Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಡಿಗ್ರಿ ಕುರಿತು RTI ಅರ್ಜಿ:...

ಮೋದಿ ಡಿಗ್ರಿ ಕುರಿತು RTI ಅರ್ಜಿ: ಮಕ್ಕಳಂತಹ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಲ್ಲಿಲ್ಲ ಎಂದ ಗುಜರಾತ್‌ ವಿವಿ

ಪ್ರಧಾನಿ ಶೈಕ್ಷಣಿಕ ಅರ್ಹತೆಗಳ ಮಾಹಿತಿ ನೀಡಲು ನಿರಾಕರಣೆ

10 Feb 2023 4:00 PM IST
share
ಮೋದಿ ಡಿಗ್ರಿ ಕುರಿತು RTI ಅರ್ಜಿ: ಮಕ್ಕಳಂತಹ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಲ್ಲಿಲ್ಲ ಎಂದ ಗುಜರಾತ್‌ ವಿವಿ
ಪ್ರಧಾನಿ ಶೈಕ್ಷಣಿಕ ಅರ್ಹತೆಗಳ ಮಾಹಿತಿ ನೀಡಲು ನಿರಾಕರಣೆ

ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಗಳ ಬಗ್ಗೆ ವಿವರಗಳನ್ನು ಕೋರಿದ ಮನವಿಯನ್ನು ವಿರೋಧಿಸಿರುವ ಗುಜರಾತ್‌  ವಿಶ್ವವಿದ್ಯಾಲಯ ಈ ಕುರಿತು ಹೈಕೋರ್ಟಿನಲ್ಲಿ ವಾದ ಮಂಡಿಸಿ ಯಾರದ್ದೋ "ಬೇಜವಾಬ್ದಾರಿಯ ಮಕ್ಕಳಂತಹ ಕುತೂಹಲವನ್ನು" ಮಾಹಿತಿ ಹಕ್ಕು ಕಾಯಿದೆಯಡಿ ಸಾರ್ವಜನಿಕ ಹಿತಾಸಕ್ತಿ ಎಂದು ಪರಿಗಣಿಸಲಾಗದು" ಎಂದು ವಿವಿ ಹೇಳಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗಳ ಕುರಿತ ಮಾಹಿತಿಯನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನೀಡುವಂತೆ 2016 ರಲ್ಲಿ ಕೇಂದ್ರ ಮಾಹಿತಿ ಆಯೋಗ ಹೊರಡಿಸಿದ ಆದೇಶ ಪ್ರಶ್ನಿಸಿ ವಿವಿ ಹೈಕೋರ್ಟ್‌ ಕದ ತಟ್ಟಿತ್ತು.

ಕೇಜ್ರಿವಾಲ್‌ ಅವರ ಮತದಾರರ ಗುರುತು ಕಾರ್ಡ್‌ ಕುರಿತಾದ ಅರ್ಜಿಯನ್ನು ಆಯೋಗ ಪರಾಮರ್ಶಿಸುತ್ತಿದ್ದ ವೇಳೆ, ಪ್ರಧಾನಿ ತಮ್ಮ ಪದವಿಗಳ ಕುರಿತು ವಿವರಗಳನ್ನು ಬಹಿರಂಗಪಡಿಸಿದರೆ ತಾವು ಕೂಡ ಅಗತ್ಯ ಮಾಹಿತಿ ನೀಡುವುದಾಗಿ ಕೇಜ್ರಿವಾಲ್‌ ಹೇಳಿದ್ದರು. ಕೇಜ್ರಿವಾಲ್‌ ಅವರ ಪ್ರತಿಕ್ರಿಯೆಯನ್ನು ಓರ್ವ ನಾಗರಿಕರಾಗಿ ಅವರ ಆರ್‌ಟಿಐ ಅರ್ಜಿ ಎಂದು ಆಯೋಗ ಪರಿಗಣಿಸಲು ನಿರ್ಧರಿಸಿತ್ತು.

ಮೋದಿಗೆ ದಿಲ್ಲಿ ವಿವಿ 1978 ರಲ್ಲಿ ಬಿಎ ಪದವಿ ಹಾಗೂ 1983 ರಲ್ಲಿ ಗುಜರಾತ್‌ ವಿವಿ ಎಂಎ ಪದವಿ ನೀಡಿದೆ ಎಂದು ಬಿಜೆಪಿ ಹೇಳುತ್ತಿದೆ ಆದರೆ ಈ ಪದವಿಗಳು ನಕಲಿ ಎಂದು ಆಪ್‌ ವಾದಿಸುತ್ತಿದೆ.

ಗುರುವಾರ ವಿವಿ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ (Tushar Mehta) ಮಾತನಾಡಿ, ಅಡಗಿಸಲು ಏನೂ ಇಲ್ಲ, ಮಾಹಿತಿ ಬಹಿರಂಗಪಡಿಸಲು ವಿವಿಗೆ ಬಲವಂತಪಡಿಸುವಂತಿಲ್ಲ ಎಂದಿದ್ದರು. ಪ್ರಜಾಪ್ರಭುತ್ವದಲ್ಲಿ ಅಧಿಕಾರದಲ್ಲಿರುವ ವ್ಯಕ್ತಿಗೆ ಡಾಕ್ಟರೇಟ್‌ ಪದವಿ ಇದೆಯೇ ಅಥವಾ ಆತ ಅನಕ್ಷರಸ್ಥನೇ ಎಂಬುದು ಯಾವುದೇ ವ್ಯತ್ಯಾಸ ಉಂಟು ಮಾಡುವುದಿಲ್ಲ ಈ ವಿಚಾರದಲ್ಲಿ ಸಾರ್ವಜನಿಕ ಹಿತಾಸಕ್ತಿಯಿಲ್ಲ, ಅವರ ಗೌಪ್ಯತೆಯೂ ಬಾಧಿತವಾಗಿದೆ ಎಂದು ಮೆಹ್ತಾ ಹೇಳಿದರು.

ವಿವಿ ಈಗಾಗಲೇ ಮೋದಿ ಅವರ ಪದವಿಯನ್ನು ಸಾರ್ವಜನಿಕವಾಗಿ ಲಭ್ಯಗೊಳಿಸಿದೆ, ಒಬ್ಬರ ಕುತೂಹಲವನ್ನು ತಣಿಸಲು ಆರ್‌ಟಿಐ ಕಾಯಿದೆಯನ್ನು ಬದಲಿಸಬಹುದೇ ಎಂಬ ಕುರಿತು ಮಾತ್ರ ತಾವು ವಾದಿಸುತ್ತಿರುವುದಾಗಿ ಅವರು ಹೇಳಿದರು.

ಅರ್ಜಿಯ ಮೇಲಿನ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ.

ಇದನ್ನು ಓದಿ: ಮೋದಿಗೆ ಅದಾನಿಯೇ ʻಪವಿತ್ರ ಗೋವುʼ: ಶಿವಸೇನೆ ವ್ಯಂಗ್ಯ

share
Next Story
X