Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಮಗೆ ಸಾಧ್ಯವಾಗದಿದ್ದರೆ, ‘ಹುಲಿ...

ನಿಮಗೆ ಸಾಧ್ಯವಾಗದಿದ್ದರೆ, ‘ಹುಲಿ ಮದುವೆ’ಗೆ ಅವಕಾಶ ಕೊಡಿ: ಸರಕಾರದ ವಿರುದ್ಧ ಕೆ.ಜಿ.ಬೋಪಯ್ಯ ಆಕ್ರೋಶ

ಸದನದಲ್ಲಿ ಪ್ರಸ್ತಾಪವಾದ ಹುಲಿ ದಾಳಿ ವಿಚಾರ

13 Feb 2023 11:38 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಿಮಗೆ ಸಾಧ್ಯವಾಗದಿದ್ದರೆ, ‘ಹುಲಿ ಮದುವೆ’ಗೆ ಅವಕಾಶ ಕೊಡಿ: ಸರಕಾರದ ವಿರುದ್ಧ ಕೆ.ಜಿ.ಬೋಪಯ್ಯ ಆಕ್ರೋಶ
ಸದನದಲ್ಲಿ ಪ್ರಸ್ತಾಪವಾದ ಹುಲಿ ದಾಳಿ ವಿಚಾರ

ಬೆಂಗಳೂರು, ಫೆ. 13: ‘ಹುಲಿ ನಿಯಂತ್ರಣ ಮಾಡಲು ನಿಮಗೆ(ಸರಕಾರಕ್ಕೆ) ಸಾಧ್ಯವಾಗದಿದ್ದರೆ, ನಾವು ನಿಯಂತ್ರಣ ಮಾಡಿಕೊಳ್ಳುತ್ತೇವೆ. ಕೊಡಗಿನವರಿಗೆ ಹುಲಿ ಮದುವೆ ಮಾಡಿಕೊಳ್ಳುವುದು ಗೊತ್ತು. ಹೀಗಾಗಿ ಅದಕ್ಕೆ ಅವಕಾಶ ಕೊಡಿ’ ಎಂದು ಬಿಜೆಪಿ ಹಿರಿಯ ಸದಸ್ಯ ಕೆ.ಜಿ.ಬೋಪಯ್ಯ ಸರಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಸೋಮವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ಬೋಪಯ್ಯ, ‘ಕೇರಳ ಗಡಿಭಾಗ ವಿರಾಜಪೇಟೆ ತಾಲೂಕಿನ ಕೆ.ಬಾಡಗ ಗ್ರಾಮದಲ್ಲಿ ನಿನ್ನೆ ಸಂಜೆ 12 ವರ್ಷದ ಬಾಲಕನನ್ನು ಕೊಂದು ತಿಂದಿದೆ. ಇಂದು(ಫೆ.13) ಬೆಳಗಿನಜಾವ ಪುನಃ ಬಾಲಕನ ತಾತನನ್ನು ಹುಲಿ ಕೊಂದಿದೆ. 24 ಗಂಟೆಗಳಲ್ಲಿ ಇಬ್ಬರನ್ನು ಹುಲಿ ಕೊಂದು ಹಾಕಿದ್ದು, ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’ ಎಂದು ದೂರಿದರು.

‘ನಿಮ್ಮ(ಸರಕಾರ) ಕೈಯಲ್ಲಿ ಆಗುವುದಿಲ್ಲ ಎಂದು ನಮಗೆ ಬಿಟ್ಟುಬಿಡಿ, ಹುಲಿ ನಿಯಂತ್ರಣ ಮಾಡುವುದು ನಮಗೆ ಗೊತ್ತು. ನಮ್ಮಲ್ಲಿ ಹುಲಿ ಮದುವೆ ಮಾಡಿಕೊಳ್ಳುವ ಪದ್ಧತಿ ಇದೆ. ಹೀಗಾಗಿ ನಾವು ಆ ಕೆಲಸಕ್ಕೆ ಮುಂದಾಗುವ ಮೊದಲು ಹುಲಿ ನಿಯಂತ್ರಣ ಮಾಡಬೇಕು. ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿನ ಕೂಲಿ ಕಾರ್ಮಿಕರು ಕೈಯಲ್ಲಿ ಜೀವ ಹಿಡಿದು ಬದುಕಬೇಕಿದೆ’ ಎಂದು ಬೋಪಯ್ಯ ಗಮನ ಸೆಳೆದರು. 

