Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯ ಸಿಗಲು ಜಾತಿ ವ್ಯವಸ್ಥೆಯಿಂದ ಹೊರ ಬರಬೇಕು: ಸ್ಟ್ಯಾನ್ಲಿ ಕರೆ

11 Feb 2023 10:45 PM IST
share
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯ ಸಿಗಲು ಜಾತಿ ವ್ಯವಸ್ಥೆಯಿಂದ ಹೊರ ಬರಬೇಕು: ಸ್ಟ್ಯಾನ್ಲಿ ಕರೆ

ಬೆಂಗಳೂರು, ಫೆ.11: ನಾವೆಲ್ಲರೂ ಧರ್ಮ, ಜಾತಿ ವ್ಯವಸ್ಥೆಯ ಆಲೋಚನೆಗಳಿಂದ ಹೊರಬರುವುದಿಲ್ಲವೋ, ಅಲ್ಲಿಯ ವರೆಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ನ್ಯಾಯ ಸಿಗುವುದೂ ಇಲ್ಲ ಎಂದು ಒಡನಾಡಿ ಸಂಸ್ಥೆ ಸಂಸ್ಥಾಪಕ ಸ್ಟ್ಯಾನ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ನಡೆದ ‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಗೆ ಹಾಗೂ ಪುನಃಶ್ಚೇತನ’ ಸಂವಾದದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಧರ್ಮ, ರಾಜಕೀಯ ಹಾಗೂ ಆರ್ಥಿಕತೆ ಈ ಮೂರು ತ್ರಿವಳಿ ಸಹೋದರರಂತೆ ಬಿಂಬಿಸಲಾಗುತ್ತಿದೆ. ಈ ಮೂರರಲ್ಲಿ ಒಬ್ಬರನ್ನು ಕಾಪಾಡಲು ಇನ್ನಿಬ್ಬರು ನಿಕಟ ಬೆಂಬಲ ನೀಡುತ್ತಿದ್ದಾರೆ. ದೇಶದ ಜನರು ಇದರ ಕುರಿತು ಪರಿಪೂರ್ಣ ಪ್ರಜ್ಞೆಯನ್ನು ಹೊಂದಿರಬೇಕು ಎಂದರು.

200ಕ್ಕೂ ಹೆಚ್ಚು ಮಕ್ಕಳು ಚಿತ್ರದುರ್ಗದ ಮುರುಘಾಶ್ರೀಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಹೀಗೆ ದೌರ್ಜನ್ಯಕ್ಕೆ ಒಳಗಾದವರಲ್ಲಿ ಎಷ್ಟೋ ಮಂದಿ ಮಕ್ಕಳು ಗರ್ಭಚೀಲ ಕಳೆದುಕೊಂಡಿದ್ದಾರೆ ಎಂದ ಅವರು, ದೇಶದಲ್ಲಿ ಬಿಲ್ಕಿಸ್ ಬಾನೂ, ಮುರುಘಾಶ್ರಿ ಪ್ರಕರಣಗಳು ಕೇವಲ ಕ್ಯಾನ್ಸರ್ ಗಡ್ಡೆಯ ಲಕ್ಷಣಗಳಂತೆ ಉಳಿದುಕೊಂಡಿವೆ. ಆದರೆ ಇಂತಹ ಹಲವಾರು ಪ್ರಕರಣಗಳು ಬಹುಬೇಗ ಕಣ್ಮರೆಯಾಗುತ್ತವೆ ಎಂದು ತಿಳಿಸಿದರು. 

ಸುಪ್ರೀಂ ಕೋರ್ಟ್ ನ್ಯಾಯವಾದಿ ಬೃಂದಾ ಗ್ರೋವರ್ ಮಾತನಾಡಿ, ಬಾಲ್ಯ ವಿವಾಹಗಳ ಸಂಖ್ಯೆ ಇಂದು ಕಡಿಮೆಯಾಗಿದ್ದರೆ, ಅದಕ್ಕೆ ಕಾರಣ ಸಂಘಟನೆಗಳು ಸಮಾಜದಲ್ಲಿ ಮೂಡಿಸಿರುವ ಜಾಗೃತಿ, ಹೆಣ್ಣುಮಕ್ಕಳಿಗೆ ಸಿಕ್ಕಿರುವ ಶಿಕ್ಷಣ, ಹೋರಾಟಗಳು ಮತ್ತು ಜೀವನೋಪಾಯದ ಅವಕಾಶಗಳು ಹೊರತು, ನ್ಯಾಯಾಲಯ ಅಥವಾ ಕಾನೂನು ಅಲ್ಲ ಎಂದು ತಿಳಿಸಿದರು.

