Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುವೇಂದು ಅಧಿಕಾರಿ ಸದನದಿಂದ...

ಸುವೇಂದು ಅಧಿಕಾರಿ ಸದನದಿಂದ ಅಮಾನತುಗೊಳ್ಳುವುದನ್ನು ರಕ್ಷಿಸಿದ ಮಮತಾ ಬ್ಯಾನರ್ಜಿ: ವ್ಯಾಪಕ ಚರ್ಚೆ

14 Feb 2023 12:39 PM IST
share
ಸುವೇಂದು ಅಧಿಕಾರಿ ಸದನದಿಂದ ಅಮಾನತುಗೊಳ್ಳುವುದನ್ನು ರಕ್ಷಿಸಿದ ಮಮತಾ ಬ್ಯಾನರ್ಜಿ: ವ್ಯಾಪಕ ಚರ್ಚೆ

ಕೋಲ್ಕತ್ತಾ: ವಿರೋಧ ಪಕ್ಷ ನಾಯಕ ಸುವೇಂದು ಅಧಿಕಾರಿಯನ್ನು ಸದನದಿಂದ ಅಮಾನತುಗೊಳಿಸಲು ಮುಂದಾಗಿದ್ದ ಸ್ಪೀಕರ್ ಕ್ರಮವನ್ನು ತಡೆ ಹಿಡಿದು, ಅವರ ಪರವಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪೀಕರ್ ಕ್ಷಮೆ ಯಾಚಿಸಿದ ಘಟನೆ ಮಂಗಳವಾರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಡೆದಿದೆ. ಸ್ಪೀಕರ್ ವಿರುದ್ಧ ಸುವೇಂದು ಅಧಿಕಾರಿ ಬಳಸಿದ ಆಕ್ಷಪಾರ್ಹ ಮಾತಿಗೆ ಪ್ರತಿಯಾಗಿ ಸ್ಪೀಕರ್ ಕ್ಷಮೆ ಕೋರಿದ ಅವರು, ಒಂದು ಕಾಲದ ತಮ್ಮ ನಿಕಟವರ್ತಿಯಾಗಿದ್ದು, ಈಗ ರಾಜಕೀಯ ಪ್ರತಿಸ್ಪರ್ಧಿಯಾಗಿ ಬದಲಾಗಿರುವ ಸುವೇಂದ್ರ ಅಧಿಕಾರಿಯನ್ನು ಸದನದಿಂದ ಅಮಾನತುಗೊಳಿಸುವ ಶಿಕ್ಷೆಯಿಂದ ಪಾರು ಮಾಡಿದ ನಡವಳಿಕೆಯು ರಾಜಕೀಯ ಪಡಸಾಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ, ಈ ಸಂದರ್ಭದಲ್ಲಿ ಅವರು ಸುವೇಂದು ಅಧಿಕಾರಿಯ ವಿರುದ್ಧ ಯಾವುದೇ ಕಠಿಣ ಟೀಕಾ ಪ್ರಹಾರ ನಡೆಸಲಿಲ್ಲ.

"ವಿರೋಧ ಪಕ್ಷದ ನಾಯಕನ ನಡವಳಿಕೆಯು ಎಷ್ಟು ನಾಚಿಕೆಗೇಡಾಗಿದೆ? ಇದನ್ನೇ ಅವರು ಯಾವಾಗಲೂ ಮಾಡುವುದು. ಅವರು ಇಂತಹ ಭಾಷೆಯನ್ನು ಎಲ್ಲ ಕಡೆಯೂ ಬಳಸುತ್ತಾರೆ. ನಮ್ಮ ವಿರುದ್ಧ ಕೂಡಾ. ಅವರ ಪರವಾಗಿ ನಾನು ಕ್ಷಮಾಪಣೆ ಕೋರುತ್ತೇನೆ. ದಯವಿಟ್ಟು ಆತನನ್ನು ಕ್ಷಮಿಸಿ, ಅವರನ್ನು ಕ್ಷಮಿಸಿ" ಎಂದು ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ಚರ್ಚೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದರು.

