Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಕ್ಷಗಾನ ಸಮ್ಮೇಳನ: ವಿರೋಧದ ನಡುವೆಯೂ...

ಯಕ್ಷಗಾನ ಸಮ್ಮೇಳನ: ವಿರೋಧದ ನಡುವೆಯೂ ಗೋಷ್ಠಿ ಉದ್ಘಾಟಿಸಿದ ರೋಹಿತ್ ಚಕ್ರತೀರ್ಥ

11 Feb 2023 9:16 PM IST
share
ಯಕ್ಷಗಾನ ಸಮ್ಮೇಳನ: ವಿರೋಧದ ನಡುವೆಯೂ ಗೋಷ್ಠಿ ಉದ್ಘಾಟಿಸಿದ ರೋಹಿತ್ ಚಕ್ರತೀರ್ಥ

ಉಡುಪಿ: ಹಿರಿಯ ಯಕ್ಷಗಾನ ಕಲಾವಿದರು, ಬಿಲ್ಲವ ಸಂಘಟನೆಗಳು ಹಾಗೂ ವಿವಿಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದಲ್ಲಿ ಇಂದು ಭಾಗವಹಿಸಿದ ರೋಹಿತ್ ಚಕ್ರತೀರ್ಥ, ಕೆರೆಮನೆ ಶಿವರಾಯ ಹೆಗಡೆ ವೇದಿಕೆಯಲ್ಲಿ ಗೋಷ್ಠಿಗಳ ಉದ್ಘಾಟನೆ ನೆರವೇರಿಸಿ ದಿಕ್ಸೂಚಿ ಭಾಷಣ ಮಾಡಿದರು.

ಯಕ್ಷಗಾನ ಕಲೆಯನ್ನು ಒಡೆಯುವ ಹುನ್ನಾರ ವ್ಯವಸ್ಥಿತವಾಗಿ ನಡೆಯುತ್ತಿದೆ. ಯಕ್ಷಗಾನ ಬ್ರಾಹ್ಮಣರ ಕಲೆ ಎಂಬುದಾಗಿ ಕೆಲವರು, ಇನ್ನು ಕೆಲವರು ಇದು ಅಬ್ರಾಹ್ಮಣರ ಕಲೆ ಎಂದು ವಾದಿಸುತ್ತಿದ್ದಾರೆ. ಆದರೆ ಯಕ್ಷಗಾನವು ಜಾತಿ ಶ್ರೇಣಿಕೃತ ವ್ಯವಸ್ಥೆ ಹುಟ್ಟುವುದಕ್ಕಿಂತ ಮೊದಲೇ ಇದ್ದ ಕಲೆ. ಆದುದರಿಂದ ಇದರಲ್ಲಿ ಬ್ರಾಹ್ಮಣರು, ಅಬ್ರಾಹ್ಮಣರು ಎಂಬ ಚಿಂತನೆ ಮಾಡುವುದೇ ತಪ್ಪು. ಇದು ಯಾವುದೇ ಜಾತಿ, ಕುಲ, ಪಂಥಕ್ಕೆ ಸೇರದ ಶುದ್ಧವಾದ ಕಲೆ. ಇದನ್ನು ಅರ್ಥ ಮಾಡಿದರೆ ವಿಘಟಕ ಶಕ್ತಿಯನ್ನು ದೂರ ಇಡುವ ಎಚ್ಚರ ನಮ್ಮಲ್ಲಿ ಬರುತ್ತದೆ. ಇಲ್ಲದಿದ್ದರೆ ಯಕ್ಷಗಾನ ರಂಗದೊಳಗೆ ವಿಭಜನೆ ಆಗುವ ಸಾಧ್ಯತೆ ಇರುತ್ತದೆ ಎಂದು ರೋಹಿತ್ ಚಕ್ರತೀರ್ಥ ಹೇಳಿದರು.

ನಾಗರಿಕತೆ ಹುಟ್ಟುತ್ತಿರುವ ಸಮಯ, ಕಲೆ ರೂಪುಗೊಳ್ಳುತ್ತಿದ್ದ ಸಮಯದಲ್ಲಿ ಜನರಿಗೆ ಮನರಂಜನೆಯ ದಾರಿಯಾಗಿ ಬಂದಿರುವುದೇ ಯಕ್ಷಗಾನ ಕಲೆ. ಸಾಂಸ್ಕೃತಿಕ ನಾಗರಿಕತೆ, ಮಾನಸಿಕ ಸಂಸ್ಕಾರವನ್ನು ಮನುಷ್ಯ ಕಂಡುಕೊಳ್ಳುವ ಸಮಯದಲ್ಲಿ ಹುಟ್ಟಿದ ಕಲೆ ಇದು. ನಾಗರಿಕತೆಯ ಜೀವಂತ ಕಲೆ ಆಗಿರುವ ಯಕ್ಷಗಾನದಂತಹ ದೀರ್ಘಕಾಲಿಕ ಇತಿಹಾಸ ಬೇರೆ ಯಾವುದೇ ಕಲೆಗೂ ಇಲ್ಲ. ಈ ಕಲೆಯ ಬಗ್ಗೆ ಹೆಮ್ಮೆಯ ಜೊತೆಯ ಎಚ್ಚರ ಕೂಡ ಅಗತ್ಯ. ಆಗ ಮಾತ್ರ ಈ ಕಲೆಯನ್ನು ಬದಲಾಯಿಸುವಾಗ ನಾವು ಎಚ್ಚರದ ಹೆಜ್ಜೆ ಇಡಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಯಕ್ಷಗಾನ ಪ್ರಸಂಗಗಳನ್ನು ಬರೆಯಲು ಪುರಾಣಗಳು ಬೇಕಾಗಿಲ್ಲ ಎಂಬ ವಿಚಾರವನ್ನು ಕೆಲವರು ಹೇಳುತ್ತಿದ್ದಾರೆ. ಆದರೆ ಭಾರತೀಯ ಸಂಸ್ಕೃತಿಯ ಮೂವರು ಮಕ್ಕಳು ಅಂದರೆ ವೇದ, ಮಹಾಕಾವ್ಯಗಳು ಹಾಗೂ ಪುರಾಣಗಳು. ಸೋಕಾಲ್ಡ್ ಬುದ್ದಿಜೀವಿಗಳಿಗೆ ವೇದ, ಮಹಾಕಾವ್ಯಗಳನ್ನು ವಿರೋಧಿಸಲು ಆಗದೆ  ಈಗ ಪುರಾಣಗಳ ವಿರುದ್ಧ ವ್ಯವಸ್ಥಿತ ಹುನ್ನಾರ ನಡೆಸುತ್ತಿದ್ದಾರೆ. ಈ ದೇಶದಲ್ಲಿ ಪುರಾಣವನ್ನು ಜನರಿಗೆ ತಲುಪಿಸಿದ ಮಾಧ್ಯಮ ಯಕ್ಷಗಾನ. ಹಾಗಾಗಿ ಪುರಾಣಗಳ ಮೌಲ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಲು ಯಕ್ಷಗಾನ ಉಳಿಯಬೇಕಾಗಿದೆ ಎಂದು ರೋಹಿತ್ ಚಕ್ರತೀರ್ಥ ತಿಳಿಸಿದರು.

ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಡಾ.ಪ್ರಭಾಕರ ಜೋಷಿ, ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಉಪಸ್ಥಿತರಿದ್ದರು. ನಾರಾಯಣ ಹೆಗಡೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

share
Next Story
X