ಶಿಂಷಾ ಜಲಪಾತದ ಸುತ್ತಮುತ್ತಲಿನ ಜಮೀನು ಒತ್ತುವರಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಫೆ. 9: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಇರುವ ಶಿಂಷಾ ಜಲಪಾತದ ಸುತ್ತಮುತ್ತಲಿನ ನಾಲ್ಕು ಸಾವಿರ ಎಕರೆಯಷ್ಟು ಸರಕಾರಿ ಜಮೀನು ಒತ್ತುವರಿಯಾಗಿದೆ ಎಂದು ಆರೋಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರ ಮತ್ತು ಲೋಕಾಯುಕ್ತಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಪತ್ರಕರ್ತ ಕೆ.ಎಸ್.ಶಿವಶಂಕರ್ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿ ವಾದಿಗಳಾದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಲೋಕಾಯುಕ್ತ, ಲೋಕಾಯುಕ್ತ ರಿಜಿಸ್ಟ್ರಾರ್, ರಾಜ್ಯ ಕಂದಾಯ ಇಲಾಖೆ, ಮಂಡ್ಯ ಜಿಲ್ಲಾಧಿಕಾರಿ ಮತ್ತು ಮಳವಳ್ಳಿ ತಹಶೀಲ್ದಾರ್ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.
Next Story





