Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ ಮೂರು ವರ್ಷಗಳಲ್ಲಿ...

ಕಳೆದ ಮೂರು ವರ್ಷಗಳಲ್ಲಿ ಅಲ್ಪಸಂಖ್ಯಾತರಿಂದ ಸ್ವೀಕರಿಸುವ ದೂರುಗಳ ಸಂಖ್ಯೆಯಲ್ಲಿ ಹೆಚ್ಚಳ

ಉ.ಪ್ರ., ದಿಲ್ಲಿಯಲ್ಲಿ ಗರಿಷ್ಠ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ದತ್ತಾಂಶ ಬಹಿರಂಗ

10 Feb 2023 10:46 PM IST
share
ಕಳೆದ ಮೂರು ವರ್ಷಗಳಲ್ಲಿ ಅಲ್ಪಸಂಖ್ಯಾತರಿಂದ ಸ್ವೀಕರಿಸುವ ದೂರುಗಳ ಸಂಖ್ಯೆಯಲ್ಲಿ ಹೆಚ್ಚಳ
ಉ.ಪ್ರ., ದಿಲ್ಲಿಯಲ್ಲಿ ಗರಿಷ್ಠ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ದತ್ತಾಂಶ ಬಹಿರಂಗ

ಹೊಸದಿಲ್ಲಿ,ಫೆ.10: ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗಕ್ಕೆ ಸತತ ಆರು ವರ್ಷಗಳಿಂದ ಉತ್ತರಪ್ರದೇಶ ಹಾಗೂ ದಿಲ್ಲಿಯಲ್ಲಿನ ಮುಸ್ಲಿಂ ಸಮುದಾಯದ ಸದಸ್ಯರಿಂದ ಅತ್ಯಧಿಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಸರಕಾರ(Central Govt)ದ ದತ್ತಾಂಶಗಳಿಂದ ತಿಳಿದುಬಂದಿದೆ.

ದೇಶದ ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳನ್ನು ಒಟ್ಟುಗೂಡಿಸಿದರೂ ಈ ಎರಡು ರಾಜ್ಯಗಳಿಂದ ಗರಿಷ್ಠ ಸಂಖ್ಯೆಯ ಅಹವಾಲುಗಳು ಬಂದಿವೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಶುಕ್ರವಾರ ಲೋಕಸಭೆ(Lok Sabha)ಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಉತ್ತರದಲ್ಲಿ ತಿಳಿಸಿದೆ.

ಕಳೆದ ಐದು ವರ್ಷಗಳ ಅಲ್ಪಸಂಖ್ಯಾತ ಆಯೋಗವು ವಿವಿಧ ರಾಜ್ಯಗಳಿಂದ ಧರ್ಮದ ಆಧಾರದಲ್ಲಿ ಸ್ವೀಕರಿಸಿದ ಒಟ್ಟು ದೂರುಗಳ ಬಗ್ಗೆ ವಿಡುದಲೈ ಚಿರುತಗಳ್ ಕಚ್ಚಿ ಪಕ್ಷದ ಸಂಸದ ಡಿ. ರವಿಕುಮಾರ್(D. Ravikumar) ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂದರ್ಭ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮತಿ ಇರಾನಿ(Smriti Irani) ಅವರು ಈ ಅಂಕಿಂಶಗಳನ್ನು ಒದಗಿಸಿದರು.

ಕೇಂದ್ರ ಅಲ್ಪಸಂಖ್ಯಾತ ಆಯೋಗವು 2017-18ರಲ್ಲಿ ಒಟ್ಟು 1498 ದೂರುಗಳನ್ನು ಸ್ವೀಕರಿಸಿತ್ತು. 2018-19ರಲ್ಲಿ 1871, 2019-20ರಲ್ಲಿ 1670, 2020-21ರಲ್ಲಿ 1463, 2021-22ರಲ್ಲಿ 2076 ಹಾಗೂ 2022-23ನೇ ಸಾಲಿನ ಮೊದಲ 10 ತಿಂಗಳುಗಳಲ್ಲಿ 1984 ದೂರುಗಳು ಅದಕ್ಕೆ ಬಂದಿದ್ದವು.

ಕಳೆದ ಎರಡು ವಿತ್ತೀಯ ವರ್ಷಗಳಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಂದ ಆಯೋಗವು ಸ್ವೀಕರಿಸುತ್ತಿರುವ ದೂರುಗಳ ಸಂಖ್ಯೆಯಲ್ಲಿ ಏರಿಕೆಯಾಗುವುದನ್ನು ಈ ದತ್ತಾಂಶಗಳು ತೋರಿಸಿವೆ.

