Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲೀಗ ವಾಕ್‌ ಸ್ವಾತಂತ್ರ್ಯವಿಲ್ಲ:...

ದೇಶದಲ್ಲೀಗ ವಾಕ್‌ ಸ್ವಾತಂತ್ರ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

11 Feb 2023 9:53 PM IST
share
ದೇಶದಲ್ಲೀಗ ವಾಕ್‌ ಸ್ವಾತಂತ್ರ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ರಾಂಚಿ,ಫೆ.11: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ದೇಶದಲ್ಲಿ ಈಗ ವಾಕ್‌ಸ್ವಾತಂತ್ರ್ಯವಿಲ್ಲವೆಂದು ಆಪಾದಿಸಿದ್ದಾರೆ.

ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಅವರು, ಸಂಸತ್‌ನಲ್ಲಿ ತಾನು ಮಾಡಿದ ಭಾಷಣದ ಕೆಲವು ಭಾಗಗಳನ್ನು ಕಡತದಿಂದ ತೆಗೆದುಹಾಕಲಾಗಿದೆಯೆಂದು ಆಕ್ರೋಶ ವ್ಯಕ್ತಪಡಿಸಿದರು. ಸಂಸತ್‌ನೊಳಗಾಗಲಿ ಅಥವಾ ಹೊರಗಾಗಲಿ ಈಗ ವಾಕ್‌ಸ್ವಾತಂತ್ರವಿಲ್ಲ’’ ಎಂದವರು ಹೇಳಿದ್ದಾರೆ.

ಒಂದು ವೇಳೆ ಯಾರಾದರೂ ಸತ್ಯ ಹೇಳಿದಲ್ಲಿ, ಇಲ್ಲವೇ ಬರೆದಲ್ಲಿ, ಆನಂತರ ಅವರನ್ನು ಬಿಜೆಪಿ(BJP) ಯು ಜೈಲಿಗೆ ಕಳುಹಿಸುತ್ತದೆಯೆಂದವರು ಹೇಳಿದ್ದಾರೆ.

ಪಾಕೂರ್ ನಗರದ ಗುಮಾನಿ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಕ್ಷದ 60 ದಿನಗಳ  ‘ಹಾತ್ ಸೆ ಹಾತ್ ಜೋಡೋ’ ಜನಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

‘‘ಪ್ರಧಾನಿಯವರನ್ನು ಬಣ್ಣಿಸಲು ನಾನು ಯಾವುದೇ ಅಸಂವಿಧಾನಿಕ ಪದ ಅಥವಾ ಭಾಷೆಯನ್ನು ಬಳಸಿಲ್ಲ. ಅಟಲ್ ಬಿಹಾರಿ ವಾಜಪೇಯಿ(Atal Bihari Vajpayee)ಯವರು ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಹಾಗೂ ಪಿ.ವಿ.ನರಸಿಂಹರಾವ್ ಅವರಿಗೆ ಹಾಗೂ ಬಿಜೆಪಿ ಸಂಸದರು ಮಾಜಿ ಪ್ರಧಾನಿ ಮನಮೋಹನ್‌ಸಿಂಗ್(Manmohan Singh) ಅವರಿಗೆ ಬಳಸಿದ್ದಂತಹ ಅಭಿವ್ಯಕ್ತಿಯನ್ನೇ ನಾನು ಕೂಡಾ ಬಳಸಿದ್ದೆ’’ ಎಂದು ಖರ್ಗೆ ಹೇಳಿದರು.

ಆದಾನಿ ವಿವಾದಕ್ಕೆ ಸಂಬಂಧಿಸಿ ಕಾಂಗ್ರೆಸ್ ಅಧ್ಯಕ್ಷರು ತನ್ನ ಭಾಷಣದಲ್ಲಿ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ‘‘ ಪ್ರಧಾನಿ ನರೇಂದ್ರ ಮೋದಿಯವರ ಸ್ನೇಹಿತನಾದ ಅದಾನಿ(Adani) ಅವರ ಆವರ ಸಂಪತ್ತು 2019ರಲ್ಲಿ 1 ಲಕ್ಷ ಕೋಟಿ ರೂ. ಆಗಿತ್ತು. ಈಗ ಅವರು 13 ಲಕ್ಷ ಕೋಟಿ ರೂ. ಸಂಪತ್ತಿಗೆ ಒಡೆಯರಾಗಿದ್ದಾರೆ ಎಂದರು.

