Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಯೋಧ್ಯೆ: ರಾಮ ಮಂದಿರವನ್ನು ಸ್ಫೋಟಿಸುವ...

ಅಯೋಧ್ಯೆ: ರಾಮ ಮಂದಿರವನ್ನು ಸ್ಫೋಟಿಸುವ ಬೆದರಿಕೆ ಒಡ್ಡಿದ್ದ ಆರೋಪಿಯ ಬಂಧನ

13 Feb 2023 9:36 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಯೋಧ್ಯೆ: ರಾಮ ಮಂದಿರವನ್ನು ಸ್ಫೋಟಿಸುವ ಬೆದರಿಕೆ ಒಡ್ಡಿದ್ದ ಆರೋಪಿಯ ಬಂಧನ

ಅಯೋಧ್ಯೆ: ಅಯೋಧ್ಯೆ ಹಾಗೂ ದಿಲ್ಲಿ ಮೆಟ್ರೊ ಬಳಿಯಲ್ಲಿನ ರಾಮಜನ್ಮಭೂಮಿ ಸಂಕೀರ್ಣವನ್ನು ಸ್ಫೋಟಿಸುವ ಬೆದರಿಕೆ ಒಡ್ಡಿದ್ದ ಆರೋಪದಲ್ಲಿ ಮಹಾರಾಷ್ಟ್ರ ಮೂಲದ ದಂಪತಿಗಳಾದ ಅನಿಲ್ ರಾಮ್‌ದಾಸ್ ಘೋಕ್ಡೆ ಹಾಗೂ ವಿದ್ಯಾಶಂಕರ್ ಘೋಕ್ಡೆಯನ್ನು ಶುಕ್ರವಾರ ಅಯೋಧ್ಯೆ ಪೊಲೀಸರು ಬಂಧಿಸಿದ್ದಾರೆ ಎಂದು timesofindia.com ವರದಿ ಮಾಡಿದೆ.

ಅಂತರ್ಜಾಲ ಕರೆಯ ಮೂಲಕ ಬೆದರಿಕೆ ಒಡ್ಡಿದ್ದ ಅನಿಲ್, ಆ ಮೊಬೈಲ್ ಸಂಖ್ಯೆಯು ತನ್ನ ಗೆಳತಿಯ ಸಹೋದರನದೆಂದು ಬಿಂಬಿಸಲು ತಂತ್ರಾಂಶವೊಂದನ್ನು ಬಳಸಿದ್ದ. ಈ ಕುರಿತು ಪ್ರತಿಕ್ರಿಯಿಸಿರುವ ಅಯೋಧ್ಯೆ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಎಸ್.ಬಿ.ಗೌತಮ್, ಆನ್‌ಲೈನ್‌ನಲ್ಲಿ ಯುವತಿಯರನ್ನು ಗೆಳತಿಯರನ್ನಾಗಿ ಮಾಡಿಕೊಳ್ಳುತ್ತಿದ್ದ ಅನಿಲ್, ತನ್ನನ್ನು ತಾನು ನವೋದ್ಯಮದಲ್ಲಿ ತೊಡಗಿಸಿಕೊಂಡಿರುವ ಅವಿವಾಹಿತ ಎಂದು ಬಿಂಬಿಸಿಕೊಂಡು, ಅವರನ್ನು ವಿವಾಹವಾಗುವ ಭರವಸೆ ನೀಡಿ, ಅವರಿಂದ ಹಣ ವಸೂಲಿ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದ ಮೂಲಕ ಬಲೆಗೆ ಬೀಳಿಸಿಕೊಂಡಿದ್ದ ದಿಲ್ಲಿಯ ಯುವತಿಯೊಬ್ಬಳಿಗೆ ಅನಿಲ್ ವಿವಾಹಿತ ಎಂಬ ಸಂಗತಿ ತಿಳಿದು, ಅದನ್ನು ತನ್ನ ಪೋಷಕರು ಹಾಗೂ ಸಹೋದರನಿಗೆ ತಿಳಿಸಿದ್ದಳು. ಆಕೆಯ ಸಹೋದರ ಈ ವಿಷಯವನ್ನು ಪೊಲೀಸರಿಗೆ ತಿಳಿಸುವುದಾಗಿ ಅನಿಲ್‌ಗೆ ಬೆದರಿಕೆ ಒಡ್ಡಿದ್ದ. ಇದಾದ ನಂತರ ಅನಿಲ್ ಆತನನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದ್ದ. ಈ ವಿಷಯವನ್ನು ಪೊಲೀಸರಿಗೆ ವರದಿ ಮಾಡಲಿಲ್ಲ ಎಂಬ ಕಾರಣಕ್ಕೆ ಅನಿಲ್ ಪತ್ನಿಯನ್ನೂ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಯೋಧ್ಯೆ ನಿವಾಸಿ ಮನೋಜ್ ಎಂಬುವವರಿಗೆ ಕರೆ ಮಾಡಿದ್ದ ಅನಿಲ್, ಫೆಬ್ರವರಿ 2ರಂದು ರಾಮಜನ್ಮಭೂಮಿ ಮಂದಿರ ಸಂಕೀರ್ಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಒಡ್ಡಿದ್ದ. ಸದನ್ ನಿವಾಸಿಯಾದ ಮನೋಜ್‌ ಅವರು ದಿಲ್ಲಿಯಿಂದ ಸಂಜೆ ಸುಮಾರು 5 ಗಂಟೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯಿಂದ ಆ ಕರೆ ಸ್ವೀಕರಿಸಿದ್ದರು. ಆ ಕರೆಯಲ್ಲಿ, "ಬೆಳಗ್ಗೆ 10 ಗಂಟೆಯೊಳಗೆ ರಾಮಜನ್ಮಭೂಮಿ ಮಂದಿರ ಸಂಕೀರ್ಣವನ್ನು ಸ್ಫೋಟಿಸಲಾಗುವುದು" ಎಂದು ಬೆದರಿಕೆ ಒಡ್ಡಲಾಗಿತ್ತು. ಮನೋಜ್ ಕೂಡಲೇ ಈ ಸಂಗತಿಯನ್ನು ಪೊಲೀಸ್ ನಿಯಂತ್ರಣ ಕೊಠಡಿಯ ಗಮನಕ್ಕೆ ತಂದಿದ್ದ. ನಂತರ ಈ ಮಾಹಿತಿಯನ್ನು ಭಯೋತ್ಪಾದಕ ನಿಗ್ರಹ ದಳ ಹಾಗೂ ವಿಶೇಷ ಕಾರ್ಯಪಡೆ ಸೇರಿದಂತೆ ಹಲವಾರು ಭದ್ರತಾ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಲಾಗಿತ್ತು.

