Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ‘ಕುಸ್ತಿ’, ತ್ರಿಪುರಾದಲ್ಲಿ...

ಕೇರಳದಲ್ಲಿ ‘ಕುಸ್ತಿ’, ತ್ರಿಪುರಾದಲ್ಲಿ ‘ದೋಸ್ತಿ’: ಕಾಂಗ್ರೆಸ್-ಸಿಪಿಎಂ ಮೈತ್ರಿಗೆ ಮೋದಿ ಟೀಕೆ

11 Feb 2023 10:17 PM IST
share
ಕೇರಳದಲ್ಲಿ ‘ಕುಸ್ತಿ’, ತ್ರಿಪುರಾದಲ್ಲಿ ‘ದೋಸ್ತಿ’: ಕಾಂಗ್ರೆಸ್-ಸಿಪಿಎಂ ಮೈತ್ರಿಗೆ ಮೋದಿ ಟೀಕೆ

ರಾಧಾಕಿಶೋರಪುರ,ಫೆ.11: ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ತ್ರಿಪುರಾದಲ್ಲಿ ಕಾಂಗ್ರೆಸ್-ಸಿಪಿಎಂ(Congress-CPM) ಮೈತ್ರಿಕೂಟದ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು, ಉಭಯ ಪಕ್ಷಗಳು ಕೇರಳದಲ್ಲಿ ‘ಕುಸ್ತಿ’ಯಾಡುತ್ತಿವೆ ಮತ್ತು ತ್ರಿಪುರಾದಲ್ಲಿ ‘ದೋಸ್ತಿ’ಮಾಡಿಕೊಂಡಿವೆ ಎಂದು ಹೇಳಿದರು.

ಸ್ಥಳೀಯ ಪಕ್ಷ ತಿಪ್ರಾ ಮೊಹ್ತಾವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ ಮೋದಿ,ಕೆಲವು ಇತರ ಪಕ್ಷಗಳೂ ಪ್ರತಿಪಕ್ಷ ಮೈತ್ರಿಕೂಟಕ್ಕೆ ಹಿಂದಿನಿಂದ ನೆರವಾಗುತ್ತಿವೆ,ಆದರೆ ಅದಕ್ಕೆ ಬೀಳುವ ಯಾವುದೇ ಮತ ತ್ರಿಪುರಾವನ್ನು ಹಲವಾರು ವರ್ಷಗಳಷ್ಟು ಹಿಂದಕ್ಕೊಯ್ಯುತ್ತದೆ ಎಂದರು.

ದುರಾಡಳಿತದ ಹಳೆಯ ಆಟಗಾರರು ‘ಚಂದಾ (ದೇಣಿಗೆ)’ಗಾಗಿ ಪರಸ್ಪರ ಕೈಗಳನ್ನು ಜೋಡಿಸಿದ್ದಾರೆ. ಕೇರಳದಲ್ಲಿ ಕುಸ್ತಿಯಾಡುತ್ತಿರುವವರು ತ್ರಿಪುರಾದಲ್ಲಿ ದೋಸ್ತಿ ಮಾಡಿಕೊಂಡಿದ್ದಾರೆ ಎಂದು ಗೋಮತಿ ಜಿಲ್ಲೆಯ ರಾಧಾಕಿಶೋರಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಮೋದಿ ಟೀಕಿಸಿದರು.

ಇದಕ್ಕೂ ಮುನ್ನ ಧಲಾಯಿ ಜಿಲ್ಲೆಯ ಅಂಬಾಸಾದಲ್ಲಿ ಇನ್ನೊಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು,‘ಎಡರಂಗ ಮತ್ತು ಕಾಂಗ್ರೆಸ್ ಸರಕಾರಗಳು ಬುಡಕಟ್ಟು ಜನರಲ್ಲಿ ಒಡಕನ್ನು ಸೃಷ್ಟಿಸಿದ್ದವು, ಆದರೆ ಬಿಜೆಪಿಯು ಬ್ರೂಗಳು ಸೇರಿದಂತೆ ಅವರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಿದೆ. ಬಿಜೆಪಿಯು ಭಾರತದಾದ್ಯಂತ ಬುಡಕಟ್ಟು ಜನರ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಮಿಜೋರಾಮ್‌ನಿಂದ ನಿರ್ವಸಿತಗೊಂಡಿದ್ದ 37,000ಕ್ಕೂ ಅಧಿಕ ಬ್ರೂಗಳಿಗೆ ನಾವು ತ್ರಿಪುರಾದಲ್ಲಿ ಪುನರ್ವಸತಿ ಕಲ್ಪಿಸಿದ್ದೇವೆ.

ನಮ್ಮ ಸರಕಾರವು ಉನ್ನತ ಶಿಕ್ಷಣದಲ್ಲಿ ಬುಡಕಟ್ಟು ಭಾಷೆ ಕೋಕ್‌ಬೊರೋಕ್ ಅನ್ನು ಜಾರಿಗೆ ತಂದಿದೆ. ಕೇಂದ್ರ ಬಜೆಟ್‌ನಲ್ಲಿ ಬುಡಕಟ್ಟು ಪ್ರದೇಶಗಳ ಅಭಿವೃದ್ಧಿಗಾಗಿ ಒಂದು ಲ.ಕೋ.ರೂ.ಗಳನ್ನು ಹಂಚಿಕೆ ಮಾಡಲಾಗಿದೆ ’ಎಂದು ತಿಳಿಸಿದರು.

ಕೋವಿಡ್ ವಿರುದ್ಧದ ಹೋರಾಟವನ್ನು ಪ್ರಸ್ತಾಪಿಸಿದ ಮೋದಿ,ಎಡರಂಗದ ಆಡಳಿತದ ರಾಜ್ಯವೊಂದರಲ್ಲಿ ಕೊರೋನ ವೈರಸ್‌ನಿಂದ ಹಲವಾರು ಜನರು ಸಂಕಷ್ಟಕ್ಕೆ ಗುರಿಯಾಗಿದ್ದರು ಮತ್ತು ಸಾವನ್ನಪ್ಪಿದ್ದಾರೆ. ಆದರೆ ಬಿಜೆಪಿಯು ಜನರ ಜೀವಗಳ ರಕ್ಷಣೆಗಾಗಿ ಶ್ರಮಿಸಿದ್ದರಿಂದ ತ್ರಿಪುರಾ ಸುರಕ್ಷಿತವಾಗಿತ್ತು ಎಂದರು.

share
Next Story
X