ಪ್ರಧಾನಿಯವರು ಆದಾನಿಗಾಗಿ ಕೆಲಸ ಮಾಡುತ್ತಿದ್ದಾರೆಯೇ ಹೊರತು ಬಡವರಿಗಾಗಿ ಅಲ್ಲವೆಂದು ಖರ್ಗೆ ಆರೋಪಿಸಿದರು. ಆದಾನಿ ಗ್ರೂಪ್‌ಗೆ ಎಲ್‌ಐಸಿಯು 16 ಸಾವಿರ ಕೋಟಿ ರೂ. ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ 82 ಸಾವಿರ ಕೋಟಿ ರೂ. ನೀಡಿದೆ ಎಂದವರು ಹೇಳಿದರು.

ಈ ವಿಷಯವನ್ನು ರಾಹುಲ್ ಅವರು ಸದನದಲ್ಲಿ ಪ್ರಸ್ತಾವಿಸಿದಾಗ, ಅದನ್ನು ಕೂಡಾ ಕಡತದಿಂದ ತೆಗೆದುಹಾಕಲಾಯಿತು ಎಂದು ಖರ್ಗೆ ಹೇಳಿದರು.

ಇ.ಡಿ. ಐಟಿ, ಸಿಬಿಐ ಪ್ರಕರಣಗಳನ್ನು ಎದುರಿಸುತ್ತಿರುವ ಹಲವು ಶಾಸಕರನ್ನು ಬಿದೆಪಿ ತನ್ನೆಡೆಗೆ ಸೆಳೆದುಕೊಂಡಿದೆ ಎಂದವರು ಹೇಳಿದರು. ‘‘ ಮೋದಿ ಹಾಗೂ ಶಾ ಅವರು ವಾಶಿಂಗ್‌ಮೆಶಿನ್ ಒಂದನ್ನು ಖರೀದಿಸಿದ್ದು, ಆ ಯಂತ್ರದಲ್ಲಿ ಕಳಂಕಿತ ಶಾಸಕರನ್ನು ಅವರು ತೊಳೆದುಹಾಕುತ್ತಾರೆ. ಆ ಮೂಲಕ ಈ ಶಾಸಕರು ಸ್ವಚ್ಛವಾಗಿ ಹೊರಬರುತ್ತಾರೆ’’ ಎಂದವರು ಅಣಕವಾಡಿದರು.

ಚುನಾಯಿತ ಸರಕಾರಗಳನ್ನು ಪತನಗೊಳಿಸುವಲ್ಲಿ ನಿಪುಣರಾಗಿರುವ ಮೋದಿ ಹಾಗೂ ಅಮಿತ್ ಶಾ ಅವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವುದು ವಿಪರ್ಯಾಸ ಎಂದು ಖರ್ಗೆ ಲೇವಡಿ ಮಾಡಿದರು.

ದೇಶದ ಸ್ವಾತಂತ್ರಕ್ಕೆ ಹೋರಾಟ ನಡೆಸಿರುವುದು ಹಾಗೂ ದೇಶದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿರುವುದು ಕಾಂಗ್ರೆಸ್ ಸರಕಾರವಾಗಿದೆ ಎಂದರು.

‘ಹಾಥ್ ಸೆ ಹಾತ್ ಜೋಡೋ’ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಕೇಂದ್ರ ಸರಕಾರದ ‘ಜನ ವಿರೋಧಿ’ ಕಾರ್ಯಕ್ರಮಗಳ ವಿರುದ್ಧ ಜಾಗೃತಿ ಮೂಡಿಸಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

share
Next Story
X