Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 2,000 ಮಂದಿಗೆ ಹಕ್ಕುಪತ್ರ ವಿತರಿಸುವ ...

2,000 ಮಂದಿಗೆ ಹಕ್ಕುಪತ್ರ ವಿತರಿಸುವ ಶಾಸಕ ವೇದವ್ಯಾಸ ಕಾಮತ್ ಹೇಳಿಕೆ ಹಾಸ್ಯಾಸ್ಪದ: ಮಾಜಿ ಶಾಸಕ ಲೋಬೊ

11 Feb 2023 7:06 PM IST
share
2,000 ಮಂದಿಗೆ ಹಕ್ಕುಪತ್ರ ವಿತರಿಸುವ  ಶಾಸಕ ವೇದವ್ಯಾಸ ಕಾಮತ್ ಹೇಳಿಕೆ ಹಾಸ್ಯಾಸ್ಪದ: ಮಾಜಿ ಶಾಸಕ ಲೋಬೊ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೊಳಪಟ್ಟ ಬೆಂಗ್ರೆಯಲ್ಲಿ ಫೆ.22ರಂದು ಸುಮಾರು 2,000 ಮಂದಿಗೆ  ಹಕ್ಕುಪತ್ರ ವಿತರಿಸುವುದಾಗಿ ಶಾಸಕ ಡಿ.ವೇದವ್ಯಾಸ ಕಾಮತ್ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ತಿಳಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸರಕಾರದ ಆದೇಶದ ಪ್ರಕಾರ 2018ರ ವರೆಗೆ ಮನೆ ಕಟ್ಟಿದವರಿಗೆ ತಾನು ಶಾಸಕನಾಗಿ  2018ರಲ್ಲಿ ಹಕ್ಕು ಪತ್ರ ನೀಡಿದ್ದೆನು.

ಆ ಬಳಿಕ  ಶಾಸಕರಾಗಿ ಆಯ್ಕೆಯಾದ  ಶಾಸಕ ವೇದವ್ಯಾಸ ಕಾಮತ್ ಸುಳ್ಳು ಹೇಳಿ ಜನರನ್ನು ಮೂರ್ಖರನ್ನಾಗಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.

ತಾನು ಹಕ್ಕು ಪತ್ರ ಕೊಡಿಸಿದ ನಂತರ ಚುನಾವಣೆ ಘೋಷಣೆಯಾಗಿರುವುದರಿಂದ ತಮಗೆ ಖಾತೆ ಮಾಡಿಕೊಡಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದರು.

ತಾನು ಶಾಸಕನಾಗಿ ಆಯ್ಕೆಯಾದ ಬಳಿಕ ಬೆಂಗ್ರೆಗೆ ಭೇಟಿ ನೀಡಿದಾಗ  ಸುಮಾರು 50 ವರ್ಷದಿಂದ  ಬೆಂಗ್ರೆಯಲ್ಲಿ ನೆಲೆಸಿದ್ದವರಿಗೆ ಹಕ್ಕುಪತ್ರ ಸಿಗದ ವಿಚಾರ ತನ್ನ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಬೆಂಗ್ರೆ ಜಮೀನಿಗೆ ಕಂದಾಯ ಗ್ರಾಮ ಎಂದು ಘೋಷಣೆಯಾಗದಿರುವ ಹಿನ್ನೆಲೆಯಲ್ಲಿ ಯಾವುದೇ ಸರ್ವೆ ನಂಬ್ರ ಮತ್ತು ಹಾಗೂ ಸರ್ವೆ ನಕಾಶೆ ಇಲ್ಲದಿರುವುದು ಹಾಗೂ ದಾಖಲೆಗಳಲ್ಲಿ ಇದೊಂದು ಕೇವಲ ಮರಳಿನ ದಿಣ್ಣೆ ಎಂದು ನಮೂದಾಗಿರುವುದು ಬೆಳಕಿಗೆ ಬಂತು. ಬಳಿಕ  ಮೂರು ವರ್ಷಗಳ ಕಾಲ ನಡೆಸಿದ ಸತತ ಪ್ರಯತ್ನದ ಮೂಲಕ ಕಂದಾಯ ಇಲಾಖೆಯಿಂದ ಅಧಿಕೃತವಾಗಿ ಗ್ರಾಮ ಎಂದು ಘೋಷಿಸುವಂತೆ ಮಾಡಿ, ಇದಕ್ಕೆ ಕಂದಾಯ ಸರ್ವೆ ನಂಬ್ರ ಕೊಡಿಸಲಾಗಿತ್ತು ಎಂದರು.

