Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೂತನ ಮಾಹಿತಿ ರಕ್ಷಣೆ ಮಸೂದೆಯು ಸರ್ಕಾರದ...

ನೂತನ ಮಾಹಿತಿ ರಕ್ಷಣೆ ಮಸೂದೆಯು ಸರ್ಕಾರದ ಹಿತಾಸಕ್ತಿಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ: ಎಫ್‌ಎಸ್‌ಎಂಕೆ

12 Feb 2023 10:59 PM IST
share
ನೂತನ ಮಾಹಿತಿ ರಕ್ಷಣೆ ಮಸೂದೆಯು ಸರ್ಕಾರದ ಹಿತಾಸಕ್ತಿಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ: ಎಫ್‌ಎಸ್‌ಎಂಕೆ

ಬೆಂಗಳೂರು: ‘ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ-2022ರ ಕರಡನ್ನು ಕೇಂದ್ರ ಸರಕಾರ ಸಿದ್ಧಪಡಿಸಿದ್ದು, ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಇದು ಖಾಸಗಿ ಕಂಪೆನಿಗಳಿಗೆ ಅನುಕೂಲ ಮಾಡಲಿದ್ದು, ಸಾರ್ವಜನಿಕರಿಗೆ ಮಾರಕವಾಗಲಿದೆ’ ಎಂದು ಕರ್ನಾಟಕ ಸ್ವತಂತ್ರ ತಂತ್ರಾಂಶ ಅಂದೋಲನ (ಎಫ್‍ಎಸ್‍ಎಂಕೆ) ವಿರೋಧ ವ್ಯಕ್ತಪಡಿಸಿದೆ. 

ರವಿವಾರ ಕೋರಮಂಗಲದಲ್ಲಿರುವ ವೈಡಬ್ಲ್ಯೂಸಿಎ ಹಾಲ್‍ನಲ್ಲಿ ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ-2022 ಕುರಿತು ಆಯೋಜಿಸಿದ್ದ ಸಂವಾದದಲ್ಲಿ ಸಂಶೋಧಕ ಶ್ರೀನಿವಾಸ್ ಕೊಡಾಲಿ ಮಾತನಾಡಿ, ‘2016ರಲ್ಲಿ ಪುಟ್ಟಸ್ವಾಮಿ ಪ್ರಕರಣದಲ್ಲಿ ದತ್ತಾಂಶ ಸಂರಕ್ಷಣೆ ಮಾಡುವಂತೆ ಸುಪ್ರಿಂ ಕೋರ್ಟ್ ತೀರ್ಪು ನೀಡಿದೆ. ಈ ತೀರ್ಪನ್ನು ಅಪ್ರಸ್ತುತಗೊಳಿಸಲು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆಯನ್ನು ಜಾರಿ ಮಾಡಲು ಕೇಂದ್ರ ಸರಕಾರ ಹವಣಿಸುತ್ತಿದೆ ಎಂದು ದೂರಿದರು. 

ಕೇಂದ್ರ ಸರಕಾರವು ದತ್ತಾಂಶ ಸಂರಕ್ಷಣೆಯ ಕುರಿತು ಶ್ರೀಕೃಷ್ಣ ಕಮಿಟಿಯನ್ನು ಮಾಡಿತ್ತು. ಕಮಿಟಿಯು ದತ್ತಾಂಶ ಸಂರಕ್ಷಣೆಯೊಂದಿಗೆ ಗೌಪ್ಯತೆಯನ್ನು ಮಸೂದೆಯಲ್ಲಿ ಸೇರಿಸಬೇಕು ಎಂದು ಶಿಫಾರಸ್ಸು ಮಾಡಿತ್ತು. ಆದರೆ ಜಂಟಿ ಸಂಸದೀಯ ಸಮಿತಿಯನ್ನು ನೇಮಕ ಮಾಡಿ ಖಾಸಗಿ ಕಂಪೆನಿಗಳಿಗೆ ಅನುಕೂಲವಾಗುವಂತೆ ಮಾಡಿದೆ ಎಂದು ಅವರು ಆರೋಪಿಸಿದರು. 

