷ ಜನಸಂಖ್ಯೆಯಲ್ಲಿ ಸುಮಾರು 75%ದಷ್ಟು ಸಿಂಹಳೀಯರು ಮತ್ತು ಬೌದ್ಧರಾಗಿದ್ದರೆ, 15%ದಷ್ಟು ತಮಿಳಿಯನ್ನರು. 1987ರ ಭಾರತ-ಶ್ರೀಲಂಕಾ ಒಪ್ಪಂದದ ಬಳಿಕ ರೂಪುಗೊಂಡ ಸಂವಿಧಾನದ 13ಎ ತಿದ್ದುಪಡಿಯನ್ನು ಜಾರಿಗೊಳಿಸುವಂತೆ ಭಾರತ ಒತ್ತಡ ಹೇರುತ್ತಿದೆ.

ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಉಲ್ಲೇಖಿಸಿದ ವಿಕ್ರಮಸಿಂಘೆ, ಶ್ರೀಲಂಕಾವು 2026ರ ಒಳಗೆ ದಿವಾಳಿತನದಿಂದ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ . ಭೂತಕಾಲದ ಕಹಿ  ನೆನಪಲ್ಲೇ ಕಾಲ ಕಳೆಯುವ ಬದಲು, ಭವಿಷ್ಯದ ಬಗ್ಗೆ ಯೋಚನೆ ಮಾಡೋಣ. ಪ್ರಸ್ತುತ ಬಿಕ್ಕಟ್ಟಿನಿಂದ ದೇಶ ಚೇತರಿಸಿಕೊಳ್ಳುವಂತಾಗಲು ಒಮ್ಮತದಿಂದ ಒಂದಾಗೋಣ ಮತ್ತು ಪ್ರಜಾಸತ್ತಾತ್ಮಕವಾಗಿ ಮುನ್ನಡೆಯೋಣ ಎಂದರು.

ನಾನೀಗ ತೆಗೆದುಕೊಳ್ಳುವ  ಜನಪ್ರಿಯವಲ್ಲದ ಕೆಲವು ನಿರ್ಧಾರಗಳು ಮುಂಬರುವ ವರ್ಷಗಳಲ್ಲಿ ಸಕಾರಾತ್ಮಕ ಫಲಿತಾಂಶಕ್ಕೆ ಕಾರಣವಾಗಲಿದೆ. ನಾನಿಲ್ಲಿ ಇರುವುದು ಜನಪ್ರಿಯನಾಗಲು ಅಲ್ಲ. ಆರ್ಥಿಕ ಪ್ರಪಾತಕ್ಕೆ ಕುಸಿದಿರುವ ದೇಶವನ್ನು ಪುನರ್ನಿಮಾಣ ಮಾಡಲು ನಾನು ಬಯಸುತ್ತೇನೆ. ರಾಷ್ಟ್ರದ ಹಿತದೃಷ್ಟಿಯಿಂದ ಜನಪ್ರಿಯವಲ್ಲದ ನಿರ್ಧಾರಗಳನ್ನು ತೆಗೆದುಕೊಳ್ಳಲು ನಾನು ಸಿದ್ಧ. ಎರಡು ಮೂರು ವರ್ಷಗಳಲ್ಲಿ ಆ ನಿರ್ಧಾರದ ಮಹತ್ವಗಳನ್ನು ಜನ ಅರಿತುಕೊಳ್ಳುತ್ತಾರೆ.

ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್)ನಿಂದ ಸಾಲ ಪಡೆಯುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ, ಚೀನಾ ಸೇರಿದಂತೆ ಶ್ರೀಲಂಕಾಕ್ಕೆ ಸಾಲ ನೀಡಿದ ದೇಶಗಳೊಂದಿಗೆ ಸಾಲ ಮರುರಚನೆ ಕುರಿತ ಮಾತುಕತೆಯೂ ಮುಂದುವರಿದಿದೆ ಎಂದವರು ಹೇಳಿದ್ದಾರೆ. ತೆರಿಗೆ ಹೆಚ್ಚಳ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮುಂತಾದ ಕಠಿಣ ಆರ್ಥಿಕ ಕ್ರಮಗಳನ್ನು ಶ್ರೀಲಂಕಾ ಸರಕಾರ ಜಾರಿಗೊಳಿಸಿದೆ. ಇಂತಹ ಕ್ರಮಗಳನ್ನು ವಿರೋಧಿಸಿ ಕಾರ್ಮಿಕ ಯೂನಿಯನ್ಗಳು ಹಾಗೂ ಸಂಘಟನೆಗಳು ದೇಶದಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿವೆ.

ಸಾಲ ನೀಡಿರುವ ದೇಶಗಳೊಂದಿಗೆ  ಸಾಲದ ಪುನರ್ರಚನೆ ಕುರಿತ ಮಾತುಕತೆ ಯಶಸ್ವಿಯಾದರೆ 4 ವರ್ಷದ ಅವಧಿಗೆ 9.2 ಶತಕೋಟಿ ಡಾಲರ್ ಸಾಲ ಮಂಜೂರು ಮಾಡುವುದಾಗಿ ಐಎಂಎಫ್ ಕಳೆದ ಸೆಪ್ಟಂಬರ್ನಲ್ಲಿ ಶ್ರೀಲಂಕಾಕ್ಕೆ ಭರವಸೆ ನೀಡಿತ್ತು. 2022ರ ಜೂನ್ ಅಂತ್ಯಕ್ಕೆ ಶ್ರೀಲಂಕಾವು ಸುಮಾರು 40 ಶತಕೋಟಿ ಡಾಲರ್ನಷ್ಟು ದ್ವಿಪಕ್ಷೀಯ, ಬಹುಪಕ್ಷೀಯ ಮತ್ತು ವಾಣಿಜ್ಯ ಸಾಲ ಪಾವತಿಸಲು ಬಾಕಿಯಿದೆ ಎಂದು ವರದಿಯಾಗಿದೆ.

share
Next Story
X