ಕಳೆದ ಮೂರು ವರ್ಷಗಳಲ್ಲಿ ಹೆಚ್ಚಿನ ದೂರುಗಳು ಉತ್ತರಪ್ರದೇಶ ಹಾಗೂ ದಿಲ್ಲಿಯಿಂದ ಬಂದಿದ್ದವು. ಕಳೆದ ಎರಡು ವರ್ಷಗಳಲ್ಲಿ ಮಹಾರಾಷ್ಟ್ರದಿಂದಲೂ ಬರುತ್ತಿರುವ ದೂರುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು.

2020-21ರ ಸಾಲಿನಲ್ಲಿ ಅಲ್ಪಸಂಖ್ಯಾತ ಆಯೋಗಕ್ಕೆ ದೇಶಾದ್ಯಂತದಿಂದ 732 ದೂರುಗಳು ಬಂದಿದ್ದವು. ಅವುಗಳಲ್ಲಿ ಅರ್ಧಾಂಶದಷ್ಟು ದೂರುಗಳು ಉತ್ತರಪ್ರದೇಶದಿಂದಲೇ ಸಲ್ಲಿಕೆಯಾಗಿವೆ.ದಿಲ್ಲಿಯಿಂದ 106 ಹಾಗೂ ಮಹಾರಾಷ್ಟ್ರದಿಂದ 60 ದೂರುಗಳು ಸಲ್ಲಿಸಲ್ಪಟ್ಟಿವೆ.

2021-22ರಲ್ಲಿ ಉತ್ತರಪ್ರದೇಶದಿಂದ 745, ದಿಲ್ಲಿಯಿಂದ 227 ಹಾಗೂ ಮಹಾರಾಷ್ಟ್ರದಿಂದ 140 ದೂರುಗಳು ಬಂದಿವೆ. ಪ್ರಸಕ್ತ ಹಣಕಾಸು ವರ್ಷ(2022-23)ದ ಮೊದಲ 10 ತಿಂಗಳುಗಳಲ್ಲಿ ಉತ್ತರಪ್ರದೇಶದಿಂದ 780, ದಿಲ್ಲಿಯಿಂದ 204 ಹಾಗೂ ಮಹಾರಾಷ್ಟ್ರದಿಂದ 119 ದೂರುಗಳು ಬಂದಿರುವುದಾಗಿ ಸದನಕ್ಕೆ ತಿಳಿಸಲಾಯಿತು.

ಮುಸ್ಲಿಂ ಸಮುದಾಯದಿಂದ 2020-21ರಲ್ಲಿ  1,105, 2021-22ರಲ್ಲಿ 1420 ದೂರುಗಳು ಬಂದಿವೆ. ಪ್ರಸಕ್ತ ಹಣಕಾಸು ವರ್ಷದ ಜನವರಿ 31ರವರೆಗೆ 128 ದೂರುಗಳು ಮುಸ್ಲಿಂ ಸಮುದಾಯದ ಸದಸ್ಯರಿಂದ ಆಯೋಗಕ್ಕೆ ಸಲ್ಲಿಕೆಯಾಗಿವೆ ಎಂದು ದತ್ತಾಂಶಗಳು ತಿಳಿಸಿವೆ.

ಕ್ರೈಸ್ತ ಸಮುದಾಯದ ಸದಸ್ಯರು 2020-21ರಲ್ಲಿ 103, 2021-22ರಲ್ಲಿ 137 ದೂರುಗಳನ್ನು ನೀಡಿದ್ದಾರೆ. ಈ ವರ್ಷದ ಜನವರಿಗೆ 107 ದೂರುಗಳು ಅವರಿಂದ ಬಂದಿವೆ ಎಂದು ದತ್ತಾಂಶಗಳು ತೋರಿಸಿವೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ಹತ್ತು ತಿಂಗಳುಗಳಲ್ಲಿ ಕ್ರೈಸ್ತರಿಂದ 107 ದೂರು ಬಂದಿವೆ. ಉತ್ತರಪ್ರದೇಶದಿಂದ 21 ಹಾಗೂ ತಮಿಳುನಾಡಿನಿಂದ 10 ದೂರುಗಳು ಸಲ್ಲಿಕೆಯಾಗಿವೆ.

2020-21ರಲ್ಲಿ ಸಿಖ್ಖರು 99 ದೂರುಗಳು ನೀಡಿದ್ದಾರೆ. 2021-22ರಲ್ಲಿ ಆ ಸಮುದಾಯದವರಿಂದ 222 ದೂರುಗಳು ಬಂದಿದ್ದು, ಹಿಂದಿನ ಸಾಲಿಗಿಂತ 120 ಶೇಕಡ ಏರಿಕೆಯಾಗಿದೆ. ಪ್ರಸಕ್ತ ವಿತ್ತ ವರ್ಷದಲ್ಲಿ ಸಿಖ್ಖ್ ಸಮುದಾಯದವರಿಂದ ಈವರೆಗೆ 270 ದೂರುಗಳು ಬಂದಿವೆ.

share
Next Story
X