Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿವಿ ನಿರೂಪಕ ದೀಪಕ್‌ ಚೌರಾಸಿಯಾ ವಿರುದ್ಧ...

ಟಿವಿ ನಿರೂಪಕ ದೀಪಕ್‌ ಚೌರಾಸಿಯಾ ವಿರುದ್ಧ ಎರಡನೇ ಬಾರಿ ಬಂಧನ ಆದೇಶ ಹೊರಡಿಸಿದ ನ್ಯಾಯಾಲಯ

‘ಆದಿತ್ಯನಾಥ್ ಸಂದರ್ಶನ’ಕ್ಕಾಗಿ ವಿನಾಯಿತಿ ಕೋರಿಕೆಗೆ ತಿರಸ್ಕಾರ

8 Feb 2023 11:15 PM IST
share
ಟಿವಿ ನಿರೂಪಕ ದೀಪಕ್‌ ಚೌರಾಸಿಯಾ ವಿರುದ್ಧ ಎರಡನೇ ಬಾರಿ ಬಂಧನ ಆದೇಶ ಹೊರಡಿಸಿದ ನ್ಯಾಯಾಲಯ
‘ಆದಿತ್ಯನಾಥ್ ಸಂದರ್ಶನ’ಕ್ಕಾಗಿ ವಿನಾಯಿತಿ ಕೋರಿಕೆಗೆ ತಿರಸ್ಕಾರ

ಹೊಸದಿಲ್ಲಿ,ಫೆ.8: ಆಸಾರಾಮ ಬಾಪು ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ವರದಿ ಸಂದರ್ಭದಲ್ಲಿ 10 ಹರೆಯದ ಬಾಲಕಿ ಮತ್ತು ಆಕೆಯ ಕುಟುಂಬದ ‘ತಿರುಚಲಾಗಿದ್ದ, ಎಡಿಟ್ ಮಾಡಲಾಗಿದ್ದ ಮತ್ತು ಅಶ್ಲೀಲ ’ ಫೂಟೇಜ್ನ ಪ್ರಸಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುದ್ದಿವಾಹಿನಿಯ ನಿರೂಪಕ ದೀಪಕ ಚೌರಾಸಿಯಾ ವಿರುದ್ಧ ಗುರುಗ್ರಾಮದ ಪೊಕ್ಸೊ ನ್ಯಾಯಾಲಯವು ಜಾಮೀನುರಹಿತ ಬಂಧನ ಆದೇಶವನ್ನು ಹೊರಡಿಸಿದೆ.

ವಿಚಾರಣೆಯ ದಿನವಾದ ಫೆ.4ರಂದು ತನಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸಂದರ್ಶನ ನಡೆಸಬೇಕಿದ್ದರಿಂದ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿ ಚೌರಾಸಿಯಾ ಅರ್ಜಿಯೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರೆನ್ನಲಾಗಿದೆ. ಉ.ಪ್ರ.ಮುಖ್ಯಮಂತ್ರಿಗಳ ಕಚೇರಿಯಿಂದ ತನಗೆ ಬಂದಿದ್ದ ಇ-ಮೇಲ್ ಅನ್ನು ಚೌರಾಸಿಯಾ ಅರ್ಜಿಯೊಂದಿಗೆ ಲಗತ್ತಿಸಿದ್ದರು.
‌
ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿಯನ್ನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯು ಯಾವುದೇ ಅಫಿಡವಿಟ್ನಿಂದ ಬೆಂಬಲಿಸಲ್ಪಟ್ಟಿರಲಿಲ್ಲ ಮತ್ತು ಮನವರಿಕೆಯಾಗಬಲ್ಲ ಯಾವುದೇ ದಾಖಲೆ ಪುರಾವೆಗಳಿರಲಿಲ್ಲ ಎಂದು ನ್ಯಾ.ಶಶಿ ಚೌಹಾಣ್ ಹೇಳಿದರು. ಚೌರಾಸಿಯಾ ಸಲ್ಲಿಸಿದ್ದ ಇ-ಮೇಲ್ ಸಂದೇಶ ಅವರ ವಿಳಾಸವನ್ನು ಹೊಂದಿರಲಿಲ್ಲ, ಬೇರೊಬ್ಬ ವ್ಯಕ್ತಿಯ ವಿಳಾಸವನ್ನು ಹೊಂದಿತ್ತು ಎನ್ನುವುದನ್ನೂ ನ್ಯಾಯಾಧೀಶರು ಗಮನಿಸಿದರು.

ಕಳೆದ ಮೂರು ತಿಂಗಳುಗಳಲ್ಲಿ ಇದು ನ್ಯಾಯಾಲಯವು ಚೌರಾಸಿಯಾ ವಿರುದ್ಧ ಹೊರಡಿಸಿರುವ ಎರಡನೇ ಬಂಧನಾದೇಶವಾಗಿದೆ. ಅನಾರೋಗ್ಯದ ಕಾರಣವೊಡ್ಡಿ ಚೌರಾಸಿಯಾ ವಿಚಾರಣೆಗೆ ಗೈರುಹಾಜರಾದ ಬಳಿಕ ಕಳೆದ ವರ್ಷದ ಅ.28ರಂದು ಅವರ ವಿರುದ್ಧ ಮೊದಲ ಜಾಮೀನುರಹಿತ ಬಂಧನಾದೇಶವನ್ನು ಹೊರಡಿಸಲಾಗಿತ್ತು.

ಬಳಿಕ ಚೌರಾಸಿಯಾ ಪಂಜಾಬ್ ಮತ್ತು ಹರ್ಯಾಣ ಉಚ್ಚ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದರು. ಗುರುಗ್ರಾಮ ನ್ಯಾಯಾಲಯವೀಗ ಅವರ ಜಾಮೀನು ಮತ್ತು ಭದ್ರತೆ ಬಾಂಡ್ಗಳನ್ನು ರದ್ದುಗೊಳಿಸಿದೆ. ಪ್ರಕರಣ ದಾಖಲಾದಾಗ ಚೌರಾಸಿಯಾ ನ್ಯೂಸ್ ನೇಷನ್ನಲ್ಲಿ ಸುದ್ದಿ ನಿರೂಪಕರಾಗಿದ್ದು,ಬಳಿಕ ಝೀ ನ್ಯೂಸ್ಗೆ ಸೇರಿದ್ದರು.

share
Next Story
X