ಇದನ್ನೂ ಓದಿ: ಕೊಡಗು: ಹುಲಿ ದಾಳಿಯಿಂದ ಮತ್ತೋರ್ವ ಮೃತ್ಯು, ಕಳೆದ 24 ಗಂಟೆಗಳಲ್ಲಿ ಇಬ್ಬರನ್ನು ಬಲಿ ಪಡೆದ ವ್ಯಾಘ್ರ

‘ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಇಬ್ಬರು ಕೂಲಿ ಕಾರ್ಮಿಕರು ಬಲಿಯಾಗಿದ್ದಾರೆ. ಹೀಗಾಗಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಕೂಡಲೇ ಅಮಾನತ್ತು ಮಾಡಬೇಕು. ಮೃತಪಟ್ಟವರಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿಗಳ ಹಾವಳಿ ತಡೆಗೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಬೋಪಯ್ಯ ಆಗ್ರಹಿಸಿದರು.

ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಸದಸ್ಯ ಅಪ್ಪಚ್ಚು ರಂಜನ್, ‘ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಕೃತ್ಯ ನಡೆದಿದ್ದು, ಕೂಡಲೇ ಡಿಎಫ್‍ಒ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಎಚ್.ಪಿ.ಮಂಜುನಾಥ್, ‘ಮೃತಪಟ್ಟ ಬಾಲಕ ಹಾಗೂ ಆತನ ತಾತ ನನ್ನ ಕ್ಷೇತ್ರದವರು. ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ಸುದ್ದಿ ಕೇಳಿದ ಆಘಾತದಿಂದ ಅವರ ಅಜ್ಜಿಯೂ ತೀರಿಕೊಂಡಿದ್ದಾರೆ’ ಎಂದು ಗಮನ ಸೆಳೆದರು.

ಹುಲಿ ಯಾವ ತಾಲೂಕಿನದ್ದು?: ‘ಹುಲಿ ನಿಮ್ಮ ತಾಲೂಕಿನದ್ದೋ ಅಥವಾ ಬೇರೆ ತಾಲೂಕಿನದ್ದೋ’ ಎಂದು ಸ್ಪೀಕರ್ ಕಾಗೇರಿ ಪ್ರಶ್ನಿಸಿದರು. ಬಳಿಕ ಮಾತು ಮುಂದುವರಿಸಿದ ಮಂಜುನಾಥ್, ‘ಹುಲಿ ಸರಕಾರದ್ದು, ಆದರೆ ಸತ್ತವರು ನಮ್ಮ ತಾಲೂಕಿನವರು. ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಇದೆ. ಹೀಗಾಗಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಅರಣ್ಯದಂಚಿನ ಗ್ರಾಮಗಳಲ್ಲಿನ ವನ್ಯಜೀವಿಗಳ ಹಾವಳಿ ತಡೆಗೆ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದರು.

ಬಳಿಕ ಸರಕಾರದ ಪರವಾಗಿ ಪ್ರತಿಕ್ರಿಯಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ‘ಯಾವುದೇ ಹಂತದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ ಬಳಿಕ ಅವರೊಂದಿಗೆ ಸಮಾಲೋಚನೆ ನಡೆಸಿ, ಇಲಾಖೆಯಿಂದ ಮಾಹಿತಿ ಪಡೆದು ಸದನಕ್ಕೆ ಸೂಕ್ತ ಉತ್ತರ ನೀಡಲಾಗುವುದು’ ಎಂದು ಭರವಸೆ ನೀಡಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X