Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಡಿಗೆರೆ | ಮನೆ ಕಳ್ಳತನ ಪ್ರಕರಣ: ಮನೆ...

ಮೂಡಿಗೆರೆ | ಮನೆ ಕಳ್ಳತನ ಪ್ರಕರಣ: ಮನೆ ಮಾಲಕನ ಸಹೋದರನನ್ನೇ ಠಾಣೆಗೆ ಕರೆದೊಯ್ದು ಥಳಿಸಿದ ಪೊಲೀಸರು; ಆರೋಪ

ಪೊಲೀಸರ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರ ಆಗ್ರಹ

13 Feb 2023 8:02 PM IST
share
ಮೂಡಿಗೆರೆ | ಮನೆ ಕಳ್ಳತನ ಪ್ರಕರಣ: ಮನೆ ಮಾಲಕನ ಸಹೋದರನನ್ನೇ ಠಾಣೆಗೆ ಕರೆದೊಯ್ದು ಥಳಿಸಿದ ಪೊಲೀಸರು; ಆರೋಪ
ಪೊಲೀಸರ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರ ಆಗ್ರಹ

ಮೂಡಿಗೆರೆ, ಫೆ.13: ಕಳ್ಳತನದ ಆರೋಪದ ದೂರಿನನ್ವಯ ಪಟ್ಟಣ ಠಾಣೆಯ ಪೊಲೀಸರು ಫೆ.9ರಂದು ತಾಲೂಕಿನ ದಾರದಹಳ್ಳಿ ಗ್ರಾಮದ ಮಂಜು ಅವರನ್ನು ಠಾಣೆಗೆ ಕರೆದೊಯ್ದು ಮನಬಂದಂತೆ ಥಳಿಸಿದ್ದಾರೆಂದು ಆರೋಪಿಸಿ ಹಲ್ಲೆಗೊಳಗಾದ  ಮಂಜು ಪತ್ನಿ ಪೊಲೀಸರ ವಿರುದ್ಧವೇ ವೃತ್ತ ನಿರೀಕ್ಷಕರಿಗೆ ದೂರು ನೀಡಿರುವ ಘಟನೆ ಸೋಮವಾರ ವರದಿಯಾಗಿದೆ.

ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ಕಳೆದ 3 ದಿನಗಳ ಹಿಂದೆ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಈ ಸಂಬಂಧ ಮನೆ ಮಾಲಕ ವಿಶ್ವನಾಥ್ ಎಂಬವರು ಮೂಡಿಗೆರೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಮನೆಯ ಚೀಲಕ ಹಾಗೂ ಮನೆಯೊಳಗಿರುವ ಕೆಲ ವಸ್ತುಗಳ ಮೇಲಿರುವ ಹೆಬ್ಬೆರಳಿನ ಗುರುತು ಪರೀಕ್ಷೆ ನಡೆಸಿದಾಗ ಪಕ್ಕದ ಮನೆಯಲ್ಲಿಯೇ ವಾಸವಾಗಿದ್ದ ವಿಶ್ವನಾಥ್ ಸಹೋದರ ಮಂಜು ಅವರ 2 ಬೆರಳಚ್ಚಿನ ಗುರುತು ಮನೆ ಮುಂಭಾಗದ ಚಿಲಕದಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಈ ಹಿನ್ನೆಲ್ಲೆಯಲ್ಲಿ ಮಂಜು ಅವರನ್ನು ಠಾಣೆಗೆ ಕರೆದೊಯ್ದ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿ, ನಂತರ ಮನೆಗೆ ಕಳುಹಿಸಿದ್ದಾರೆ. ಪೊಲೀಸರ ಪೆಟ್ಟು ತಿಂದು ಅಸ್ವಸ್ಥರಾಗಿದ್ದ ಮಂಜು ಅವರನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ಘಟನೆ ಸಂಬಂಧ ಮಂಜು ಅವರ ಪತ್ನಿ ಯಶೋಧ ಅವರು ಮೂಡಿಗೆರೆ ಸಿಪಿಐ ಅವರಿಗೆ ಸೋಮವಾರ ದೂರು ನೀಡಿ, ಸಂಬಂಧವಿಲ್ಲದ ವಿಚಾರಕ್ಕೆ ಸಹಿ ಹಾಕಬೇಕೆಂದು ಒತ್ತಾಯಿಸಿ ತನ್ನ ಪತಿ ಮಂಜು ಅವರನ್ನು ಮೂಡಿಗೆರೆ ಪೊಲೀಸರು ಠಾಣೆಗೆ ಕರೆದೊಯ್ದಿದ್ದರು. ಠಾಣೆಯಲ್ಲಿ ಪಿಎಸ್ಸೈ ಆದರ್ಶ, ಸಿಬ್ಬಂದಿ ಲೋಹಿತ್ ಮತ್ತು ವಸಂತ ಎಂಬವರ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಬೂಟು ಕಾಲಿನಿಂದ ಎದೆಗೆ ಒದ್ದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದರಿಂದ ನನ್ನ ಪತಿ ಮಂಜು ನಡೆದಾಡಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಪೊಲೀಸರ ಹಲ್ಲೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ರಕ್ಷಣೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

[ಮಂಜು ಪತ್ನಿ ಯಶೋಧ ಮೂಡಿಗೆರೆ ಸಿಪಿಐಗೆ ನೀಡಿದ ದೂರಿನ ಪ್ರತಿ] 

ಮಂಜು ಪತ್ನಿ ಸಿಪಿಐಗೆ ದೂರು ನೀಡಿದ್ದರೂ ಇದುವರೆಗೂ ಪೊಲೀಸರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ ಎಂದು ತಿಳಿದು ಬಂದಿದೆ. ಈ ಮಧ್ಯೆ ಮನೆ ಕಳ್ಳತನ ಪ್ರಕರಣ ಸಂಬಂಧ ದೂರು ನೀಡಿದ್ದ ವಿಶ್ವನಾಥ್, ತನ್ನ ಸಹೋದರ ಕಳ್ಳತನ ಮಾಡಲು ಸಾಧ್ಯವೇ ಇಲ್ಲ. ನೈಜ ಕಳ್ಳರನ್ನು ಹುಡುಕಿಕೊಡಬೇಕೆಂದು ಪೊಲೀಸರನ್ನು ಒತ್ತಾಯಿಸಿದ್ದು, ಸಹೋದರನನ್ನು ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಹಲ್ಲೆ ಮಾಡಿರುವ ಪೊಲೀಸರು ಪ್ರಕರಣ ಮುಚ್ಚಿ ಹಾಕುವ ಎಲ್ಲಾ ತಂತ್ರ ನಡೆಸುತ್ತಿದ್ದಾರೆ. ಇದಕ್ಕೆ  ಜಿಲ್ಲಾ ವರಿಷ್ಠಾಧಿಕಾರಿ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ. 

share
Next Story
X