Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿಯ 4 ಕಂಪೆನಿಗಳ ಎಮ್‌ಎಸ್‌ಸಿಐ...

ಅದಾನಿಯ 4 ಕಂಪೆನಿಗಳ ಎಮ್‌ಎಸ್‌ಸಿಐ ಸೂಚ್ಯಂಕ ಮೌಲ್ಯಕಡಿತ

10 Feb 2023 11:34 PM IST
share
ಅದಾನಿಯ 4 ಕಂಪೆನಿಗಳ ಎಮ್‌ಎಸ್‌ಸಿಐ ಸೂಚ್ಯಂಕ ಮೌಲ್ಯಕಡಿತ

ಹೊಸದಿಲ್ಲಿ, ಫೆ. 10: ಅದಾನಿ ಗುಂಪಿ(Adani Group)ನ ನಾಲ್ಕು ಕಂಪೆನಿಗಳ ಫ್ರೀ ಫ್ಲೋಟ್‌ ಸ್ಥಾನಮಾನವನ್ನು ಕಡಿತಗೊಳಿಸುವುದಾಗಿ ಅಮೆರಿಕದ ಜಾಗತಿಕ ಶೇರು ಸೂಚ್ಯಂಕ ನಿರ್ವಾಹಕ ಮೋರ್ಗನ್ ಸ್ಟಾನ್ಲಿ ಕ್ಯಾಪಿಟಲ್ ಇಂಟರ್ನ್ಯಾಷನಲ್(MSCI) ಗುರುವಾರ ತಿಳಿಸಿದೆ.

ಫ್ರೀ ಫ್ಲೋಟ್‌ಎಂದರೆ, ಅಂತರ್‌ರಾಷ್ಟ್ರೀಯ ಹೂಡಿಕೆದಾರರಿಗೆ ಖರೀದಿಗಾಗಿ ಶೇರು ಮಾರುಕಟ್ಟೆಗಳಲ್ಲಿ ಸಾರ್ವಜನಿಕವಾಗಿ ಲಭ್ಯವಿರುವ ಶೇರುಗಳ ಪ್ರಮಾಣ.

ಆದರೂ, ಅದಾನಿ ಗುಂಪಿನ ಕಂಪೆನಿಗಳ ಪರಿಶೀಲನೆ ಬಳಿಕ, ಅವುಗಳನ್ನು ಎಮ್‌ಎಸ್‌ಸಿಐ ಸೂಚ್ಯಂಕಗಳಿಂದ ತೆಗೆದು ಹಾಕದಿರಲೂ ಎಮ್‌ಎಸ್‌ಸಿಐ ನಿರ್ಧರಿಸಿದೆ.

ಎಮ್‌ಎಸ್‌ಸಿಐ ತನ್ನ ತ್ರೈಮಾಸಿಕ ಪರಿಶೀಲನೆಯ ಬಳಿಕ, ಅದಾನಿ ಗುಂಪಿನ ನಾಲ್ಕು ಶೇರುಗಳ ಫ್ರೀ ಫ್ಲೋಟ್ ಸ್ಥಾನಮಾನವನ್ನು ಕಡಿತಗೊಳಿಸಿದೆ. ಎಮ್‌ಎಸ್‌ಸಿಐ ಗ್ಲೋಬಲ್ ಸ್ಟ್ಯಾಂಡರ್ಡ್‌ ಇಂಡೆಕ್ಸ್‌ನಲ್ಲಿ, ಅದಾನಿ ಗುಂಪಿನ ಮುಂಚೂಣಿ ಕಂಪೆನಿ ಅದಾನಿ ಎಂಟರ್‌ಪ್ರೈಸಸ್‌ನ ಮೌಲ್ಯ (ವೇಟಿಂಗ್)ವನ್ನು 0.3 ಶೇಕಡದಷ್ಟು ಕಡಿತಗೊಳಿಸಿ 0.5 ಶೇಕಡಕ್ಕೆ ಇಳಿಸಲಾಗಿದೆ. ಅದಾನಿ ಟ್ರಾನ್ಸ್‌ಮಿಶನ್, ಅದಾನಿ ಟೋಟಲ್‌ಗ್ಯಾಸ್ ಮತ್ತು ಎಸಿಸಿ ಲಿಮಿಟೆಡ್ ಕಂಪೆನಿಗಳ ಮೌಲ್ಯಗಳನ್ನೂ ಕಡಿತಗೊಳಿಸಲಾಗಿದೆ.

ಬಿಲಿಯಾಧೀಶ ಗೌತಮ್‌ ಅದಾನಿ ಒಡೆತನದ ಕಂಪೆನಿಗಳು ಶೇರು ಮಾರುಕಟ್ಟೆಗಳಲ್ಲಿ ಹಸ್ತಕ್ಷೇಪ ನಡೆಸಿ ಶೇರುಗಳ ಬೆಲೆಗಳನ್ನು ಕೃತಕವಾಗಿ ಹೆಚ್ಚಿಸಿಕೊಂಡಿವೆ ಮತ್ತು ಕಂಪೆನಿಗಳು ತಪ್ಪು ಲೆಕ್ಕಗಳನ್ನು ಕೊಟ್ಟು ಹೂಡಿಕೆದಾರರನ್ನು ವಂಚಿಸುತ್ತಿವೆ ಎಂಬುದಾಗಿ ಅಮೆರಿಕದ ಹಿಂಡನ್‌ಬರ್ಗ್‌ ರಿಸರ್ಚ್ ಆರೋಪಿಸಿದ ಬಳಿಕ ಗುಂಪಿನ ಕಂಪೆನಿಗಳ ಶೇರುಗಳು ಭಾರೀ ಪ್ರಮಾಣದಲ್ಲಿ ಕುಸಿದಿವೆ.

ಏನಿದು ಎಮ್‌ಎಸ್‌ಸಿಐ?

ಎಮ್‌ಎಸ್‌ಸಿಐ ಸೂಚ್ಯಂಕಗಳ ಮೇಲೆ ಜಗತ್ತಿನಾದ್ಯಂತ ಹೂಡಿಕೆದಾರರು ನಿಗಾ ಇಡುತ್ತಾರೆ. ಸೂಚ್ಯಂಕಗಳಲ್ಲಿ ದೇಶಗಳು ಮತ್ತು ಶೇರುಗಳಿಗೆ ನೀಡಲಾಗಿರುವ ಮೌಲ್ಯ (ವೇಟೇಜ್)ವನ್ನು ಆಧರಿಸಿ ಹೂಡಿಕೆಗಳ ಪ್ರಮಾಣವನ್ನು ನಿರ್ಧರಿಸುತ್ತಾರೆ.

ಫಾರೀನ್ ಫೋರ್ಟ್‌ಫೋಲಿಯೊಇನ್ವೆಸ್ಟರ್ಸ್‌, ಹೆಜ್ ಫಂಡ್‌ಗಳು ಮತ್ತುಇತರ ಸೋವೆರೀನ್ ವೆಲ್ತ್ ಫಂಡ್‌ಗಳು ಎಮ್‌ಎಸ್‌ಸಿಐ ಸೂಚ್ಯಂಕಗಳನ್ನು ಹೆಚ್ಚಾಗಿ ಬಳಸುತ್ತಾರೆ.

share
Next Story
X