ಸುವೇಂದು ಅಧಿಕಾರಿ ಅವರು ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ದ ಮಾಡಿದ ನಿಧಿ ದುರ್ಬಳಕೆ, ಆರೋಪವು ಕಡತದಲ್ಲಿ ದಾಖಲಾಗದಂತೆ ಸ್ಪೀಕರ್ ಬಿಮನ್ ಬ್ಯಾನರ್ಜಿ ತಡೆ ಹಿಡಿದರು. ಇದರಿಂದ ತಮ್ಮ ತಾಳ್ಮೆ ಕಳೆದುಕೊಂಡ ಸುವೇಂದು ಅಧಿಕಾರಿ, ಬಿಜೆಪಿ ಶಾಸಕರೊಂದಿಗೆ ಸಭಾತ್ಯಾಗ ಮಾಡಿದರು.

ಈ ಸಂದರ್ಭದಲ್ಲಿ ಸುವೇಂದು ಅಧಿಕಾರಿ ಆಡಿದ ಮಾತು ಬಿಜೆಪಿ ಶಾಸಕರ ಗದ್ದಲದ ನಡುವೆ ಸಮರ್ಪಕವಾಗಿ ಕೇಳಿಸದಿದ್ದರೂ, ಸ್ಪೀಕರ್ ಕಾರ್ಯವೈಖರಿ ವಿರುದ್ಧದ ಟೀಕೆಯು ಹಕ್ಕು ಚ್ಯುತಿ ನಿರ್ಣಯವನ್ನು ಆಹ್ವಾನಿಸುತ್ತದೆ ಎಂದು ಬಿಮನ್ ಬ್ಯಾನರ್ಜಿ ಎಚ್ಚರಿಸಿದರು. "ನಾನು ವಿರೋಧ ಪಕ್ಷದ ನಾಯಕನ ವಿರುದ್ಧ ಹಕ್ಕು ಚ್ಯುತಿ ಮಂಡಿಸುವ ಹಕ್ಕನ್ನು ಕಾಯ್ದಿರಿಸಿದ್ದೇನೆ" ಎಂದೂ ಅವರು ಹೇಳಿದರು.

ಸಭಾತ್ಯಾಗದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸದನವನ್ನುದ್ದೇಶಿಸಿ ಮಾತನಾಡಿದರು. ನಂತರ ಉಪ ಮುಖ್ಯ ಸಚೇತಕ ತಪಸ್ ರಾಯ್, ಸುವೇಂದು ಅಧಿಕಾರಿಯನ್ನು ಫೆ. 20ರವರೆಗೆ ಅಮಾನತುಗೊಳಿಸುವ ನಿರ್ಣಯ ಮಂಡಿಸಿದರು. ಆಗ ಸ್ಪೀಕರ್ ಅವರು ಮಮತಾ ಬ್ಯಾನರ್ಜಿಯವರ ಕ್ಷಮಾಪಣಾ ಮನವಿಯನ್ನು ಗಮನಕ್ಕೆ ತಂದರು.

ಈ ಕುರಿತು ಸುವೇಂದು ಅಧಿಕಾರಿಯನ್ನು ಸುದ್ದಿಗಾರರು ಪ್ರಶ್ನಿಸಿದಾಗ, "ಅವರಿಗೆ ಒಳ್ಳೆ ಪ್ರಜ್ಞೆ ಮೂಡುವಂತಾಗಲಿ. ನನ್ನ ಮಾತು ಕೇಳಿ. ಅವರು ಕೇಳಿಸಿಕೊಂಡರೆ ಅದರಿಂದ ಬಂಗಾಳಕ್ಕೆ ನಷ್ಟವೇನೂ ಆಗುವುದಿಲ್ಲ, ಬದಲಿಗೆ ಲಾಭವೇ ಆಗಲಿದೆ" ಎಂದು ಉತ್ತರಿಸಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಈ ಅಚ್ಚರಿಯ ನಡೆಯು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ತಮ್ಮ ಹಿಂದಿನ ನಿಕಟವರ್ತಿ ಸುವೇಂದು ಅಧಿಕಾರಿ ವಿರುದ್ಧ ಮೃದು ಧೋರಣೆ ತಳೆದಿರುವ ಮಮತಾ ಬ್ಯಾನರ್ಜಿ, ಅವರನ್ನು ಮತ್ತೆ ತಮ್ಮ ತೆಕ್ಕೆಗೆ ಸೆಳೆದುಕೊಳ್ಳಲಿದ್ದಾರೆಯೇ ಎಂಬ ಪ್ರಶ್ನೆಯನ್ನು ಸಾರ್ವಜನಿಕರಲ್ಲಿ ಮೂಡಿಸಿದೆ.

share
Next Story
X