ಪ್ರಕರಣದ ಕುರಿತು ತನಿಖೆ ಕೈಗೊಂಡ ಪೊಲೀಸರು ಹಾಗೂ ಸೈಬರ್ ತಂಡವು ಮೊದಲಿಗೆ ದಿಲ್ಲಿ ವಿಳಾಸವನ್ನು ಪತ್ತೆ ಹಚ್ಚಿದವು. ಅಲ್ಲಿಗೆ ಧಾವಿಸಿದ ತಂಡವು, ಬಿಲಾಲ್ ಅನ್ನು ವಶಕ್ಕೆ ಪಡೆದವು. ತನಿಖೆಯ ನಂತರ ಇದರ ಹಿಂದೆ ಆತನ ಸಹೋದರಿಯ ಗೆಳಯನ ಕೈವಾಡ ಇರುವುದು ಮನದಟ್ಟಾಯಿತು ಎಂದು ವೃತ್ತ ನಿರೀಕ್ಷಕ ಎಸ್.ಬಿ.ಗೌತಮ್ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಯೋಧ್ಯೆ ನಗರದ ಪೊಲೀಸ್ ವರಿಷ್ಠಾಧಿಕಾರಿ ಮಧುಬನ್ ಸಿಂಗ್, "ಅನಿಲ್ ತನ್ನನ್ನು ತಾನು ಮುಸ್ಲಿಂ ಎಂದು ಬಿಂಬಿಸಿಕೊಂಡು ಬಿಲಾಲ್ ಸಹೋದರಿಯನ್ನು ಬಲೆಗೆ ಬೀಳಿಸಿಕೊಂಡಿದ್ದ. ಆಕೆಯಿಂದ ರೂ. 16 ಲಕ್ಷ ಹಣವನ್ನೂ ಪಡೆದಿದ್ದ ಆತ, ಮತ್ತಷ್ಟು ಹಣ ನೀಡುವಂತೆ ಒತ್ತಾಯಿಸುತ್ತಿದ್ದ" ಎಂದು ತಿಳಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದ ನಂತರ ಹಲವಾರು ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದ ಅನಿಲ್‌ನನ್ನು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿರುವ ಅಯೋಧ್ಯೆ ಪೊಲೀಸರು, ಆತನಿಂದ ಒಂಬತ್ತು ಮೊಬೈಲ್ ಫೋನ್‌ಗಳು, ಮೂರು ಆಧಾರ್ ಕಾರ್ಡ್‌ಗಳು, ಪ್ಯಾನ್ ಕಾರ್ಡ್‌ಗಳು, ಆರು ಎಟಿಎಂ ಕಾರ್ಡ್‌ಗಳು, ವಿದ್ಯುನ್ಮಾನ ತಕ್ಕಡಿಗಳು ಹಾಗೂ ವಜ್ರವನ್ನು ಪರೀಕ್ಷಿಸಲು ಬಳಸುವ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X