ಅತ್ಯಾಚಾರಿ ಒಂದು ಸಮುದಾಯದವನಿದ್ದರೆ ಮರಣದಂಡನೆಯನ್ನು ಕೊಡಲಾಗುತ್ತದೆ, ಇನ್ನೊಂದು ಪ್ರಕರಣದಲ್ಲಿ ಅವರನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತದೆ. ಹೊರತು ಯಾವ ಪ್ರಕರಣದಲ್ಲಿಯೂ ಮಹಿಳೆಗೆ ನ್ಯಾಯ ಸಿಗುತ್ತಿಲ್ಲ ಎಂದ ಅವರು, ಸಾಮೂಹಿಕ ಹತ್ಯೆಗಳಲ್ಲಿ ಒಂದೇ ಒಂದು ಪ್ರಕರಣವನ್ನೂ ದಾಖಲು ಮಾಡದಂತಹ ಸರಕಾರ ಮುಸ್ಲಿಂ ಮಹಿಳೆಯ ಮೇಲೆ ಆಗುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಬಲ್ಲದೇ ಎಂದು ಪ್ರಶ್ನಿಸಿದರು.

ಅಖಿಲ ಭಾರತ ಜನವಾದಿ ಸಂಘಟನೆಯ ಮೀನಾಕ್ಷಿ ಬಾಳಿ ಮಾತನಾಡಿ, ಧಾರ್ಮಿಕ ಮುಖಂಡರು ಮಹಿಳೆಯರ ಮೇಲಿನ ಅತ್ಯಾಚಾರವನ್ನು ಕಾನೂನುಬದ್ಧ ಗೊಳಿಸಿಕೊಂಡಿದ್ದಾರೆ. ಕೆಳವರ್ಗದ ಹೆಣ್ಣುಮಕ್ಕಳನ್ನು ಭೋಗಿಸಲೆಂದೇ ಮೇಲ್ವರ್ಗದ ಮಂದಿ ದೇವದಾಸಿ ಪದ್ಧತಿಯನ್ನೇ ಮಾಡಿಕೊಂಡಿದ್ದರು ಎಂದರು. 

ನಿತ್ಯಾನಂದ, ರಾಮ್ ರಹೀಂ, ಅಸಾರಾಂ, ರಾಮಚಂದ್ರಾಪುರದ ಸ್ವಾಮಿಗಳ ಅತ್ಯಾಚಾರದ ಆರೋಪದಲ್ಲಿ ಸಿಲುಕಿದ್ದರು. ಎಲ್ಲರೂ ಜೈಲಿಗೆ ಹೋದರೆ ರಾಮಚಂದ್ರಾಪುರದ ಸ್ವಾಮಿಯನ್ನು ಯಾವ ಅಧಿಕಾರಿಗಳೂ ಮುಟ್ಟಿಲ್ಲ. ಹತ್ತು ಮಂದಿ ನ್ಯಾಯಾಧೀಶರು ತನಿಖೆಯಿಂದ ಹಿಂದೆ ಸರಿದರು ಎಂದು ಅವರು ಹೇಳಿದರು.  

‘2002ರಲ್ಲಿ ಪಿಂಪ್ ಆಗಿ ಕೆಲಸ ಮಾಡುತ್ತಿದ್ದ ಸ್ಯಾಂಟ್ರೊ ರವಿಯನ್ನು ಹಲವು ಬಾರಿ ಪೆÇಲೀಸರಿಗೆ ಹಿಡಿದುಕೊಟ್ಟಿದ್ದೆವು. ಆ ಸಮಯದಲ್ಲಿ ಒಂದು ವರ್ಷ ಆತ ಜೈಲಿನಲ್ಲಿದ್ದ. ಅನಂತರ ಅವನು ಇಷ್ಟು ವೇಗವಾಗಿ ಬೆಳೆದಿದ್ದಾನೆ. ಇದಕ್ಕೆ ಆತನ ಹಿಂದಿರುವ ರಾಜಕೀಯ ವ್ಯಕ್ತಿಗಳೇ ಕಾರಣ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು’

-ಸ್ಟ್ಯಾನ್ಲಿ, ಒಡನಾಡಿ ಸಂಸ್ಥೆ ಸಂಸ್ಥಾಪಕ

share
Next Story
X