ಎಫ್‍ಎಸ್‍ಎಂಕೆಯ ಪ್ರಧಾನ ಕಾರ್ಯದರ್ಶಿ ನವೀನ್ ಮುದುನೂರು ಮಾತನಾಡಿ, ಕೇಂದ್ರ ಸರಕಾರವು 2017ರಲ್ಲಿ ಈ ಮಸೂದೆಗೆ ಕರಡನ್ನು ರೂಪಿಸಿತ್ತು. ಆದರೆ ಸತತ ಐದು ವರ್ಷಗಳ ಕಾಲ ಮಸೂದೆಯನ್ನು ಪರಿಷ್ಕರಿಸಿ ನಾಲ್ಕು ಅವೃತ್ತಿಯಲ್ಲಿ ಪ್ರಕಟಿಸುತ್ತಿದೆ. ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ-2022 ನಾಲ್ಕನೆ ಆವೃತ್ತಿ ಆಗಿದೆ ಎಂದರು. 

ಹಿಂದಿನ ಮಸೂದೆಗಳಲ್ಲಿ ಉಲ್ಲೇಖಿಸಿದಂತೆ ದತ್ತಾಂಶ ಸಂರಕ್ಷಣಾ ಮಂಡಳಿಯು ದತ್ತಾಂಶಗಳ ಕುರಿತು ದೂರುಗಳು ಬಂದಾಗ ಪರಿಶೀಲಿಸಬಹುದಿತ್ತು. ಆದರೆ ಈಗ ಪ್ರಕಟವಾಗಿರುವ ಮಸೂದೆಯ ಅನ್ವಯ ಸರಕಾರದ ಆದೇಶ ಮುಖ್ಯವಾಗುತ್ತದೆ. ಈ ಮಸೂದೆಯು 2000ರ ಮಾಹಿತಿ ತಂತ್ರಜ್ಞಾನ ಕಾಯ್ದೆಯನ್ನು ಪರಿಗಣಿಸಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. 

ಕರ್ನಾಟಕ ಸೇರಿ ಇತರೆ ರಾಜ್ಯಗಳಲ್ಲಿ ಡಿಜಿಟಲ್ ರೂಪದ ಹೊರತಾಗಿ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಮತದಾರರ ಮಾಹಿತಿ ಕಳವು ಹಗರಣಗಳ ಹೊರಬಿದ್ದಿವೆ. ಇದನ್ನು ಆನ್‍ಲೈನ್ ಮೂಲಕ ಮಾಡಿಲ್ಲ. ಮನೆ-ಮನೆಯಿಂದ ಮತದಾರರ ಮಾಹಿತಿಯನ್ನು ನೇರವಾಗಿ ಆಫ್‍ಲೈನ್ ಮೂಲಕ ಸಂಗ್ರಹಿಸಿದ್ದಾರೆ. ಇದು ಸಂಪೂರ್ಣ ಕಾನೂನುಬಾಹಿರವಾಗಿದ್ದು, ಮಸೂದೆಯಲ್ಲಿಮ ಚರ್ಚೆ ನಡೆಸಿಲ್ಲ. ಹಾಗಾಗಿ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡುವಲ್ಲಿ ಮಸೂದೆ ವಿಫಲವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. 

ಒಂದು ವೇಳೆ ಮಸೂದೆಯು ಜಾರಿಯಾದರೆ, ಜನರ ವೈಯಕ್ತಿಕ ದತ್ತಾಂಶದ ಮಾಲಕತ್ವವು ಸಂಪೂರ್ಣವಾಗಿ ಸರಕಾರಕ್ಕೆ ಹೋಗುತ್ತದೆ. ಸರಕಾರ ಆ ದತ್ತಾಂಶವನ್ನು ಬಳಸಲು ಜನರ ಅನುಮತಿಯನ್ನು ಪಡೆಯುವ ಅಗತ್ಯ ಇರುವುದಿಲ್ಲ. ಮಾಹಿತಿಯನ್ನು ತನಗೆ ಇಷ್ಟ ಬಂದಂತೆ ಬಳಕೆ ಮಾಡಿಕೊಳ್ಳಲು ಮಸೂದೆಯು ನೆರವು ನೀಡುತ್ತದೆ ಎಂದು ಅವರು ವಿವರಿಸಿದರು. 