ಸುಮಾರು 2,400 ಅರ್ಜಿಗಳನ್ನು ಪಡೆದು ಅವುಗಳನ್ನು ಕಂದಾಯ ಅಧಿಕಾರಿಗಳ ಮುಖಾಂತರ ಪರಿಶೀಲನೆ ನಡೆಸಲಾಗಿತ್ತು.  ಈ ಪೈಕಿ ಅಂದು ಅಲ್ಲಿ ಸುಮಾರು 1,500 ಮನೆಗಳನ್ನು ನಿರ್ಮಿಸಲಾಗಿತ್ತು. ವಾಸವಿದ್ದವರಿಗೆ  ಪತ್ರ ನೀಡಲಾಗಿತ್ತು.  ಸುಮಾರು 100 ಮಂದಿಗೆ  ಆರ್‌ಟಿಸಿ  ವಿತರಿಸಲಾಗಿತ್ತು ಎಂದು ಮಾಹಿತಿ ನೀಡಿದರು.
ಹಕ್ಕುಪತ್ರಗಳನ್ನು ಪಡೆದ ಬಹಳಷ್ಟು ಮಂದಿ  ಈಗಾಗಲೇ ಖಾತೆಯನ್ನು ಮಾಡಿದ್ದಾರೆ. ಈ ದಾಖಲೆಗಳ ಮೂಲಕ ಸರಕಾರದ ಸೌಲಭ್ಯ ಹಾಗೂ ಮನೆಕಟ್ಟಲು ಬ್ಯಾಂಕ್‌ಗಳಿಂದ ಸಾಲವನ್ನು ಕೂಡ ಪಡೆದಿದ್ದಾರೆ.

ಬಂಗಾರಪ್ಪ  ಮುಖ್ಯಮಂತ್ರಿಯಾಗಿದ್ದಾಗ ಬೆಂಗ್ರೆಯಲ್ಲಿ ಹಕ್ಕು ಪತ್ರ ನೀಡಬೇಕೆಂದು ಜಿಲ್ಲಾಧಿಕಾರಿಗೆ ಆದೇಶ ನೀಡಿದ ಪ್ರಕಾರ ಹಲವಾರು ಮಂದಿಗೆ ಹಕ್ಕು ಪತ್ರ ಪಡೆದಿದ್ದರು. ಆದರೆ ಅದರಲ್ಲಿ ಸರ್ವೆನಂಬ್ರ ಹಾಕಿರುವುದಿಲ್ಲ, ಆಗ ಸರ್ವೆನಂಬ್ರ ಇರಲಿಲ್ಲ. ತಾನು ಶಾಸಕನಾದ ನಂತರ ಇದಕ್ಕೂ ಕೂಡ ಸರ್ವೆನಂಬ್ರವನ್ನು ನೀಡಲಾಯಿತು, ಈಗ ತನ್ನಿಂದ ತಾನೇ ಆ ಹಕ್ಕು ಪತ್ರಕ್ಕೂ ಸರ್ವೆನಂಬ್ರ ಅನ್ವಯವಾಗಿರುತ್ತದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಘಟಕ ಅಧ್ಯಕ್ಷ ಚೇತನ್ ಬೆಂಗ್ರೆ, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಮ್, ಶೇಖರ್ ಪುತ್ರನ್, ನವೀನ್ ಕರ್ಕೇರ, ಸತೀಶ್ ಕೋಟ್ಯಾನ್, ಅಸ್ಲಾಂ ಬೆಂಗ್ರೆ, ಸಮದ್, ಬಿ. ಎಂ. ಶರೀಫ್,ಮಾಜಿ ಕಾರ್ಪೊರೇಟರ್ ಕವಿತಾ ವಾಸು ಮೊದಲಾದವರು ಉಪಸ್ಥಿತರಿದ್ದರು.

share
Next Story
X