ಈ ಮಸೂದೆಯು ಮಾಹಿತಿ ಹಕ್ಕು ಕಾಯ್ದೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ. ಕಾಯ್ದೆಯ ಸೆಕ್ಷನ್ 8(ಜೆ)(1)ನ್ನು ಈ ಮಸೂದೆಯು ತೆಗೆದು ಹಾಕುವಂತೆ ತಿಳಿಸಿದೆ. ಇದರಿಂದ ವೈಯಕ್ತಿಕ ದತ್ತಾಂಶಗಳ ಗೌಪ್ಯತೆಯನ್ನು ರಕ್ಷಿಸಲು ಸಾಧ್ಯವಾಗುದಿಲ್ಲ. ಅಲ್ಲದೆ ಸರಕಾರ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ. ದತ್ತಾಂಶ ಸೋರಿಕೆಯ ಕುರಿತು ಸರಕಾರ ಆಗಲೀ, ನ್ಯಾಯಾಲಯ ಆಗಲೀ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದರು. 

ಕೇಂದ್ರ ಸರಕಾರವು ಇಂಡಿಯಾ-0.2 ಎಂಬ ಪಾಲಿಸಿಯನ್ನು ಜಾರಿ ಮಾಡುತ್ತಿದೆ. ಆಧಾರ್ ಕಾರ್ಡ್ ಅನ್ನು ಒಳಗೊಂಡಿದ್ದು, ಸಂಯೋಜಿತ ವ್ಯವಸ್ಥೆಯನ್ನು ಇದು ಒಳಗೊಂಡಿದೆ. ಇದಕ್ಕೆ ಕೃತಕ ಬುದ್ಧಿಶಕ್ತಿಯನ್ನು ಅಳವಡಿಸಲಾಗುತ್ತದೆ. ಇದರಿಂದ ಜನರಿಗೆ ತೊಂದರೆ ಆಗುತ್ತದೆ. ಯೋಜನೆಯನ್ನು ಪಡೆದುಕೊಳ್ಳಲು ಅರ್ಹರನ್ನು ಜನರು ನಿರ್ಧರಿಸುವುದಕ್ಕೂ, ಕೃತಕ ಬುದ್ಧಿಮತ್ತೆಯುಳ್ಳ ವ್ಯವಸ್ಥೆ ನಿರ್ಧರಿಸುವುದಕ್ಕೆ ವ್ಯತ್ಯಾಸ ಇದೆ ಎಂದರು ಅವರು ತಿಳಿಸಿದರು. 

‘ಆಧಾರ್ ಕಾರ್ಡ್ ಅನುಷ್ಟಾನವನ್ನು ಪ್ರಶ್ನಿಸಿ ಸುಪ್ರಿಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಕೋರ್ಟ್ ಅರ್ಜಿ ವಜಾ ಮಾಡಿತು. ಸುಪ್ರೀಂ ತೀರ್ಪು ಬಂದ ಬಳಿಕ ಟಿಲಿಕಾಮ್ ಕಂಪೆನಿಗಳು ಆಧಾರ್ ಕಾರ್ಡ್ ಅನ್ನು ಪಡೆಯುವುದು ಕಡ್ಡಾಯ ಮಾಡಿವೆ. ವಿಳಾಸಕ್ಕಾಗಿ ಮತದಾರರ ಗುರುತಿನ ಚೀಟಿ ಸಾಕಾಗುತ್ತದೆ. ಆದರೆ ಆಧಾರ್ ಸಂಖ್ಯೆಯನ್ನು ಪಡೆಯುತ್ತಿವೆ. ಅಲ್ಲದೆ, ಮತದಾರರ ಗುರುತಿನ ಚೀಟಿ ಆಧಾರ್ ಅನ್ನು ಲಿಂಕ್ ಮಾಡಿ ಕೆಲ ಭಾಗಗಳಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದಿದ್ದಾರೆ’
 -ನವೀನ್ ಮುದುನೂರು, ಎಫ್‍ಎಸ್‍ಎಂಕೆಯ ಪ್ರಧಾನ ಕಾರ್ಯದರ್ಶಿ

share
Next Story
X